<p>ಹಳೇಬೀಡು: ಭಾರತೀಯ ರೆಡ್ ಕ್ರಾಸ್ ಬೇಲೂರು ತಾಲ್ಲೂಕು ಘಟಕದ ಆಶ್ರಯದಲ್ಲಿ ಮಂಗಳವಾರ ವಿಶ್ವ ಮಲೇರಿಯಾ ದಿನದ ಅಂಗವಾಗಿ ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.</p>.<p>ಬೇಲೂರಿನ ತಾಲ್ಲೂಕು ರೆಡ್ ಕ್ರಾಸ್ ಸಂಸ್ಥೆ, ರೋಟರಿ ಕ್ಲಬ್, ತಾಲ್ಲೂಕು ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.</p>.<p>ಭಾರತೀಯ ರೆಡ್ ಕ್ರಾಸ್ ತಾಲ್ಲೂಕು ಘಟಕ ಸಭಾಪತಿ ವೈ.ಎನ್.ಸಿದ್ದೇಗೌಡ ಮಾತನಾಡಿ, ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ. ಆರೋಗ್ಯದ ದೃಷ್ಟಿಯಿಂದ ಕುಡಿಯುವ ನೀರಿನ ಸಂರಕ್ಷಣೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣದತ್ತ ಜನರು ಗಮನ ಹರಿಸಬೇಕು ಎಂದರು.</p>.<p>ವೈದ್ಯಾಧಿಕಾರಿ ಬಾ.ಅನುಪಮ ಶೆಟ್ಟಿ ಮಾತನಾಡಿದರು. ಐಸಿಟಿಸಿ ಸಿಬ್ಬಂದಿ ಧರಣೇಶ್ ಏಡ್ಸ್ ಕುರಿತು ಜಾಗೃತಿ ಮೂಡಿಸಿದರು. ಎನ್ಸಿಡಿ ವಿಭಾಗದ ಹಾಲೇಶ್ ರಕ್ತದೊತ್ತಡ, ಮಧುಮೇಹದ ಮಾಹಿತಿ ನೀಡಿದರು.</p>.<p>ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸೇರಿ ವಿವಿಧ ಸಂಘಸಂಸ್ಥೆಗಳಲ್ಲಿ ಅಮೋಘವಾದ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಮುತ್ತಗನ್ನೆ ರಾಜಕುಮಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 50 ಮಂದಿ ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದರು.</p>.<p>ರೆಡ್ ಕ್ರಾಸ್ ತಾಲ್ಲೂಕು ಕಾರ್ಯದರ್ಶಿ ಧನಂಜಯ ನಿರೂಪಿಸಿದರು. ಬ್ಯಾಡಿಗೆರೆ ರಾಜಶೇಖರ್ ಸ್ವಾಗತಿಸಿದರು. ಚಂದನ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-36-910715371</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಳೇಬೀಡು: ಭಾರತೀಯ ರೆಡ್ ಕ್ರಾಸ್ ಬೇಲೂರು ತಾಲ್ಲೂಕು ಘಟಕದ ಆಶ್ರಯದಲ್ಲಿ ಮಂಗಳವಾರ ವಿಶ್ವ ಮಲೇರಿಯಾ ದಿನದ ಅಂಗವಾಗಿ ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.</p>.<p>ಬೇಲೂರಿನ ತಾಲ್ಲೂಕು ರೆಡ್ ಕ್ರಾಸ್ ಸಂಸ್ಥೆ, ರೋಟರಿ ಕ್ಲಬ್, ತಾಲ್ಲೂಕು ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.</p>.<p>ಭಾರತೀಯ ರೆಡ್ ಕ್ರಾಸ್ ತಾಲ್ಲೂಕು ಘಟಕ ಸಭಾಪತಿ ವೈ.ಎನ್.ಸಿದ್ದೇಗೌಡ ಮಾತನಾಡಿ, ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ. ಆರೋಗ್ಯದ ದೃಷ್ಟಿಯಿಂದ ಕುಡಿಯುವ ನೀರಿನ ಸಂರಕ್ಷಣೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣದತ್ತ ಜನರು ಗಮನ ಹರಿಸಬೇಕು ಎಂದರು.</p>.<p>ವೈದ್ಯಾಧಿಕಾರಿ ಬಾ.ಅನುಪಮ ಶೆಟ್ಟಿ ಮಾತನಾಡಿದರು. ಐಸಿಟಿಸಿ ಸಿಬ್ಬಂದಿ ಧರಣೇಶ್ ಏಡ್ಸ್ ಕುರಿತು ಜಾಗೃತಿ ಮೂಡಿಸಿದರು. ಎನ್ಸಿಡಿ ವಿಭಾಗದ ಹಾಲೇಶ್ ರಕ್ತದೊತ್ತಡ, ಮಧುಮೇಹದ ಮಾಹಿತಿ ನೀಡಿದರು.</p>.<p>ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸೇರಿ ವಿವಿಧ ಸಂಘಸಂಸ್ಥೆಗಳಲ್ಲಿ ಅಮೋಘವಾದ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಮುತ್ತಗನ್ನೆ ರಾಜಕುಮಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 50 ಮಂದಿ ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದರು.</p>.<p>ರೆಡ್ ಕ್ರಾಸ್ ತಾಲ್ಲೂಕು ಕಾರ್ಯದರ್ಶಿ ಧನಂಜಯ ನಿರೂಪಿಸಿದರು. ಬ್ಯಾಡಿಗೆರೆ ರಾಜಶೇಖರ್ ಸ್ವಾಗತಿಸಿದರು. ಚಂದನ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-36-910715371</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>