<p><strong>ಚನ್ನರಾಯಪಟ್ಟಣ</strong>: ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿಯನ್ನು ವಿಸರ್ಜಿಸಲು ಅನುಕೂಲವಾಗುವಂತೆ ನಾಲ್ಕು ಕಡೆ ವಾಹನದಲ್ಲಿ ಅಳವಡಿಸಿದ್ದ ಮೊಬೈಲ್ ತೊಟ್ಟಿಯಲ್ಲಿ ಶನಿವಾರ ಸಂಜೆ ಭಕ್ತರು ಗಣಪತಿ ವಿಸರ್ಜಿಸಿದರು.</p>.<p>ಕೋಟೆಪ್ರದೇಶ, ಮೈಸೂರುರಸ್ತೆ, ಗಾಂಧಿವೃತ್ತ ಮತ್ತು ರಾಘವೇಂದ್ರ ಸಾ ಮಿಲ್ ರಸ್ತೆ ಭಾಗದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಶನಿವಾರ ಸಂಜೆ 4 ರಿಂದ ರಾತ್ರಿ 11ವರೆಗೆ ಮೂರ್ತಿ ವಿಸರ್ಜನೆ ಮಾಡಲಾಯಿತು. ದೊಡ್ಡಗಣಪತಿ ಮೂರ್ತಿ ವಿಸರ್ಜಿಸಲು ಅಮಾನಿಕೆರೆ ಅಂಚಿನಲ್ಲಿ ಹೊಂಡ ನಿರ್ಮಿಸಿ ಸುತ್ತಲೂ ಬ್ಯಾರಿಕೇಡ್ ಅಳವಡಿಸಲಾಗಿದೆ. ದೊಡ್ಡ ಪ್ರಮಾಣದ ಗಣಪತಿ ಮೂರ್ತಿಯನ್ನು ವಿಸರ್ಜಿಸಲು ಒಂದು ತಿಂಗಳು ಅವಕಾಶ ಇದೆ.</p>.<p>ಪುರಸಭೆಯ ಅಧ್ಯಕ್ಷೆ ಕೆ.ಎನ್. ಬನಶಂಕರಿ ಮಾತನಾಡಿ, ‘ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ)ಗಣಪತಿ ಪ್ರತಿಷ್ಟಾಪನೆ ಮಾಡುವುದರಿಂದ ಪರಿಸರ ಮತ್ತು ಆರೋಗ್ಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಪಿಒಪಿ ಗಣಪತಿ ಪ್ರತಿಷ್ಠಾಪನೆ ಮಾಡಲು ಸರ್ಕಾರ ಅವಕಾಶ ಒದಗಿಸಿಲ್ಲ.</p>.<p>‘ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದಂತೆ ತಡೆಯುವುದು, ಸ್ವಚ್ಛತೆ ಕಾಪಾಡುವುದು ಸೇರಿದಂತೆ ಜಲಮೂಲ ಸಂರಕ್ಷಿಸುವುದು ಇದರ ಉದ್ದೇಶ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ</strong>: ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿಯನ್ನು ವಿಸರ್ಜಿಸಲು ಅನುಕೂಲವಾಗುವಂತೆ ನಾಲ್ಕು ಕಡೆ ವಾಹನದಲ್ಲಿ ಅಳವಡಿಸಿದ್ದ ಮೊಬೈಲ್ ತೊಟ್ಟಿಯಲ್ಲಿ ಶನಿವಾರ ಸಂಜೆ ಭಕ್ತರು ಗಣಪತಿ ವಿಸರ್ಜಿಸಿದರು.</p>.<p>ಕೋಟೆಪ್ರದೇಶ, ಮೈಸೂರುರಸ್ತೆ, ಗಾಂಧಿವೃತ್ತ ಮತ್ತು ರಾಘವೇಂದ್ರ ಸಾ ಮಿಲ್ ರಸ್ತೆ ಭಾಗದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಶನಿವಾರ ಸಂಜೆ 4 ರಿಂದ ರಾತ್ರಿ 11ವರೆಗೆ ಮೂರ್ತಿ ವಿಸರ್ಜನೆ ಮಾಡಲಾಯಿತು. ದೊಡ್ಡಗಣಪತಿ ಮೂರ್ತಿ ವಿಸರ್ಜಿಸಲು ಅಮಾನಿಕೆರೆ ಅಂಚಿನಲ್ಲಿ ಹೊಂಡ ನಿರ್ಮಿಸಿ ಸುತ್ತಲೂ ಬ್ಯಾರಿಕೇಡ್ ಅಳವಡಿಸಲಾಗಿದೆ. ದೊಡ್ಡ ಪ್ರಮಾಣದ ಗಣಪತಿ ಮೂರ್ತಿಯನ್ನು ವಿಸರ್ಜಿಸಲು ಒಂದು ತಿಂಗಳು ಅವಕಾಶ ಇದೆ.</p>.<p>ಪುರಸಭೆಯ ಅಧ್ಯಕ್ಷೆ ಕೆ.ಎನ್. ಬನಶಂಕರಿ ಮಾತನಾಡಿ, ‘ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ)ಗಣಪತಿ ಪ್ರತಿಷ್ಟಾಪನೆ ಮಾಡುವುದರಿಂದ ಪರಿಸರ ಮತ್ತು ಆರೋಗ್ಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಪಿಒಪಿ ಗಣಪತಿ ಪ್ರತಿಷ್ಠಾಪನೆ ಮಾಡಲು ಸರ್ಕಾರ ಅವಕಾಶ ಒದಗಿಸಿಲ್ಲ.</p>.<p>‘ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದಂತೆ ತಡೆಯುವುದು, ಸ್ವಚ್ಛತೆ ಕಾಪಾಡುವುದು ಸೇರಿದಂತೆ ಜಲಮೂಲ ಸಂರಕ್ಷಿಸುವುದು ಇದರ ಉದ್ದೇಶ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>