<p><strong>ಹೊಳೆನರಸೀಪುರ</strong>: ‘ಗುಡಿಸಲು ಮುಕ್ತ ಸಮಾಜದ ನಿರ್ಮಾಣದ ಕನಸನ್ನು ನನಸು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕಾಳಜಿ ವಹಿಸಿದ್ದು, ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ₹75 ಕೋಟಿ ಅನುದಾನ ಬಿಡುಗಡೆ ಮಾಡಿದೆ’ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.</p>.<p>ತಾಲೂಕಿನ ಕೆಲವು ಗ್ರಾಮಗಳಲ್ಲಿ ವಾಸ ಮಾಡುತ್ತಿರುವ ಅಲೆಮಾರಿ ಸಮುದಾಯದ ಜನರ ಸ್ಥಿತಿಗತಿ ಕುರಿತು ಖುದ್ದಾಗಿ ಆಯ ಗ್ರಾಮಗಳಿಗೆ ಭೇಟಿ ನೀಡಲು ಬಂದಿದ್ದ ಸಂದರ್ಭದಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ವಸತಿ ಮತ್ತು ನಿವೇಶನ ರಹಿತ ಅಲೆಮಾರಿ ಸಮುದಾಯದವರಿಗೆ ಸವಲತ್ತುಗಳನ್ನು ಒದಗಿಸಿಕೊಡಲು ವಿಶೇಷವಾಗಿ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ’ ಎಂದರು.</p>.<p>ತಾಲ್ಲೂಕಿನ ಅಗ್ರಹಾರ ಗೇಟ್ ಬಳಿ ಅಲೆಮಾರಿ ಸಮುದಾಯದವರು ವಾಸ ಮಾಡುತ್ತಿದ್ದು, ಅವರಿಗೆ ಕನಿಷ್ಠ ಮೂಲಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಸಂಬಂಧಪಟ್ಟವರು ಕಾಳಜಿ ವಹಿಸದ ಪರಿಣಾಮ ಇಂದಿಗೂ ಸಹ ಕೆಟ್ಟ ಪರಿಸ್ಥಿತಿಯಲ್ಲಿ ಹೀನಾಯವಾಗಿ ಬದುಕು ಸಾಗುತ್ತಿದೆ ಎಂದು ಎಂದು ಹಲವರು ಪಲ್ಲವಿ ಅವರ ಗಮನ ಸೆಳೆದರು.</p>.<p>ಸಭೆಯಲ್ಲಿ ಉಪಸ್ಥಿತರಿದ್ದ ತಹಶೀಲ್ದಾರ್ ವೈ.ಎಂ.ರೇಣುಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷೆ ಜಿ.ಪಲ್ಲವಿ, ಗುರುವಾರ ಬೆಳಿಗ್ಗೆ ಆ ಗ್ರಾಮಕ್ಕೆ ನಾನು ತೆರಳಲಿದ್ದು, ಆ ಗ್ರಾಮ ಸಂಪೂರ್ಣ ಶುಚಿತ್ವದಿಂದ ಕೂಡಿರಬೇಕು. ಸ್ವಚ್ಛಗೊಳಿಸುವ ವಿಷಯದಲ್ಲಿ ಇಂದೇ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.</p>.<p>ತಾಲ್ಲೂಕು ಕಚೇರಿ ಸಿಬ್ಬಂದಿ ಸತೀಶ್ ಸಾವನ್ನಪ್ಪಿದ್ದು, ಕಚೇರಿಯ ಮುಂಭಾಗದಲ್ಲಿ ಇರಿಸಿದ್ದ ಮೃತದೇಹದ ಬಳಿ ತೆರಳಿ ಸಂತಾಪ ಶ್ರದ್ಧಾಂಜಲಿ ಸಲ್ಲಿಸಿದ ಪಲ್ಲವಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಲಕ್ಷ್ಮಣ, ಪಲ್ಲವಿ ಅವರನ್ನು ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ</strong>: ‘ಗುಡಿಸಲು ಮುಕ್ತ ಸಮಾಜದ ನಿರ್ಮಾಣದ ಕನಸನ್ನು ನನಸು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕಾಳಜಿ ವಹಿಸಿದ್ದು, ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ₹75 ಕೋಟಿ ಅನುದಾನ ಬಿಡುಗಡೆ ಮಾಡಿದೆ’ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.</p>.<p>ತಾಲೂಕಿನ ಕೆಲವು ಗ್ರಾಮಗಳಲ್ಲಿ ವಾಸ ಮಾಡುತ್ತಿರುವ ಅಲೆಮಾರಿ ಸಮುದಾಯದ ಜನರ ಸ್ಥಿತಿಗತಿ ಕುರಿತು ಖುದ್ದಾಗಿ ಆಯ ಗ್ರಾಮಗಳಿಗೆ ಭೇಟಿ ನೀಡಲು ಬಂದಿದ್ದ ಸಂದರ್ಭದಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ವಸತಿ ಮತ್ತು ನಿವೇಶನ ರಹಿತ ಅಲೆಮಾರಿ ಸಮುದಾಯದವರಿಗೆ ಸವಲತ್ತುಗಳನ್ನು ಒದಗಿಸಿಕೊಡಲು ವಿಶೇಷವಾಗಿ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ’ ಎಂದರು.</p>.<p>ತಾಲ್ಲೂಕಿನ ಅಗ್ರಹಾರ ಗೇಟ್ ಬಳಿ ಅಲೆಮಾರಿ ಸಮುದಾಯದವರು ವಾಸ ಮಾಡುತ್ತಿದ್ದು, ಅವರಿಗೆ ಕನಿಷ್ಠ ಮೂಲಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಸಂಬಂಧಪಟ್ಟವರು ಕಾಳಜಿ ವಹಿಸದ ಪರಿಣಾಮ ಇಂದಿಗೂ ಸಹ ಕೆಟ್ಟ ಪರಿಸ್ಥಿತಿಯಲ್ಲಿ ಹೀನಾಯವಾಗಿ ಬದುಕು ಸಾಗುತ್ತಿದೆ ಎಂದು ಎಂದು ಹಲವರು ಪಲ್ಲವಿ ಅವರ ಗಮನ ಸೆಳೆದರು.</p>.<p>ಸಭೆಯಲ್ಲಿ ಉಪಸ್ಥಿತರಿದ್ದ ತಹಶೀಲ್ದಾರ್ ವೈ.ಎಂ.ರೇಣುಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷೆ ಜಿ.ಪಲ್ಲವಿ, ಗುರುವಾರ ಬೆಳಿಗ್ಗೆ ಆ ಗ್ರಾಮಕ್ಕೆ ನಾನು ತೆರಳಲಿದ್ದು, ಆ ಗ್ರಾಮ ಸಂಪೂರ್ಣ ಶುಚಿತ್ವದಿಂದ ಕೂಡಿರಬೇಕು. ಸ್ವಚ್ಛಗೊಳಿಸುವ ವಿಷಯದಲ್ಲಿ ಇಂದೇ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.</p>.<p>ತಾಲ್ಲೂಕು ಕಚೇರಿ ಸಿಬ್ಬಂದಿ ಸತೀಶ್ ಸಾವನ್ನಪ್ಪಿದ್ದು, ಕಚೇರಿಯ ಮುಂಭಾಗದಲ್ಲಿ ಇರಿಸಿದ್ದ ಮೃತದೇಹದ ಬಳಿ ತೆರಳಿ ಸಂತಾಪ ಶ್ರದ್ಧಾಂಜಲಿ ಸಲ್ಲಿಸಿದ ಪಲ್ಲವಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಲಕ್ಷ್ಮಣ, ಪಲ್ಲವಿ ಅವರನ್ನು ಸನ್ಮಾನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>