<p>ಹಾಸನ: ನಗರ ಸೇರಿದಂತೆ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಶನಿವಾರ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<p>ರೈಲ್ವೆ ನಿಲ್ದಾಣದ ಎದುರಿನ ಮಾರುತಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಪೂಜಾ ಕಾರ್ಯಗಳು ನಡೆದವು. ದೇವರ ಮೂರ್ತಿಯನ್ನು ಹೂವಿನಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.</p>.<p>ದೇವಿಗೆರೆ ಸರ್ಕಲ್ ಬಳಿ ನೀರುವಾಗಿಲು ಆಂಜನೇಯ, ಸೀತಾ ರಾಮಾಂಜನೇಯ ದೇವಸ್ಥಾನ, ಆಡುವಳ್ಳಿ, ದೊಡ್ಡಪುರದ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಗ್ರಾಮೀಣ ಭಾಗಗಳಲ್ಲಿಯೂ ಹನುಮ ಜಯಂತಿಯನ್ನು ಆಚರಿಸಲಾಯಿತು. ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.</p>.<p>ಕೊರೊನಾ ಸೋಂಕು ಭೀತಿಯಿಂದಾಗಿ ಕಳೆದ ವರ್ಷ ಹನುಮ ಜಯಂತಿ ಕಳೆಗುಂದಿತ್ತು. ಈ ವರ್ಷ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಇಳಿಕೆಯಾದ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ನಗರ ಸೇರಿದಂತೆ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಶನಿವಾರ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<p>ರೈಲ್ವೆ ನಿಲ್ದಾಣದ ಎದುರಿನ ಮಾರುತಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಪೂಜಾ ಕಾರ್ಯಗಳು ನಡೆದವು. ದೇವರ ಮೂರ್ತಿಯನ್ನು ಹೂವಿನಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.</p>.<p>ದೇವಿಗೆರೆ ಸರ್ಕಲ್ ಬಳಿ ನೀರುವಾಗಿಲು ಆಂಜನೇಯ, ಸೀತಾ ರಾಮಾಂಜನೇಯ ದೇವಸ್ಥಾನ, ಆಡುವಳ್ಳಿ, ದೊಡ್ಡಪುರದ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಗ್ರಾಮೀಣ ಭಾಗಗಳಲ್ಲಿಯೂ ಹನುಮ ಜಯಂತಿಯನ್ನು ಆಚರಿಸಲಾಯಿತು. ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.</p>.<p>ಕೊರೊನಾ ಸೋಂಕು ಭೀತಿಯಿಂದಾಗಿ ಕಳೆದ ವರ್ಷ ಹನುಮ ಜಯಂತಿ ಕಳೆಗುಂದಿತ್ತು. ಈ ವರ್ಷ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಇಳಿಕೆಯಾದ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>