ಮಳೆ ಬಿಡುವು ನೀಡಿರುವುದರಿಂದ ತಕ್ಷಣ ಗುಂಡಿ ಮುಚ್ಚುವ ಕಾರ್ಯ ಆರಂಭಿಸಬೇಕು. ಹಲವು ಕಡೆ ವಾಹನ ಇರಲಿ, ನಡೆದುಕೊಂಡು ಹೋಗಲು ಆಗದ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಿಂದಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಂದರೆ ಆಯಿತು. ಬಸ್, ಲಾರಿ ಸಾಲುಗಟ್ಟಿ ನಿಂತಿದ್ದವು.