<p><strong>ಹೊಳೆನರಸೀಪುರ</strong>: ತಾಲ್ಲೂಕಿನ ಹಳೇಕೋಟೆ ಹೋಬಳಿಯ ದೊಡ್ಡಕುಂಚೇವು ಗ್ರಾಮದ ‘ಗ್ರಾಮ ಒನ್’ ಕೇಂದ್ರದಲ್ಲಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗೆ ಆನ್ಲೈನ್ನಲ್ಲಿ ಅರ್ಜಿ ಹಾಕಲು ಪ್ರತಿಯೊಬ್ಬರಿಂದ ₹ 100 ವಸೂಲಿ ಮಾಡುತ್ತಿದ್ದಾರೆಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಹಣ ಪಡೆಯುವ ದೃಶ್ಯವನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ ಮಾಧ್ಯಮಗಳಿಗೆ ಕಳುಹಿಸಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಅವರ ಗಮನಕ್ಕೆ ತರಲಾಗಿದ್ದು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<p>‘ಈ ಕೇಂದ್ರದಲ್ಲಿ 500ಕ್ಕೂ ಹೆಚ್ಚು ಅರ್ಜಿಗಳನ್ನು ದಾಖಲಿಸಿದ್ದು ಎಲ್ಲರಿಂದ ₹ 100ನಂತೆ ₹ 50 ಸಾವಿರಕ್ಕೂ ಹೆಚ್ಚು ಹಣ ಗಳಿಸಿದ್ದಾರೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>‘ಯಾವುದೇ ಕೇಂದ್ರದಲ್ಲಿ ಅರ್ಜಿ ನೋಂದಾಯಿಸಲು ಸರ್ಕಾರ ನಿಗದಿತ ಶುಲ್ಕ ನೀಡುತ್ತದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಕೇಂದ್ರದಲ್ಲಿ ಹಣ ನೀಡಬಾರದು. ಹಣ ಕೇಳಿದರೆ ದೂರು ನೀಡಿ’ ಎಂದು ತಹಶೀಲ್ದಾರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ</strong>: ತಾಲ್ಲೂಕಿನ ಹಳೇಕೋಟೆ ಹೋಬಳಿಯ ದೊಡ್ಡಕುಂಚೇವು ಗ್ರಾಮದ ‘ಗ್ರಾಮ ಒನ್’ ಕೇಂದ್ರದಲ್ಲಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗೆ ಆನ್ಲೈನ್ನಲ್ಲಿ ಅರ್ಜಿ ಹಾಕಲು ಪ್ರತಿಯೊಬ್ಬರಿಂದ ₹ 100 ವಸೂಲಿ ಮಾಡುತ್ತಿದ್ದಾರೆಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಹಣ ಪಡೆಯುವ ದೃಶ್ಯವನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ ಮಾಧ್ಯಮಗಳಿಗೆ ಕಳುಹಿಸಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಅವರ ಗಮನಕ್ಕೆ ತರಲಾಗಿದ್ದು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<p>‘ಈ ಕೇಂದ್ರದಲ್ಲಿ 500ಕ್ಕೂ ಹೆಚ್ಚು ಅರ್ಜಿಗಳನ್ನು ದಾಖಲಿಸಿದ್ದು ಎಲ್ಲರಿಂದ ₹ 100ನಂತೆ ₹ 50 ಸಾವಿರಕ್ಕೂ ಹೆಚ್ಚು ಹಣ ಗಳಿಸಿದ್ದಾರೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>‘ಯಾವುದೇ ಕೇಂದ್ರದಲ್ಲಿ ಅರ್ಜಿ ನೋಂದಾಯಿಸಲು ಸರ್ಕಾರ ನಿಗದಿತ ಶುಲ್ಕ ನೀಡುತ್ತದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಕೇಂದ್ರದಲ್ಲಿ ಹಣ ನೀಡಬಾರದು. ಹಣ ಕೇಳಿದರೆ ದೂರು ನೀಡಿ’ ಎಂದು ತಹಶೀಲ್ದಾರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>