ಹೋಟೆಲ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಅಡುಗೆ ಕೆಲಸದವರು, ಆಟೊ ಚಾಲಕರು, ಕಟ್ಟಡ ಕಾರ್ಮಿಕರು ನಿತ್ಯದ ಕೂಲಿ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಕೆಲಸವಿಲ್ಲದೆ ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ. ಸರ್ಕಾರದ ನಿರ್ಲಕ್ಷ್ಯ ಹೀಗೆ ಮುಂದುವರೆದರೆ ಶೇಕಡಾ 30 ರಷ್ಟು ಕಾರ್ಮಿಕರು ಹಸಿವಿನಿಂದಲೇ ಸಾಯುತ್ತಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ರೈತರು ಬೆಳೆದ ಬೆಳೆ ಮಾರಾಟ ಮಾಡದ ಸ್ಥಿತಿ ನಿರ್ಮಾಣ ವಾಗಿದೆ. ಟೊಮೆಟೊ, ಕಲ್ಲಂಗಡಿಯನ್ನು ಬೀದಿಗೆ ತಂದು ಸುರಿಯುತ್ತಿದ್ದಾರೆ. ಸರ್ಕಾರವೇ ಬೆಳೆ ಖರೀದಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.