ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಪ್ರಿಯಾಂಕ, ‘ರೈತರ ಯಾವುದೇ ಕೆಲಸ ಬಾಕಿ ಉಳಿದಿದ್ದರೂ ಮಾಡಿಕೊಡಲಾಗುವುದು. ಬರ ಪರಿಹಾರ ಕುರಿತು ವಾರಕ್ಕೊಮ್ಮೆ ಟಾಸ್ಕ್ಫೋರ್ಸ್ ಸಭೆ ನಡೆಸಲಾಗುತ್ತಿದೆ. ಆಲೂಗಡ್ಡೆ ದರ ನಿರ್ಧಾರ ಕುರಿತು ರೈತರ ಸಭೆ ನಡೆಸಲಾಗಿದೆ. ಬರ ವಿಚಾರಕ್ಕೂ ನೀತಿ ಸಂಹಿತೆಗೂ ಸಂಬಂಧವಿಲ್ಲ. ಯಾವ ವಿಚಾರಕ್ಕೆ ಗೋಲಿಬಾರ್ ವಿಷಯ ಪ್ರಸ್ತಾಪಿಸಿದ್ದರೆ ಗೊತ್ತಿಲ್ಲ’ ಎಂದು ತಿಳಿಸಿದರು.