ಬಳಿಕ ಮಾತನಾಡಿದ ಶಶಿಭೂಷಣ್, ಮತ ಎಣಿಕೆಗೆ ಈಗಾಗಲೇ ಹಲವಾರು ರೀತಿಯ ಕ್ರಮಕೈಗೊಂಡಿದ್ದು, ಯಾವುದೇ ಗೊಂದಲ ಇಲ್ಲದಂತೆ ಎಚ್ಚರ ವಹಿಸಬೇಕು. ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಮತ ಎಣಿಕೆ ಕೇಂದ್ರಗಳು ಹಾಗೂ ಸ್ಟ್ರಾಂಗ್ ರೂಂಗಳಿಗೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಸಾಮಾನ್ಯ ವೀಕ್ಷಕರುಗಳಿಗೆ ಸಿದ್ಧತೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ವಿವರಿಸಿದರು.