<p>ಹಳೇಬೀಡು: ಶಾಲೆಯ ಸುತ್ತಲಿನ ಮನೆಗಳಲ್ಲಿ ಹಾಗೂ ಸಣ್ಣ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಹಳ್ಳಿಗಳಲ್ಲಿ ಜನಜೀವನ ಹದಗೆಟ್ಟಿದೆ ಎಂದು ಆರೋಪಿಸಿ ರಾಜನಶಿರಿಯೂರು ಗ್ರಾಮಸ್ಥರು ಈಚೆಗೆ ಪ್ರತಿಭಟನೆ ನಡೆಸಿದರು.</p>.<p>ರಾಜನಶಿರಿಯೂರು, ಬಂಡಿಲಕ್ಕನಕೊಪ್ಪಲು, ಕಲ್ಲು ಶೆಟ್ಟಿಹಳ್ಳಿ ಕೇರೆಕೋಡಿ ಗ್ರಾಮಗಳಲ್ಲಿ ಮದ್ಯ ಅಕ್ರಮ ಮಾರಾಟದಿಂದ ಗ್ರಾಮದ ನೆಮ್ಮದಿಗೆ ಭಂಗವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.</p>.<p>‘ಮದ್ಯದ ಹಾವಳಿಯಿಂದ ಕುಟುಂಬಗಳಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಮದ್ಯದ ಚಟಕ್ಕೆ ಬಲಿಯಾದವರು ಮಕ್ಕಳ ವಿದ್ಯಾಭ್ಯಾಸದ, ತುರ್ತು ಸಂದರ್ಭದ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಬೀಳದಿದ್ದರೆ ತೀವ್ರ ಪ್ರತಿಭಟನೆ ನಡೆಸುತ್ತೇವೆ’ ಎಂದು ಗ್ರಾಮಸ್ಥರಾದ ಗೀತಾ ಎಚ್ಚರಿಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಯಶಂಕರ್, ‘ಅಬಕಾರಿ ಇಲಾಖೆಯವರು ಕಣ್ಮುಚ್ಚಿ ಕುಳಿತಿದ್ದಾರೆ. ಪೊಲೀಸರೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಿದರು.</p>.<p>ನಿಂಗೇಗೌಡ, ಲತೇಶ್ ಆರ್.ಆರ್., ಗಂಗಾಧರ, ರಾಮನಹಳ್ಳಿ ಯೋಗೇಶ, ಜಗದೀಶ್, ಮೋಹನಕುಮಾರ, ಸುಧಾಕರ, ಪರಮೇಶ್, ಮಣಿ, ರೂಪಾ, ಮೀನಾಕ್ಷಿ, ಸುಜಾತಾ, ನೀಲಾವತಿ, ಶಾರದಾ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-36-2041770367</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಳೇಬೀಡು: ಶಾಲೆಯ ಸುತ್ತಲಿನ ಮನೆಗಳಲ್ಲಿ ಹಾಗೂ ಸಣ್ಣ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಹಳ್ಳಿಗಳಲ್ಲಿ ಜನಜೀವನ ಹದಗೆಟ್ಟಿದೆ ಎಂದು ಆರೋಪಿಸಿ ರಾಜನಶಿರಿಯೂರು ಗ್ರಾಮಸ್ಥರು ಈಚೆಗೆ ಪ್ರತಿಭಟನೆ ನಡೆಸಿದರು.</p>.<p>ರಾಜನಶಿರಿಯೂರು, ಬಂಡಿಲಕ್ಕನಕೊಪ್ಪಲು, ಕಲ್ಲು ಶೆಟ್ಟಿಹಳ್ಳಿ ಕೇರೆಕೋಡಿ ಗ್ರಾಮಗಳಲ್ಲಿ ಮದ್ಯ ಅಕ್ರಮ ಮಾರಾಟದಿಂದ ಗ್ರಾಮದ ನೆಮ್ಮದಿಗೆ ಭಂಗವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.</p>.<p>‘ಮದ್ಯದ ಹಾವಳಿಯಿಂದ ಕುಟುಂಬಗಳಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ. ಮದ್ಯದ ಚಟಕ್ಕೆ ಬಲಿಯಾದವರು ಮಕ್ಕಳ ವಿದ್ಯಾಭ್ಯಾಸದ, ತುರ್ತು ಸಂದರ್ಭದ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಬೀಳದಿದ್ದರೆ ತೀವ್ರ ಪ್ರತಿಭಟನೆ ನಡೆಸುತ್ತೇವೆ’ ಎಂದು ಗ್ರಾಮಸ್ಥರಾದ ಗೀತಾ ಎಚ್ಚರಿಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಯಶಂಕರ್, ‘ಅಬಕಾರಿ ಇಲಾಖೆಯವರು ಕಣ್ಮುಚ್ಚಿ ಕುಳಿತಿದ್ದಾರೆ. ಪೊಲೀಸರೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಿದರು.</p>.<p>ನಿಂಗೇಗೌಡ, ಲತೇಶ್ ಆರ್.ಆರ್., ಗಂಗಾಧರ, ರಾಮನಹಳ್ಳಿ ಯೋಗೇಶ, ಜಗದೀಶ್, ಮೋಹನಕುಮಾರ, ಸುಧಾಕರ, ಪರಮೇಶ್, ಮಣಿ, ರೂಪಾ, ಮೀನಾಕ್ಷಿ, ಸುಜಾತಾ, ನೀಲಾವತಿ, ಶಾರದಾ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-36-2041770367</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>