ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಮಾತನಾಡಿ, ಮಹಿಳೆಯರು ಪ್ರಗತಿಯಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯ. ಇತ್ತೀಚಿನ ದಿನಗಳಲ್ಲಿ ಅಪರಾಧಪ್ರಕರಣಗಳು ಹೆಚ್ಚುತ್ತಿದ್ದು, ಮಕ್ಕಳಿಗೆ ನೈತಿಕ ಮೌಲ್ಯ ಹಾಗೂ ಉತ್ತಮ ವ್ಯಕ್ತಿತ್ವನೀಡುವಲ್ಲಿ ಪೋಷಕರು ಹೆಚ್ಚಿನ ಪಾತ್ರ ವಹಿಸಬೇಕು. ಬಾಲ್ಯ ವಿವಾಹ, ವರದಕ್ಷಿಣೆ, ಕೌಟುಂಬಿಕ ದೌರ್ಜನ್ಯ ತಡೆಗಟ್ಟಲು ಮುಂದಾಗಬೇಕು ಎಂದು ಹೇಳಿದರು.