<p><strong>ಹಾಸನ</strong>: ‘ಎಲ್ಲರೊಂದಿಗೆ ಒಂದಾಗಿ ಬದುಕುವ ರೂಢಿ ಮಾಡಿಕೊಂಡರೆ ಮಾತ್ರ ಸಂವಿಧಾನಕ್ಕೆ ನಿಜವಾದ ಬೆಲೆ ಕೊಟ್ಟಂತಾಗುತ್ತದೆ. ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಗೌರವ ನೀಡಿ, ರಾಜ್ಯಗಗಳ ತೆರಿಗೆ ಪಾಲನ್ನು ಸಮರ್ಪಕವಾಗಿ ನೀಡುವ ಮೂಲಕ ರಾಜ್ಯಗಳ ಆರ್ಥಿಕ ಪ್ರಗತಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ನಗರದ ಜಿಲ್ಲಾ ಹಾಕಿ ಕ್ರೀಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನವು ಕೂಡಿ ಬದುಕುವ ಸಂದೇಶ ನೀಡಿದ್ದರೂ, ಅದನ್ನು ಇಂದಿನ ದಿನಗಳಲ್ಲಿ ಬಹುತೇಕ ಪಾಲಿಸಲಾಗುತ್ತಿಲ್ಲ. ಸಂವಿಧಾನ ಯಶಸ್ವಿ ಆಗಬೇಕಾದರೆ ಎಲ್ಲರೂ ಅದರ ರಕ್ಷಣೆಗೆ ನಿಲ್ಲಬೇಕು ಎಂದರು.</p>.<p>ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಹಲವು ರಾಜ್ಯಗಳಲ್ಲಿ ಜಿಎಸ್ಟಿ ಬೆಳವಣಿಗೆ ನಕಾರಾತ್ಮಕವಾಗಿದ್ದರೂ, ಕರ್ನಾಟಕದಲ್ಲಿ ಸಕಾರಾತ್ಮಕವಾಗಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಭದ್ರತೆ ಒದಗಿಸಿವೆ ಎಂದು ತಿಳಿಸಿದರು.</p>.<p>ಕೇಂದ್ರ ಹಣಕಾಸು ಸಚಿವರ ವಿರುದ್ಧ ಮುಖ್ಯಮಂತ್ರಿ ಮಾತನಾಡಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ರಾಜ್ಯದ ಜನರಿಂದ ಆಯ್ಕೆಯಾದ ಸರ್ಕಾರಕ್ಕೆ ರಾಜ್ಯದ ಹಿತಕ್ಕಾಗಿ ಮಾತನಾಡುವ ಜವಾಬ್ದಾರಿ ಇದೆ. ಉದಾರತೆ ತೋರಿಸಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಳಿತು ಮಾಡಬೇಕು ಎಂದು ಹೇಳಿದರು.</p>.<p>ಮೇಕೆದಾಟು ವಿಷಯದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕದ ಪರವಾಗಿ ತೀರ್ಪು ಬಂದಿದೆ. ಆದರೆ ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಲು ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.</p>.<p>ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಹೆಸರಿನಲ್ಲಿ ಕಿತ್ತು ಹಾಕುವ ಬದಲು, ಹಳೆಯ ಕಾಯ್ದೆಯನ್ನೇ ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಇದಕ್ಕೂ ಮೊದಲು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾ ಪೊಲೀಸ್, ಎನ್ಸಿಸಿ, ಗೃಹರಕ್ಷಕದಳ ಹಾಗೂ ವಿವಿಧ ಶಾಲಾ–ಕಾಲೇಜು ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.</p>.<p>ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಎಸ್ಪಿ ಶುಭನ್ವಿತಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣವರ್ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಎಲ್ಲರೊಂದಿಗೆ ಒಂದಾಗಿ ಬದುಕುವ ರೂಢಿ ಮಾಡಿಕೊಂಡರೆ ಮಾತ್ರ ಸಂವಿಧಾನಕ್ಕೆ ನಿಜವಾದ ಬೆಲೆ ಕೊಟ್ಟಂತಾಗುತ್ತದೆ. ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಗೌರವ ನೀಡಿ, ರಾಜ್ಯಗಗಳ ತೆರಿಗೆ ಪಾಲನ್ನು ಸಮರ್ಪಕವಾಗಿ ನೀಡುವ ಮೂಲಕ ರಾಜ್ಯಗಳ ಆರ್ಥಿಕ ಪ್ರಗತಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ನಗರದ ಜಿಲ್ಲಾ ಹಾಕಿ ಕ್ರೀಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನವು ಕೂಡಿ ಬದುಕುವ ಸಂದೇಶ ನೀಡಿದ್ದರೂ, ಅದನ್ನು ಇಂದಿನ ದಿನಗಳಲ್ಲಿ ಬಹುತೇಕ ಪಾಲಿಸಲಾಗುತ್ತಿಲ್ಲ. ಸಂವಿಧಾನ ಯಶಸ್ವಿ ಆಗಬೇಕಾದರೆ ಎಲ್ಲರೂ ಅದರ ರಕ್ಷಣೆಗೆ ನಿಲ್ಲಬೇಕು ಎಂದರು.</p>.<p>ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಹಲವು ರಾಜ್ಯಗಳಲ್ಲಿ ಜಿಎಸ್ಟಿ ಬೆಳವಣಿಗೆ ನಕಾರಾತ್ಮಕವಾಗಿದ್ದರೂ, ಕರ್ನಾಟಕದಲ್ಲಿ ಸಕಾರಾತ್ಮಕವಾಗಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಭದ್ರತೆ ಒದಗಿಸಿವೆ ಎಂದು ತಿಳಿಸಿದರು.</p>.<p>ಕೇಂದ್ರ ಹಣಕಾಸು ಸಚಿವರ ವಿರುದ್ಧ ಮುಖ್ಯಮಂತ್ರಿ ಮಾತನಾಡಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ರಾಜ್ಯದ ಜನರಿಂದ ಆಯ್ಕೆಯಾದ ಸರ್ಕಾರಕ್ಕೆ ರಾಜ್ಯದ ಹಿತಕ್ಕಾಗಿ ಮಾತನಾಡುವ ಜವಾಬ್ದಾರಿ ಇದೆ. ಉದಾರತೆ ತೋರಿಸಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಳಿತು ಮಾಡಬೇಕು ಎಂದು ಹೇಳಿದರು.</p>.<p>ಮೇಕೆದಾಟು ವಿಷಯದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕದ ಪರವಾಗಿ ತೀರ್ಪು ಬಂದಿದೆ. ಆದರೆ ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಲು ಮೀನಮೇಷ ಎಣಿಸುತ್ತಿದೆ ಎಂದು ದೂರಿದರು.</p>.<p>ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಹೆಸರಿನಲ್ಲಿ ಕಿತ್ತು ಹಾಕುವ ಬದಲು, ಹಳೆಯ ಕಾಯ್ದೆಯನ್ನೇ ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಇದಕ್ಕೂ ಮೊದಲು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾ ಪೊಲೀಸ್, ಎನ್ಸಿಸಿ, ಗೃಹರಕ್ಷಕದಳ ಹಾಗೂ ವಿವಿಧ ಶಾಲಾ–ಕಾಲೇಜು ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.</p>.<p>ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಎಸ್ಪಿ ಶುಭನ್ವಿತಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣವರ್ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>