ನಾಲ್ಕು ದಶಕದ ಹಿಂದೆ ಹೇಮಾವತಿ ನದಿಗೆ ಗೊರೂರು ಬಳಿ ಅಣೆಕಟ್ಟು ನಿರ್ಮಾಣ ಮಾಡಿದ ದಿನದಿಂದ ಹಿನ್ನೀರು ಆವರಿಸಿ ಸಂಪರ್ಕ ತುಂಡಾಗಿತ್ತು. ಅಲೂರು ತಾಲ್ಲೂಕಿನ ಕರಿಗೌಡನಹಳ್ಳಿ, ಚಾಕನಹಳ್ಳಿ, ಹಸಗನೂರು ಗ್ರಾಮದವರು ಹಾಸನ ತಾಲ್ಲೂಕಿನ ದುಂಡನಾಯಕನಹಳ್ಳಿ, ಬಳ್ಳೆಕೆರೆ, ಮಲ್ಲಿಗೆವಾಳು ಗ್ರಾಮಗಳಲ್ಲಿ ತಮ್ಮ ಜಮೀನಿಗೆ ಹೋಗಿ ಬರಲು, ಸುಮಾರು 50 ಕಿ. ಮೀ. ಸುತ್ತಿ ಹೋಗುವ ಅನಿವಾರ್ಯತೆ ಎದುರಾಗಿತ್ತು. ಅಂದಿನಿಂದಲೂ ಸೇತುವೆ ನಿರ್ಮಾಣಕ್ಕೆ ಜನಸಾಮಾನ್ಯರ ಹೋರಾಟ ನಿರಂತರವಾಗಿ ನಡೆಯುತ್ತಿತ್ತು.