<p><strong>ಅರಸೀಕೆರೆ:</strong> ಸರ್ಕಾರ ನೀಡುವ ಸೌಲಭ್ಯಗಳನ್ನು ಅರ್ಹ ರೈತರಿಗೆ ತಲುಪಿಸಿ, ಸಹಕಾರ ಸಂಘಗಳ ಅಧ್ಯಕ್ಷರು ಅವರ ಏಳಿಗೆಗೆ ಪ್ರಯತ್ನಿಸಬೇಕು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.</p>.<p>ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಶ್ಯಾನೆಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಆರ್.ಟಿ. ಬಸಪ್ಪ ರಂಗನಾಯಕನ ಕೊಪ್ಪಲು, ಉಪಾಧ್ಯಕ್ಷ ಕಣಿವೆ ನಾಯಕ್ ತಿಪ್ಪಘಟ್ಟ ಅವರನ್ನು ಅಭಿನಂದಿಸಿ ಮಾತನಾಡಿದರು.</p>.<p>‘ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಾಲ ನೀಡುವಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಮಲತಾಯಿ ಧೋರಣೆ ನೀಡುತ್ತಿದ್ದು ಸಮರ್ಪಕವಾಗಿ ಸಾಲ ನೀಡಲಾಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ನೂತನ ಅಧ್ಯಕ್ಷ ಬಸಪ್ಪ ಮಾತನಾಡಿ, ‘ಸಂಘದಲ್ಲಿರುವ ಸದಸ್ಯರು ಹಾಗೂ ಶಾಸಕರ ಮಾರ್ಗದರ್ಶನದಂತೆ ಸಂಘವನ್ನು ಬಲಪಡಿಸಿ ರೈತರಿಗೆ ಅನುಕೂಲ ಮಾಡಿಕೊಡುತ್ತೇನೆ’ ಎಂದು ಹೇಳಿದರು</p>.<p>ಪ್ರಾಥಮಿಕ ಕೃಷಿ ಪತ್ತಿನ ಸದಸ್ಯರುಗಳಾದ ಶ್ಯಾನೆಗೆರೆ ಬಾಬು,ಜಿ.ಟಿ ತಿಮ್ಮಪ್ಪ, ವಿಜಯ್ ಕುಮಾರ್, ಮರಿ ಸಂಕಪ್ಪ, ಶ್ರೀನಿವಾಸ್ ಷಣ್ಮುಖ, ಶಶಿಕುಮಾರ್, ಶ್ರುತಿ ಮಂಜು,ರೀಟ ಸಿದ್ದೇಶ್,ರಂಗನಾಥ್, ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ಸರ್ಕಾರ ನೀಡುವ ಸೌಲಭ್ಯಗಳನ್ನು ಅರ್ಹ ರೈತರಿಗೆ ತಲುಪಿಸಿ, ಸಹಕಾರ ಸಂಘಗಳ ಅಧ್ಯಕ್ಷರು ಅವರ ಏಳಿಗೆಗೆ ಪ್ರಯತ್ನಿಸಬೇಕು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.</p>.<p>ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಶ್ಯಾನೆಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಆರ್.ಟಿ. ಬಸಪ್ಪ ರಂಗನಾಯಕನ ಕೊಪ್ಪಲು, ಉಪಾಧ್ಯಕ್ಷ ಕಣಿವೆ ನಾಯಕ್ ತಿಪ್ಪಘಟ್ಟ ಅವರನ್ನು ಅಭಿನಂದಿಸಿ ಮಾತನಾಡಿದರು.</p>.<p>‘ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಾಲ ನೀಡುವಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಮಲತಾಯಿ ಧೋರಣೆ ನೀಡುತ್ತಿದ್ದು ಸಮರ್ಪಕವಾಗಿ ಸಾಲ ನೀಡಲಾಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ನೂತನ ಅಧ್ಯಕ್ಷ ಬಸಪ್ಪ ಮಾತನಾಡಿ, ‘ಸಂಘದಲ್ಲಿರುವ ಸದಸ್ಯರು ಹಾಗೂ ಶಾಸಕರ ಮಾರ್ಗದರ್ಶನದಂತೆ ಸಂಘವನ್ನು ಬಲಪಡಿಸಿ ರೈತರಿಗೆ ಅನುಕೂಲ ಮಾಡಿಕೊಡುತ್ತೇನೆ’ ಎಂದು ಹೇಳಿದರು</p>.<p>ಪ್ರಾಥಮಿಕ ಕೃಷಿ ಪತ್ತಿನ ಸದಸ್ಯರುಗಳಾದ ಶ್ಯಾನೆಗೆರೆ ಬಾಬು,ಜಿ.ಟಿ ತಿಮ್ಮಪ್ಪ, ವಿಜಯ್ ಕುಮಾರ್, ಮರಿ ಸಂಕಪ್ಪ, ಶ್ರೀನಿವಾಸ್ ಷಣ್ಮುಖ, ಶಶಿಕುಮಾರ್, ಶ್ರುತಿ ಮಂಜು,ರೀಟ ಸಿದ್ದೇಶ್,ರಂಗನಾಥ್, ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>