ಅಗತ್ಯ ತುರ್ತು ಸೇವೆ ಹೊರತು ಪಡಿಸಿ ಇತರೆ ವಹಿವಾಟು ಬಂದ್ ಆಗಿತ್ತು. ಬೆಳಿಗ್ಗೆಯಿಂದಲೇ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಆಟೊರಿಕ್ಷಾ, ಟ್ಯಾಕ್ಸಿ, ಬಸ್ ಮತ್ತಿತರ ವಾಹನಗಳು ರಸ್ತೆಗಿಳಿಯಲಿಲ್ಲ. ನಗರದ ಕಟ್ಟಿನಕೆರೆ ಮಾರುಕಟ್ಟೆ, ಕಸ್ತೂರ ಬಾ ರಸ್ತೆ, ದೊಡ್ಡ ಗರಡಿ ಬೀದಿ, ನಗರ ಸಾರಿಗೆ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣಗಳಲ್ಲಿ ಜನರು ಇರಲಿಲ್ಲ.