<p><strong>ಹಾಸನ:</strong> ನಗರದ ಡೈರಿ ವೃತ್ತದಿಂದ ಕಾಟಿಹಳ್ಳಿ ವೃತ್ತದವರೆಗಿನ ರಸ್ತೆ ಪಕ್ಕದ ಗೂಡಂಗಡಿಗಳನ್ನು ಮಹಾನಗರಪಾಲಿಕೆ ಅಧಿಕಾರಿಗಳ ನೇತೃತ್ವದಲ್ಲಿ ಗುರುವಾರ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು. </p>.<p>ದಿಢೀರ್ ಕಾರ್ಯಚರಣೆ ಆರಂಭಿಸಿದ್ದರಿಂದ, ಗೂಡಂಗಡಿಗಳ ವ್ಯಾಪಾರಿಗಳು– ಪಾಲಿಕೆ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು.</p>.<p>ರಸ್ತೆಯ ಎರಡು ಬದಿಯಲ್ಲೂ ಪಾದಚಾರಿ ಮಾರ್ಗ, ರಸ್ತೆ ಅತಿಕ್ರಮಣ ಮಾಡಿ ನಿರ್ಮಿಸಲಾಗಿದ್ದ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದರು.</p>.<p>‘ಏಕಾಏಕಿ ತೆರವು ಕಾರ್ಯಚರಣೆ ಮಾಡಲಾಗಿದೆ’ ಎಂದು ಕೆಲ ಗೂಡಂಗಡಿ ಮಾಲೀಕರು ದೂರಿದರು. ‘ಜೀವನೋಪಾಯಕ್ಕೆ ಇದ್ದ ಅಂಗಡಿಗಳು ಇಲ್ಲದಾಗಿದೆ. ಕುಟುಂಬ ನಿರ್ವಹಣೆ ಕಷ್ಟವಾಗಲಿದೆ’ ಎಂದು ಕೆಲ ಮಾಲೀಕರು ನೋವು ತೋಡಿಕೊಂಡರು.</p>.<p>‘ಅತಿಕ್ರಮಣ ತೆರವು ಹೆಸರಿನಲ್ಲಿ ಬಡವರ ಹೊಟ್ಟೆ ಮೇಲೆ ಹೊಡೆಯಲಾಗುತ್ತಿದೆ’ ಎಂದು ಅಸಮಾಧಾನ ತೋಡಿಕೊಂಡ ಗೂಡಂಗಡಿ ಮಾಲೀಕರು, ‘ಜೀವನೋಪಾಯಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಕಾರ್ಯಾಚರಣೆ ಮಾಡಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವೇಳೆ ಮಾತನಾಡಿದ ಪಾಲಿಕೆ ಆಯುಕ್ತ ಕೃಷ್ಣಮೂರ್ತಿ ಹಾಗೂ ಎಂಜಿನಿಯರ್ ಕವಿತಾ, ‘ನಗರದ ಸುಧಾರಣೆ ಮತ್ತು ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ನಗರದ ಡೈರಿ ವೃತ್ತದಿಂದ ಕಾಟಿಹಳ್ಳಿ ವೃತ್ತದವರೆಗಿನ ರಸ್ತೆ ಪಕ್ಕದ ಗೂಡಂಗಡಿಗಳನ್ನು ಮಹಾನಗರಪಾಲಿಕೆ ಅಧಿಕಾರಿಗಳ ನೇತೃತ್ವದಲ್ಲಿ ಗುರುವಾರ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು. </p>.<p>ದಿಢೀರ್ ಕಾರ್ಯಚರಣೆ ಆರಂಭಿಸಿದ್ದರಿಂದ, ಗೂಡಂಗಡಿಗಳ ವ್ಯಾಪಾರಿಗಳು– ಪಾಲಿಕೆ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು.</p>.<p>ರಸ್ತೆಯ ಎರಡು ಬದಿಯಲ್ಲೂ ಪಾದಚಾರಿ ಮಾರ್ಗ, ರಸ್ತೆ ಅತಿಕ್ರಮಣ ಮಾಡಿ ನಿರ್ಮಿಸಲಾಗಿದ್ದ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದರು.</p>.<p>‘ಏಕಾಏಕಿ ತೆರವು ಕಾರ್ಯಚರಣೆ ಮಾಡಲಾಗಿದೆ’ ಎಂದು ಕೆಲ ಗೂಡಂಗಡಿ ಮಾಲೀಕರು ದೂರಿದರು. ‘ಜೀವನೋಪಾಯಕ್ಕೆ ಇದ್ದ ಅಂಗಡಿಗಳು ಇಲ್ಲದಾಗಿದೆ. ಕುಟುಂಬ ನಿರ್ವಹಣೆ ಕಷ್ಟವಾಗಲಿದೆ’ ಎಂದು ಕೆಲ ಮಾಲೀಕರು ನೋವು ತೋಡಿಕೊಂಡರು.</p>.<p>‘ಅತಿಕ್ರಮಣ ತೆರವು ಹೆಸರಿನಲ್ಲಿ ಬಡವರ ಹೊಟ್ಟೆ ಮೇಲೆ ಹೊಡೆಯಲಾಗುತ್ತಿದೆ’ ಎಂದು ಅಸಮಾಧಾನ ತೋಡಿಕೊಂಡ ಗೂಡಂಗಡಿ ಮಾಲೀಕರು, ‘ಜೀವನೋಪಾಯಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಕಾರ್ಯಾಚರಣೆ ಮಾಡಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವೇಳೆ ಮಾತನಾಡಿದ ಪಾಲಿಕೆ ಆಯುಕ್ತ ಕೃಷ್ಣಮೂರ್ತಿ ಹಾಗೂ ಎಂಜಿನಿಯರ್ ಕವಿತಾ, ‘ನಗರದ ಸುಧಾರಣೆ ಮತ್ತು ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>