<p><strong>ಬೇಲೂರು</strong>: ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಕಾಲಸಂಕ ಸೇತುವೆ ನಿರ್ಮಿಣಕ್ಕೆ ಶಾಸಕ ಎಚ್.ಕೆ.ಸುರೇಶ್ ಭೂಮಿಪೂಜೆ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಅವರು ಮಾತನಾಡಿ, ‘ಗ್ರಾಮಸ್ಥರು ಜಾನುವಾರುಗಳೊಂದಿಗೆ ತಮ್ಮ ಜಮೀನುಗಳಿಗೆ ತೆರಳಲು ಅನುಕೂಲವಾಗುವಂತೆ ಹಾಗೂ ನಿಟ್ಟೂರು ಗ್ರಾಮದಿಂದ ಮುಗುಳವಳ್ಳಿ ಗ್ರಾಮಕ್ಕೆ ತೆರಳಲು ₹30 ಲಕ್ಷ ಅನುದಾನದಲ್ಲಿ ಕಾಲಸಂಕ ಸೇತುವೆ ನಿರ್ಮಿಸಲಾಗುತ್ತಿದೆ. ಮಳೆಗಾಲದ ಸಂದರ್ಭ ಹಳ್ಳಗಳಲ್ಲಿ ಹೆಚ್ಚಿನ ನೀರು ಹರಿಯುವುದರಿಂದ ಜನರು ಮತ್ತು ಜಾನುವಾರುಗಳು ಓಡಾಡಲು ಸಾಧ್ಯವಾಗುತ್ತಿರಲಿಲ್ಲ. ಅವರ ಬವಣೆಯನ್ನು ನಿವಾರಿಸಲಾಗುತ್ತಿದೆ’ ಎಂದರು.</p>.<p>ಬಿಜೆಪಿ ಮುಖಂಡ ಸನ್ಯಾಸಿಹಳ್ಳಿ ನರೇಂದ್ರ, ಗ್ರಾಮಸ್ಥರಾದ ಧರ್ಮೇಶ, ಪುಟ್ಟಸ್ವಾಮಿಗೌಡ, ಅಶೋಕ್, ಪ್ರದೀಪ್, ಲಕ್ಷ್ಮಣ್, ಜಗದೀಶ್, ಸೋಮೇಶ್, ಕುಮಾರ್, ಶ್ರೀನಿವಾಸ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ದರ್ಶನ್, ಗುತ್ತಿಗೆದಾರ ಮಹೆಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಕಾಲಸಂಕ ಸೇತುವೆ ನಿರ್ಮಿಣಕ್ಕೆ ಶಾಸಕ ಎಚ್.ಕೆ.ಸುರೇಶ್ ಭೂಮಿಪೂಜೆ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಅವರು ಮಾತನಾಡಿ, ‘ಗ್ರಾಮಸ್ಥರು ಜಾನುವಾರುಗಳೊಂದಿಗೆ ತಮ್ಮ ಜಮೀನುಗಳಿಗೆ ತೆರಳಲು ಅನುಕೂಲವಾಗುವಂತೆ ಹಾಗೂ ನಿಟ್ಟೂರು ಗ್ರಾಮದಿಂದ ಮುಗುಳವಳ್ಳಿ ಗ್ರಾಮಕ್ಕೆ ತೆರಳಲು ₹30 ಲಕ್ಷ ಅನುದಾನದಲ್ಲಿ ಕಾಲಸಂಕ ಸೇತುವೆ ನಿರ್ಮಿಸಲಾಗುತ್ತಿದೆ. ಮಳೆಗಾಲದ ಸಂದರ್ಭ ಹಳ್ಳಗಳಲ್ಲಿ ಹೆಚ್ಚಿನ ನೀರು ಹರಿಯುವುದರಿಂದ ಜನರು ಮತ್ತು ಜಾನುವಾರುಗಳು ಓಡಾಡಲು ಸಾಧ್ಯವಾಗುತ್ತಿರಲಿಲ್ಲ. ಅವರ ಬವಣೆಯನ್ನು ನಿವಾರಿಸಲಾಗುತ್ತಿದೆ’ ಎಂದರು.</p>.<p>ಬಿಜೆಪಿ ಮುಖಂಡ ಸನ್ಯಾಸಿಹಳ್ಳಿ ನರೇಂದ್ರ, ಗ್ರಾಮಸ್ಥರಾದ ಧರ್ಮೇಶ, ಪುಟ್ಟಸ್ವಾಮಿಗೌಡ, ಅಶೋಕ್, ಪ್ರದೀಪ್, ಲಕ್ಷ್ಮಣ್, ಜಗದೀಶ್, ಸೋಮೇಶ್, ಕುಮಾರ್, ಶ್ರೀನಿವಾಸ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ದರ್ಶನ್, ಗುತ್ತಿಗೆದಾರ ಮಹೆಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>