<p><strong>ಹಾಸನ</strong>: ನಗರದ ರೈಲ್ವೆ ನಿಲ್ದಾಣ ಸಮೀಪದ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಬೆಳಿಗ್ಗೆಯಿಂದ ಸಂಜೆವರೆಗೂ ವಿವಿಧ ಧಾರ್ಮಿಕ ಕಾರ್ಯ ಹಾಗೂ ಅನ್ನ ಸಂತರ್ಪಣೆ ನೆರವೇರಿತು.</p>.<p>ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ, 9 ಕ್ಕೆ ಮಾರುತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಮಧ್ಯಾಹ್ನ ಸಾವಿರಾರು ಮಂದಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಸಂಜೆ ಮಾರುತಿ ಉತ್ಸವ, ಮಹಾಮಂಗಳಾರತಿ ಹಾಗೂ ಉಯ್ಯಾಲೆ ಸೇವೆ ನೆರವೇರಿಸಲಾಯಿತು.</p>.<p>ದೇವಾಲಯದ ಅರ್ಚಕ ರಕ್ಷಿತ್ ಭಾರದ್ವಾಜ್ ಮಾತನಾಡಿ, ಕೆಎಸ್ಅರ್ಟಿಸಿ ಡಿಪೋ ಬಳಿಯ ಆಂಜನೇಯ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಸುತ್ತಿದ್ದು, ಮಾರುತಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಸಾವಿರಾರು ಜನರಿಗೆ ಅನ್ನದಾನ ಮಾಡಲಾಗಿದ್ದು, ಭಗವಂತನು ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.</p>.<p>ನಗರದ ದೇವಿಗೆರೆ ಬಳಿಯ ನೀಲುವಾಗಿಲು ಆಂಜನೇಯ ದೇವಸ್ಥಾನ ಹಾಗೂ ಜವರಾಯಪಟ್ಟಣದ ದೇವಸ್ಥಾನ ಸೇರಿದಂತೆ ವಿವಿಧ ಭಾಗಗಳಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆದವು. ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರದ ರೈಲ್ವೆ ನಿಲ್ದಾಣ ಸಮೀಪದ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಬೆಳಿಗ್ಗೆಯಿಂದ ಸಂಜೆವರೆಗೂ ವಿವಿಧ ಧಾರ್ಮಿಕ ಕಾರ್ಯ ಹಾಗೂ ಅನ್ನ ಸಂತರ್ಪಣೆ ನೆರವೇರಿತು.</p>.<p>ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ, 9 ಕ್ಕೆ ಮಾರುತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಮಧ್ಯಾಹ್ನ ಸಾವಿರಾರು ಮಂದಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಸಂಜೆ ಮಾರುತಿ ಉತ್ಸವ, ಮಹಾಮಂಗಳಾರತಿ ಹಾಗೂ ಉಯ್ಯಾಲೆ ಸೇವೆ ನೆರವೇರಿಸಲಾಯಿತು.</p>.<p>ದೇವಾಲಯದ ಅರ್ಚಕ ರಕ್ಷಿತ್ ಭಾರದ್ವಾಜ್ ಮಾತನಾಡಿ, ಕೆಎಸ್ಅರ್ಟಿಸಿ ಡಿಪೋ ಬಳಿಯ ಆಂಜನೇಯ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಸುತ್ತಿದ್ದು, ಮಾರುತಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಸಾವಿರಾರು ಜನರಿಗೆ ಅನ್ನದಾನ ಮಾಡಲಾಗಿದ್ದು, ಭಗವಂತನು ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.</p>.<p>ನಗರದ ದೇವಿಗೆರೆ ಬಳಿಯ ನೀಲುವಾಗಿಲು ಆಂಜನೇಯ ದೇವಸ್ಥಾನ ಹಾಗೂ ಜವರಾಯಪಟ್ಟಣದ ದೇವಸ್ಥಾನ ಸೇರಿದಂತೆ ವಿವಿಧ ಭಾಗಗಳಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆದವು. ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>