ಕೇದಾರೇಶ್ವರ ಹಾಗೂ ಜೈನ ದೇಗುಲಕ್ಕೆ ಪ್ರವೇಶ ಕಲ್ಪಿಸುವ ಈ ರಸ್ತೆಯಲ್ಲಿ ಸಂಚರಿಸುವ ಪ್ರವಾಸಿಗರು ಅಸಹ್ಯ ಪಡುವಂತಾಗಿದೆ. ಅಲ್ಲದೇ ಶಾಲೆಯ ಮುಂಭಾಗದ ರಸ್ತೆ ಬದಿಯಲ್ಲಿ ಗೂಡಂಗಡಿಗಳು ತಲೆ ಎತ್ತುತ್ತಿರುವುದರಿಂದ ಕಸದ ರಾಶಿಯೂ ಹೆಚ್ಚಾಗುತ್ತಿದೆ. ಹಳೆಯ ಬಾಟಲಿ, ಪ್ಲಾಸ್ಟಿಕ್, ಗುಜರಿ ಸಾಮಗ್ರಿ ಸಂಗ್ರಹ ಮಾಡಲಾಗುತ್ತಿದೆ. ಶಾಲಾ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಇಲ್ಲದಂತಾಗಿದೆ.