<p><strong>ಹಾಸನ:</strong> ಜಿಲ್ಲೆಯಲ್ಲಿ 45 ದಾಟಿದ ಹಾಗೂ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೀಘ್ರ ಲಸಿಕೆ ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ಸಿಂಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.<br /><br />ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್-19 ನಿರ್ವಹಣೆ ಕುರಿತುಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಲ್ಲಾ ತಾಲ್ಲೂಕುಗಳ ಕೋವಿಡ್ ಅಂಕಿಅಂಶಗಳನ್ನು ನಿಖರವಾಗಿ ದಾಖಲಿಸುವಂತೆ ನಿರ್ದೇಶನ ನೀಡಿದರು.</p>.<p>ಅರಸೀಕೆರೆ ಹಾಗೂ ಅರಕಲಗೂಡು ತಾಲ್ಲೂಕುಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣಹೆಚ್ಚಿದ್ದು, ಇನ್ನಷ್ಟು ನಿಗಾವಹಿಸುವಂತೆ ಸೂಚಿಸಿ,ಆರ್ಟಿ–ಪಿಸಿಆರ್ಪರೀಕ್ಷೆಗಳನ್ನುಅಧಿಕಗೊಳಿಸಬೇಕು ಎಂದು ಹೇಳಿದರು.</p>.<p>ಸೋಂಕಿತರ ಮನೆಗಳ ಬಳಿ ಪೋಸ್ಟರ್ ಅಂಟಿಸುವ ಮೂಲಕ ಕಂಟೈನ್ಮೆಂಟ್ ವಲಯಎಂದು ಗುರುತಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸೋಂಕಿತರನ್ನು ಕೋವಿಡ್ಕೇರ್ ಕೇಂದ್ರಗಳಿಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ಹರಡುವಿಕೆಯಪ್ರಮಾಣವನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದರು.</p>.<p>ಲಾಕ್ಡೌನ್ ಸಡಿಲಿಕೆ ನಂತರ ಸಾರ್ವಜನಿಕರು ಮಾಸ್ಕ್ ಧರಿಸದೆ, ಅಂತರ ಕಾಯ್ದುಕೊಳ್ಳದೆರಸ್ತೆ ಹಾಗೂ ಅಂಗಡಿಗಳ ಬಳಿ ಓಡಾಡುತ್ತಿರುವುದು ಕಂಡು ಬಂದಿದೆ. ಅಂತವರ ವಿರುದ್ಧ ಕ್ರಮಜರುಗಿಸಲು ಪೊಲೀಸ್ ಇಲಾಖೆಯ ನೆರವು ಪಡೆಯುವಂತೆ ಹೇಳಿದರು.</p>.<p>₹5,000 ಮುಂಗಡ ಹಣ ಇರಿಸಿಕೊಂಡು ಅವಶ್ಯವಿರುವ ಸಾರ್ವಜನಿಕರಿಗೆ ಆಮ್ಲಜನಕಸಾಂದ್ರಕಗಳನ್ನು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಆಸ್ಪತ್ರೆಗಳಲ್ಲಿ ಯಾವುದೇರಿತಿಯ ಔಷಧಿಗಳ ಕೊರತೆ ಆಗದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಆರ್ಟಿ–ಪಿಸಿಆರ್ ಪರೀಕ್ಷೆಗಳನ್ನು ಮತ್ತಷ್ಟುಹೆಚ್ಚಿಸಿ ಪಾಸಿಟಿವ್ ಬಂದವರನ್ನು ಆರೈಕೆ ಕೇಂದ್ರಗಳಿಗೆ ಕರೆ ತಂದು ಸೂಕ್ತ ಚಿಕಿತ್ಸೆನೀಡಬೇಕು. ಅಗತ್ಯವಿದ್ದರೆ ಪೊಲೀಸ್ ಇಲಾಖೆ ನೆರವು ನೀಡಲಾಗುವುದು ಎಂದರು.</p>.<p>ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಶೀಘ್ರ ಲಸಿಕೆ<br />ನೀಡುವಂತೆ ಅವರು ಸೂಚನೆ ನಿಡಿದರು.</p>.<p>ವಿಡಿಯೋ ಸಂವಾದದಲ್ಲಿ ಮಾತನಾಡಿದ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ, ತಾಲ್ಲೂಕಿನಲ್ಲಿರುವ ಮಕ್ಕಳ ಹಾಗೂ ಹೆರಿಗೆ ಆಸ್ಪತ್ರೆಗೆ ಮಕ್ಕಳ ತಜ್ಞರನ್ನು ನೇಮಕ ಮಾಡಬೇಕು. ಹೇಮಾವತಿ ಜಲಾಶಯದಿಂದ ಜುಲೈ ಅಂತ್ಯದೊಳಗೆ ರೈತರಿಗೆಅನೂಕುಲವಾಗುವಂತೆ ನಾಲೆಗಳಲ್ಲಿ ನೀರು ಹರಿಸಲು ತೀರ್ಮಾನ ಕೈಗೊಳ್ಳಲು ಸಭೆ ಆಯೋಜಿಸುವಂತೆ ಮನವಿ ಮಾಡಿದರು.</p>.<p>ಈ ಬಗ್ಗೆ ಶೀಘ್ರ ಕ್ರಮವಹಿಸುವುದಾಗಿ ನವೀನ್ ರಾಜ್ ಸಿಂಗ್ಹೇಳಿದರು.</p>.<p>ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ. ಪರಮೇಶ್, ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ. ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ಸತೀಶ್, ಜಂಟಿ ಕೃಷಿ ನಿರ್ದೇಶಕ ಕೆ.ಎಚ್. ರವಿ, ತೋಟಗಾರಿಕ ಇಲಾಖೆ ಉಪನಿರ್ದೇಶಕ ಎಚ್.ಆರ್. ಯೋಗೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯಲ್ಲಿ 45 ದಾಟಿದ ಹಾಗೂ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೀಘ್ರ ಲಸಿಕೆ ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ಸಿಂಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.<br /><br />ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್-19 ನಿರ್ವಹಣೆ ಕುರಿತುಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಲ್ಲಾ ತಾಲ್ಲೂಕುಗಳ ಕೋವಿಡ್ ಅಂಕಿಅಂಶಗಳನ್ನು ನಿಖರವಾಗಿ ದಾಖಲಿಸುವಂತೆ ನಿರ್ದೇಶನ ನೀಡಿದರು.</p>.<p>ಅರಸೀಕೆರೆ ಹಾಗೂ ಅರಕಲಗೂಡು ತಾಲ್ಲೂಕುಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣಹೆಚ್ಚಿದ್ದು, ಇನ್ನಷ್ಟು ನಿಗಾವಹಿಸುವಂತೆ ಸೂಚಿಸಿ,ಆರ್ಟಿ–ಪಿಸಿಆರ್ಪರೀಕ್ಷೆಗಳನ್ನುಅಧಿಕಗೊಳಿಸಬೇಕು ಎಂದು ಹೇಳಿದರು.</p>.<p>ಸೋಂಕಿತರ ಮನೆಗಳ ಬಳಿ ಪೋಸ್ಟರ್ ಅಂಟಿಸುವ ಮೂಲಕ ಕಂಟೈನ್ಮೆಂಟ್ ವಲಯಎಂದು ಗುರುತಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸೋಂಕಿತರನ್ನು ಕೋವಿಡ್ಕೇರ್ ಕೇಂದ್ರಗಳಿಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ಹರಡುವಿಕೆಯಪ್ರಮಾಣವನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದರು.</p>.<p>ಲಾಕ್ಡೌನ್ ಸಡಿಲಿಕೆ ನಂತರ ಸಾರ್ವಜನಿಕರು ಮಾಸ್ಕ್ ಧರಿಸದೆ, ಅಂತರ ಕಾಯ್ದುಕೊಳ್ಳದೆರಸ್ತೆ ಹಾಗೂ ಅಂಗಡಿಗಳ ಬಳಿ ಓಡಾಡುತ್ತಿರುವುದು ಕಂಡು ಬಂದಿದೆ. ಅಂತವರ ವಿರುದ್ಧ ಕ್ರಮಜರುಗಿಸಲು ಪೊಲೀಸ್ ಇಲಾಖೆಯ ನೆರವು ಪಡೆಯುವಂತೆ ಹೇಳಿದರು.</p>.<p>₹5,000 ಮುಂಗಡ ಹಣ ಇರಿಸಿಕೊಂಡು ಅವಶ್ಯವಿರುವ ಸಾರ್ವಜನಿಕರಿಗೆ ಆಮ್ಲಜನಕಸಾಂದ್ರಕಗಳನ್ನು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಆಸ್ಪತ್ರೆಗಳಲ್ಲಿ ಯಾವುದೇರಿತಿಯ ಔಷಧಿಗಳ ಕೊರತೆ ಆಗದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಆರ್ಟಿ–ಪಿಸಿಆರ್ ಪರೀಕ್ಷೆಗಳನ್ನು ಮತ್ತಷ್ಟುಹೆಚ್ಚಿಸಿ ಪಾಸಿಟಿವ್ ಬಂದವರನ್ನು ಆರೈಕೆ ಕೇಂದ್ರಗಳಿಗೆ ಕರೆ ತಂದು ಸೂಕ್ತ ಚಿಕಿತ್ಸೆನೀಡಬೇಕು. ಅಗತ್ಯವಿದ್ದರೆ ಪೊಲೀಸ್ ಇಲಾಖೆ ನೆರವು ನೀಡಲಾಗುವುದು ಎಂದರು.</p>.<p>ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಶೀಘ್ರ ಲಸಿಕೆ<br />ನೀಡುವಂತೆ ಅವರು ಸೂಚನೆ ನಿಡಿದರು.</p>.<p>ವಿಡಿಯೋ ಸಂವಾದದಲ್ಲಿ ಮಾತನಾಡಿದ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ, ತಾಲ್ಲೂಕಿನಲ್ಲಿರುವ ಮಕ್ಕಳ ಹಾಗೂ ಹೆರಿಗೆ ಆಸ್ಪತ್ರೆಗೆ ಮಕ್ಕಳ ತಜ್ಞರನ್ನು ನೇಮಕ ಮಾಡಬೇಕು. ಹೇಮಾವತಿ ಜಲಾಶಯದಿಂದ ಜುಲೈ ಅಂತ್ಯದೊಳಗೆ ರೈತರಿಗೆಅನೂಕುಲವಾಗುವಂತೆ ನಾಲೆಗಳಲ್ಲಿ ನೀರು ಹರಿಸಲು ತೀರ್ಮಾನ ಕೈಗೊಳ್ಳಲು ಸಭೆ ಆಯೋಜಿಸುವಂತೆ ಮನವಿ ಮಾಡಿದರು.</p>.<p>ಈ ಬಗ್ಗೆ ಶೀಘ್ರ ಕ್ರಮವಹಿಸುವುದಾಗಿ ನವೀನ್ ರಾಜ್ ಸಿಂಗ್ಹೇಳಿದರು.</p>.<p>ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ. ಪರಮೇಶ್, ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ. ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ಸತೀಶ್, ಜಂಟಿ ಕೃಷಿ ನಿರ್ದೇಶಕ ಕೆ.ಎಚ್. ರವಿ, ತೋಟಗಾರಿಕ ಇಲಾಖೆ ಉಪನಿರ್ದೇಶಕ ಎಚ್.ಆರ್. ಯೋಗೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>