ಮುಷ್ಕರ ವಿಚಾರದಲ್ಲಿ ರಾಜಕೀಯ ಮಾಡಬಾರದು. ನೌಕರರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ, ವಿದ್ಯುತ್ ಬಿಲ್ ಕೂಡ ಹೆಚ್ಚಾಗಿದೆ. ನೌಕರರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಆಗುತ್ತಾ? ಈಗಾಗಲೇ 45ಕ್ಕೂ ಹೆಚ್ಚು ಜನರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ, ಅಮಾನತಿನಿಂದ ಸಮಸ್ಯೆ ಬಗೆಹರಿಯಲ್ಲ. ತಕ್ಷಣ ನೌಕರರ ಸಂಬಳ ನೀಡಬೇಕು ಎಂದು ಆಗ್ರಹಿಸಿದರು.