<p><strong>ಹಾಸನ:</strong> ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ಹೇಗೆ ಎಂಬುದೇ ನಮ್ಮ ಮುಂದಿನ ಸವಾಲಾಗಿದ್ದು, ಇದಕ್ಕೆ ಪ್ರತಿಯೊಬ್ಬ ಪ್ರಜೆ ಕೈಜೋಡಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅಭಿಪ್ರಾಯಪಟ್ಟರು.</p>.<p>ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿಗೆ ಭೇಟಿ ನೀಡಿದ ವೇಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಬೇಕು. ಪ್ರಸ್ತುತ ಸನ್ನಿವೇಶದಲ್ಲಿ ಬದಲಾವಣೆಗೆ ಪ್ರತಿಯೊಬ್ಬರು ಸಿದ್ದರಾಗಬೇಕು. ಯಾವುದೇ ಕೆಲಸವಾದರೂ ಶ್ರದ್ಧೆ, ನಿಷ್ಠೆ, ಸೇವೆ ಎಂಬುದು ಮುಖ್ಯವಾಗುತ್ತದೆ. ಪ್ರಸ್ತುತ ಸಮಾಜದಲ್ಲಿ ಬದಲಾವಣೆಯ ಪುಟ ಬರೆಯಬೇಕಿರುವುದು ಯುವ ಸಮುದಾಯ’ ಎಂದರು.</p>.<p>ಕಾನೂನನ್ನು ಅರಿತ ಮಹಿಳೆ ಶಕ್ತಳಾಗುತ್ತಾಳೆ ಎಂದ ಅವರು, ಮಹಿಳೆಯರ ಸಂರಕ್ಷಣೆಗೆ ಇರುವ ಮೊಬೈಲ್ ಅಪ್ಲಿಕೇಷನ್ಗಳ ಕುರಿತು ಜಾಗೃತಿ ಮೂಡಿಸಿದರು.</p>.<p>‘ಜ್ಞಾನವೇ ದೇವರು, ಅಜ್ಞಾನವೇ ಸಾವು ಎಂಬ ಅಂಬೇಡ್ಕರ್ ವಾಕ್ಯವನ್ನು ನಮ್ಮಲ್ಲಿ ರೂಢಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಆರ್ಥಿಕವಾಗಿ ಸಬಲವಾಗಬೇಕು’ ಎಂದರು.</p>.<p>ನಗರದ ಸೆನ್ ಪೊಲೀಸ್ ಠಾಣೆಯ ಪಿಎಸ್ಐ ಮಧು ಎಂ.ಸಿ. ಮಾತನಾಡಿ,‘ಪೊಲೀಸ್ ಎಂಬುದು ಭಯ ಅಲ್ಲ; ಭರವಸೆ. ವಿದ್ಯಾರ್ಥಿಗಳು ಮೊಬೈಲ್ ಫೋನ್ ದಾಸರಾಗಬೇಡಿ. ಶ್ರಮದ ಓದಿನಿಂದ ಉತ್ತಮ ಫಲ ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<p>ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ದೂರುಗಳನ್ನು ನೀಡಲು ಭಯ ಪಡದೇ ಮುಂದೆ ಬನ್ನಿ ಎಂದರು.</p>.<p>ಪ್ರಾಂಶುಪಾಲ ಡಾ.ಎಂ.ಬಿ. ಇರ್ಷಾದ್ ಮಾತನಾಡಿ, ‘ಪದವಿಯನ್ನು ಎಲ್ಲ ವಿಶ್ವವಿದ್ಯಾಲಯಗಳು ನೀಡುತ್ತವೆ. ಸಂಸ್ಕಾರವನ್ನು ಕೊಡುವ ಕೆಲಸ ಆಗಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್, ಶೈಕ್ಷಣಿಕ ಡೀನ್ ರಾಜು ಡಿ.ಎಸ್, ಪರೀಕ್ಷಾ ನಿಯಂತ್ರಕ ಡಾ.ಮುರಳೀಧರ ಕೆ.ಡಿ., ಪತ್ರಾಂಕಿತ ವ್ಯವಸ್ಥಾಪಕ ಸತ್ಯಮೂರ್ತಿ ಕೆ.ಟಿ, ಎಲ್ಲ ವಿಭಾಗಗಳ ಪ್ರಾಧ್ಯಾಪಕರು, ಉಪನ್ಯಾಸಕರು ಇದ್ದರು.</p>.<div><blockquote>ಕನಸು ಯಾವಾಗಲೂ ದೊಡ್ಡದಾಗಿರಬೇಕು. ಸಮ ಸಮಾಜದ ನಿರ್ಮಾಣಕ್ಕೆ ಲಿಂಗ ತಾರತಮ್ಯ ಇಲ್ಲದೇ ಒಗ್ಗೂಡಬೇಕಿದೆ </blockquote><span class="attribution">– ಡಾ.ನಾಗಲಕ್ಷ್ಮಿ ಚೌಧರಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ಹೇಗೆ ಎಂಬುದೇ ನಮ್ಮ ಮುಂದಿನ ಸವಾಲಾಗಿದ್ದು, ಇದಕ್ಕೆ ಪ್ರತಿಯೊಬ್ಬ ಪ್ರಜೆ ಕೈಜೋಡಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅಭಿಪ್ರಾಯಪಟ್ಟರು.</p>.<p>ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿಗೆ ಭೇಟಿ ನೀಡಿದ ವೇಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಬೇಕು. ಪ್ರಸ್ತುತ ಸನ್ನಿವೇಶದಲ್ಲಿ ಬದಲಾವಣೆಗೆ ಪ್ರತಿಯೊಬ್ಬರು ಸಿದ್ದರಾಗಬೇಕು. ಯಾವುದೇ ಕೆಲಸವಾದರೂ ಶ್ರದ್ಧೆ, ನಿಷ್ಠೆ, ಸೇವೆ ಎಂಬುದು ಮುಖ್ಯವಾಗುತ್ತದೆ. ಪ್ರಸ್ತುತ ಸಮಾಜದಲ್ಲಿ ಬದಲಾವಣೆಯ ಪುಟ ಬರೆಯಬೇಕಿರುವುದು ಯುವ ಸಮುದಾಯ’ ಎಂದರು.</p>.<p>ಕಾನೂನನ್ನು ಅರಿತ ಮಹಿಳೆ ಶಕ್ತಳಾಗುತ್ತಾಳೆ ಎಂದ ಅವರು, ಮಹಿಳೆಯರ ಸಂರಕ್ಷಣೆಗೆ ಇರುವ ಮೊಬೈಲ್ ಅಪ್ಲಿಕೇಷನ್ಗಳ ಕುರಿತು ಜಾಗೃತಿ ಮೂಡಿಸಿದರು.</p>.<p>‘ಜ್ಞಾನವೇ ದೇವರು, ಅಜ್ಞಾನವೇ ಸಾವು ಎಂಬ ಅಂಬೇಡ್ಕರ್ ವಾಕ್ಯವನ್ನು ನಮ್ಮಲ್ಲಿ ರೂಢಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಆರ್ಥಿಕವಾಗಿ ಸಬಲವಾಗಬೇಕು’ ಎಂದರು.</p>.<p>ನಗರದ ಸೆನ್ ಪೊಲೀಸ್ ಠಾಣೆಯ ಪಿಎಸ್ಐ ಮಧು ಎಂ.ಸಿ. ಮಾತನಾಡಿ,‘ಪೊಲೀಸ್ ಎಂಬುದು ಭಯ ಅಲ್ಲ; ಭರವಸೆ. ವಿದ್ಯಾರ್ಥಿಗಳು ಮೊಬೈಲ್ ಫೋನ್ ದಾಸರಾಗಬೇಡಿ. ಶ್ರಮದ ಓದಿನಿಂದ ಉತ್ತಮ ಫಲ ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<p>ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ದೂರುಗಳನ್ನು ನೀಡಲು ಭಯ ಪಡದೇ ಮುಂದೆ ಬನ್ನಿ ಎಂದರು.</p>.<p>ಪ್ರಾಂಶುಪಾಲ ಡಾ.ಎಂ.ಬಿ. ಇರ್ಷಾದ್ ಮಾತನಾಡಿ, ‘ಪದವಿಯನ್ನು ಎಲ್ಲ ವಿಶ್ವವಿದ್ಯಾಲಯಗಳು ನೀಡುತ್ತವೆ. ಸಂಸ್ಕಾರವನ್ನು ಕೊಡುವ ಕೆಲಸ ಆಗಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್, ಶೈಕ್ಷಣಿಕ ಡೀನ್ ರಾಜು ಡಿ.ಎಸ್, ಪರೀಕ್ಷಾ ನಿಯಂತ್ರಕ ಡಾ.ಮುರಳೀಧರ ಕೆ.ಡಿ., ಪತ್ರಾಂಕಿತ ವ್ಯವಸ್ಥಾಪಕ ಸತ್ಯಮೂರ್ತಿ ಕೆ.ಟಿ, ಎಲ್ಲ ವಿಭಾಗಗಳ ಪ್ರಾಧ್ಯಾಪಕರು, ಉಪನ್ಯಾಸಕರು ಇದ್ದರು.</p>.<div><blockquote>ಕನಸು ಯಾವಾಗಲೂ ದೊಡ್ಡದಾಗಿರಬೇಕು. ಸಮ ಸಮಾಜದ ನಿರ್ಮಾಣಕ್ಕೆ ಲಿಂಗ ತಾರತಮ್ಯ ಇಲ್ಲದೇ ಒಗ್ಗೂಡಬೇಕಿದೆ </blockquote><span class="attribution">– ಡಾ.ನಾಗಲಕ್ಷ್ಮಿ ಚೌಧರಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>