ಹಾಸನ: ಐದನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಯೋಗ ನಡಿಗೆಗೆ ಉತ್ತಮ ಪ್ರತ್ರಿಕ್ರಿಯೆ ವ್ಯಕ್ತವಾಯಿತು.
ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಎಸ್ ಡಿಎಂ ಆಯುರ್ವೇದ ಕಾಲೇಜು, ಕೆಎಂಎಫ್, ನೆಹರು ಯುವ ಕೇಂದ್ರ, ಪತಂಜಲಿ ಯೋಗ ಸಮಿತಿ, ಯೋಗ ಸಂಘಗಳು ಹಾಗೂ ಜಿಲ್ಲಾ ಯೋಗ ಒಕ್ಕೂಟದ ಆಶ್ರಯದಲ್ಲಿ ಯೋಗ ಜನ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಕೆ.ಎನ್.ವಿಜಯ್ ಪ್ರಕಾಶ್ ಚಾಲನೆ ನೀಡಿದರು.