ಅರಕಲಗೂಡು: ತಾಲ್ಲೂಕಿನಲ್ಲಿ ಸತತವಾಗಿ ಸುರಿದ ಮಳೆಗೆ ದನದ ಕೊಟ್ಟಿಗೆ ಕುಸಿದು ಎರಡು ಆಡುಗಳು ಮೃತಪಟ್ಟು ಎರಡು ಹಸುಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಲ್ಲಿಪಟ್ಟಣ ಹೋಬಳಿ ವಿಜಾಪುರ ಅರಣ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿ ಪುಟ್ಟನ ಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಜಯಮ್ಮ ರಂಗ ಸ್ವಾಮಿ ಅವರು ಜಮೀನಿನ ಬಳಿ ನಿರ್ಮಿಸಿದ್ದ ಕೊಟ್ಟಿಗೆ ಕುಸಿದು ಈ ಅವಘಡ ಸಂಭವಿಸಿದೆ. ಮೃತಪಟ್ಟ ಆಡುಗಳ ಬೆಲೆ ₹ 25 ಸಾವಿರ ಎಂದು ಅಂದಾಜಿಸಲಾಗಿದೆ. ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.