<p><strong>ಹಿರೀಸಾವೆ</strong>: ಮೊಸಳೆ ಹೊಸಹಳ್ಳಿಯ ಗಣೇಶ ಮೆರವಣಿಗೆಯಲ್ಲಿ ಗಾಯಗೊಂಡು, ಖಾಸಗಿ ಆಸ್ಪತೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವವರು ಪೋಷಕರು ಹಣ ಕಟ್ಟಲು ಪರದಾಡುತ್ತಿದ್ದಾರೆ. ಮುಖ್ಯಮಂತ್ರಿ ಮಾನವೀಯತೆಯಿಂದ ಸಹಾಯ ಮಾಡಬೇಕು ಎಂದು ಮನವಿ ಮಾಡುವುದಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.</p>.<p>ಮಂಗಳವಾರ ಇಲ್ಲಿನ ಕಾಲೇಜು ರಸ್ತೆಯಲ್ಲಿ ಭಗತ್ ಸಿಂಗ್ ಬಾಯ್ಸ್ ಅವರ ಗೌರಿ ಗಣೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ಮೂಲಕ ಮನವೀಯತೆ ಪ್ರದರ್ಶನ ಮಾಡಬೇಕು ಎಂದರು.</p>.<p>ಕಸುಬು, ವೃತ್ತಿ ಆಧಾರದಲ್ಲಿ ಜಾತಿ ಹುಟ್ಟಿದ್ದು. ಜಾತಿಗೆ ಮುಂಚೆ ಇದ್ದಿದ್ದು ವರ್ಣಾಶ್ರಮ. ಹಿಂದೂ ಸಮಾಜವನ್ನು ದುರ್ಬಲಗೊಳಿಸುವ ಷಡ್ಯಂತ್ರ ನಡೆದಿದೆ. ಈ ಬಗ್ಗೆ ನಾವುಗಳು ಒಟ್ಟಾಗದಿದ್ದರೆ, ದೇಶ, ಧರ್ಮ ಮತ್ತು ನಾವು ಉಳಿಯುವುದಿಲ್ಲ ಎಂದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರ್, ಮುಖಂಡ ಚಿದಾನಂದ್, ಹರ್ಷ, ಎಚ್.ಆರ್. ಬಾಲಕೃಷ್ಣ ಮತ್ತು ಹಿರೀಸಾವೆ ಭಗತ್ ಸಿಂಗ್ ಬಾಯ್ಸ್ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೀಸಾವೆ</strong>: ಮೊಸಳೆ ಹೊಸಹಳ್ಳಿಯ ಗಣೇಶ ಮೆರವಣಿಗೆಯಲ್ಲಿ ಗಾಯಗೊಂಡು, ಖಾಸಗಿ ಆಸ್ಪತೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವವರು ಪೋಷಕರು ಹಣ ಕಟ್ಟಲು ಪರದಾಡುತ್ತಿದ್ದಾರೆ. ಮುಖ್ಯಮಂತ್ರಿ ಮಾನವೀಯತೆಯಿಂದ ಸಹಾಯ ಮಾಡಬೇಕು ಎಂದು ಮನವಿ ಮಾಡುವುದಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.</p>.<p>ಮಂಗಳವಾರ ಇಲ್ಲಿನ ಕಾಲೇಜು ರಸ್ತೆಯಲ್ಲಿ ಭಗತ್ ಸಿಂಗ್ ಬಾಯ್ಸ್ ಅವರ ಗೌರಿ ಗಣೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ಮೂಲಕ ಮನವೀಯತೆ ಪ್ರದರ್ಶನ ಮಾಡಬೇಕು ಎಂದರು.</p>.<p>ಕಸುಬು, ವೃತ್ತಿ ಆಧಾರದಲ್ಲಿ ಜಾತಿ ಹುಟ್ಟಿದ್ದು. ಜಾತಿಗೆ ಮುಂಚೆ ಇದ್ದಿದ್ದು ವರ್ಣಾಶ್ರಮ. ಹಿಂದೂ ಸಮಾಜವನ್ನು ದುರ್ಬಲಗೊಳಿಸುವ ಷಡ್ಯಂತ್ರ ನಡೆದಿದೆ. ಈ ಬಗ್ಗೆ ನಾವುಗಳು ಒಟ್ಟಾಗದಿದ್ದರೆ, ದೇಶ, ಧರ್ಮ ಮತ್ತು ನಾವು ಉಳಿಯುವುದಿಲ್ಲ ಎಂದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರ್, ಮುಖಂಡ ಚಿದಾನಂದ್, ಹರ್ಷ, ಎಚ್.ಆರ್. ಬಾಲಕೃಷ್ಣ ಮತ್ತು ಹಿರೀಸಾವೆ ಭಗತ್ ಸಿಂಗ್ ಬಾಯ್ಸ್ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>