ಹಾಸನ: ಹೊಳೆನರಸೀಪುರ ತಾಲ್ಲೂಕಿನ ಚಾಕೇನಹಳ್ಳಿ ಕಟ್ಟೆ ಗ್ರಾಮದ ಸ್ಫೋಟಕ ಸಂಗ್ರಹಿಸುವ ಗೋದಾಮಿನ ಬಳಿ ಭಾನುವಾರ ಜಿಲಿಟಿನ್ ಸ್ಫೋಟಿಸಿ, ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಗುರುವಾರ ಮೃತಪಟ್ಟಿದ್ದಾರೆ.
ಚಾಕೇನಹಳ್ಳಿ ಗ್ರಾಮದ ನಟರಾಜ್ ಅವರು ಬೆಂಗಳೂರಿನ ಆಸ್ಪತ್ರೆಯ ಲ್ಲಿ ಸಾವಿಗೀಡಾಗಿದ್ದಾರೆ. ಇಡೀ ಪ್ರಕರಣದಲ್ಲಿ ಆರೋಪಿಯೂ ಸೇರಿ ಮೂರು ಮಂದಿ ಮೃತಪಟ್ಟಿದ್ದಾರೆ.
ಘಟನೆ ನಡೆದ ದಿನ ಶ್ರವಣಬೆಳಗೊಳ ಹೋಬಳಿಯ ಬೆಟ್ಟದಹಳ್ಳಿ ಗ್ರಾಮದ ಸಂಪತ್ (27) ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದರು.
ನಾಪತ್ತೆಯಾಗಿರುವ ಗೋದಾಮಿನ ಮಾಲೀಕ ನಾಗೇಶ್ ಪತ್ತೆಗೆ ತಂಡ ರಚಿಸಲಾಗಿದೆ.