‘₹ 10 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿದ್ದು, ಕಳಪೆ ವಸ್ತುಗಳನ್ನು ಬಳಸಲಾಗಿದೆ. ಭಾರೀ ಗಾಳಿಗೆ ಚಾವಣಿ ಹಾರಿ ಹೋಗಿದೆ. ಈ ಬಗ್ಗೆ ಎಂಜಿನಿಯರ್ ಅವರನ್ನು ಪ್ರಶ್ನಿಸಿದರೆ ಉಡಾಫೆ ಉತ್ತರ ನೀಡುತ್ತಾರೆ. ಸಂಬಂಧಪಟ್ವ ಎಂಜಿನಿಯರ್ ಅವರನ್ನು ಅಮಾನತುಗೊಳಿಸಬೇಕು’ ಎಂದು ಹನುಮಂತಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರು, ನಿವಾಸಿಗಳಾದ ಮೊಗಣ್ಣಗೌಡ, ರವಿ, ಅಗಿಲೆ ನವೀನ್, ಅಗಿಲೆ ಯೋಗೀಶ್ ಆಗ್ರಹಿಸಿದರು.