ಮಧ್ಯಾಹ್ನ 2 ಗಂಟೆಯಿಂದ ಸಂಜೆಯವರೆಗೂ ತಾಲ್ಲೂಕು ಆಡಳಿತ, ಪೊಲೀಸ್, ಆರೋಗ್ಯ ಸಿಬ್ಬಂದಿ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಯವರು ಹೇಳಿದರೂ ರೋಗಿಗಳು ಆರೈಕೆ ಕೆಂದ್ರಕ್ಕೆ ತೆರಳಲಿಲ್ಲ. ತಹಶೀಲ್ದಾರ್ ಎನ್.ವಿ. ನಟೇಶ್, ಸರ್ಕಲ್ ಇನ್ಸ್ಪೆಕ್ಟರ್ ಶ್ರೀಕಾಂತ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವಿಜಯ್ ಕೋವಿಡ್ ರೋಗಿಗಳ ಮನೆಗಳ ಮುಂದೆ ನಿಂತು ಆರೈಕೆ ಕೆಂದ್ರದಲ್ಲಿ ಸೌಲಭ್ಯದ ಕೊರತೆ ಇಲ್ಲ. ನಿಮ್ಮ ಆರೋಗ್ಯ ಸುಧಾರಿಸುತ್ತದೆ. ಗ್ರಾಮದಲ್ಲಿ ಮತ್ತಷ್ಟು ಜನರಿಗೆ ರೋಗ ಹರಡುವುದು ತಪ್ಪುತ್ತದೆ ಎಂದು ವಿವರಿಸಿದರು.