ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಮಂದಿ ದುಡಿಮೆ ಇಲ್ಲದೆ,ಆದಾಯವೂ ಇಲ್ಲದೆ ವಲಸೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಸಂಪೂರ್ಣ ಲಾಕ್ಡೌನ್ ಮಾಡುವುದರಿಂದ ಸೋಂಕು ಹರಡುವುದನ್ನು ತಪ್ಪಿಸಬಹುದು. ಸೋಂಕು ಕಾಣಿಸಿಕೊಂಡ ದಿನದಿಂದಲೂ ಸೂಕ್ತ ಕ್ರಮ ಕೈಗೊಳ್ಳದೇ ಮನಸ್ಸಿಗೆ ಬಂದಂತೆ ನಿರ್ಧಾರ ಕೈಗೊಳ್ಳುವ ಮೂಲಕ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಕಿಡಿ ಕಾರಿದರು.