ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ ಚುನಾವಣೆ ನಡೆಸಲು ಸಿದ್ದ: ಸಚಿವ ಕೆ.ಎಸ್. ಈಶ್ವರಪ್ಪ

Last Updated 13 ನವೆಂಬರ್ 2020, 16:15 IST
ಅಕ್ಷರ ಗಾತ್ರ

ಹಾಸನ: ಮೂರು ವಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್‌ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹಾಗಾಗಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಶುಕ್ರವಾರ ಹಾಸನಾಂಬೆ ದರ್ಶನ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಚುನಾವಣೆ ಯಾವುದೇ ಪಕ್ಷಕ್ಕೆ
ಸೀಮಿತವಾಗಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಚುನಾವಣೆ ಮುಂದೂಡುವಂತೆ ಕೋರ್ಟ್‌ ಮತ್ತು ಚುನಾವಣಾ ಆಯೋಗಕ್ಕೂ ತಿಳಿಸಲಾಗಿತ್ತು. ಕೆಲ ಜಿಲ್ಲೆಗಳಲ್ಲಿ ಸೋಂಕು ಪ್ರಮಾಣ ತಗ್ಗಿದೆ, ಮತ್ತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಜನರಿಗೆ ತೊಂದರೆ ಆಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿತ್ತು. ಈಗ ಕೋರ್ಟ್‌ ತೀರ್ಮಾನ ಒಪ್ಪಿಕೊಂಡು ಚುನಾವಣೆ ನಡೆಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT