<p><strong>ಹಾಸನ:</strong> ಮನೆಗೆ ಕನ್ನ ಹಾಕಿ ಚಿನ್ನಾಭರಣ, ನಗದು ದೋಚುತ್ತಿರುವ ಕಳ್ಳರು, ಇದೀಗ ಜಮೀನಿನಲ್ಲಿ ಬೆಳೆದ ಬಾಳೆಗೊನೆಗಳನ್ನೂ ಕಳವು ಮಾಡಿದ್ದಾರೆ.</p>.<p>ಅರಸೀಕೆರೆ ತಾಳ್ಲೂಕಿನ ಮುದ್ದನಹಳ್ಳಿ ಗ್ರಾಮದ ಚಂದ್ರಶೇಖರ್ ನಾಯ್ಕ ಅವರು ಗೀಜಿಹಳ್ಳಿಯ ಜಮೀನಿನಲ್ಲಿ ಬಾಳೆ ತೋಟ ಮಾಡಿದ್ದು, ಫಸಲು ಕಟಾವಿಗೆ ಬಂದಿತ್ತು. ಮೇ 3 ರಂದು ಬಾಳೆಗಿಡಗಳಿಗೆ ನೀರು ಹಾಯಿಸಿ ಮನೆಗೆ ಬಂದಿದ್ದರು.</p>.<p>ಮೇ 4 ರಂದು ಜಮೀನಿಗೆ ಹೋಗಿ ನೋಡಿದಾಗ, ಬೆಳೆದಿದ್ದ 200 ಬಾಳೆಗೊನೆಗಳನ್ನು ಕಳವು ಮಾಡಲಾಗಿದ್ದು, ಇವುಗಳ ಅಂದಾಜು ಬೆಲೆ ₹1.40 ಲಕ್ಷ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಹಾಸನ</strong>: ಚನ್ನರಾಯಪಟ್ಟಣ ತಾಲ್ಲೂಕಿನ ಕತ್ತರಿಘಟ್ಟ ಗೇಟ್ ಬಳಿ ರಸ್ತೆ ಪಕ್ಕದ ಮೈಲಿ ಗಲ್ಲಿಗೆ ಡಿಕ್ಕಿ ಹೊಡೆದ ಕಾರು ಉರುಳಿ ಬಿದ್ದಿದ್ದು, ವ್ಯಕ್ತಿ ಮೃತಪಟ್ಟಿದ್ದಾರೆ.</p>.<p>ಬೆಳ್ಳಂದೂರಿನ ಆನಂದ್ ಗುರು ಮತ್ತು ದೀಪನ್ವಿತ್ ಗುರು ಎಂಬುವವರು ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತೀವ್ರ ಗಾಯಗೊಂಡಿದ್ದ ಇಬ್ಬರನ್ನೂ ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದೀಪನ್ವಿತ ಗುರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಆನಂದ್ ಗುರು ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-36-1921506769</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಮನೆಗೆ ಕನ್ನ ಹಾಕಿ ಚಿನ್ನಾಭರಣ, ನಗದು ದೋಚುತ್ತಿರುವ ಕಳ್ಳರು, ಇದೀಗ ಜಮೀನಿನಲ್ಲಿ ಬೆಳೆದ ಬಾಳೆಗೊನೆಗಳನ್ನೂ ಕಳವು ಮಾಡಿದ್ದಾರೆ.</p>.<p>ಅರಸೀಕೆರೆ ತಾಳ್ಲೂಕಿನ ಮುದ್ದನಹಳ್ಳಿ ಗ್ರಾಮದ ಚಂದ್ರಶೇಖರ್ ನಾಯ್ಕ ಅವರು ಗೀಜಿಹಳ್ಳಿಯ ಜಮೀನಿನಲ್ಲಿ ಬಾಳೆ ತೋಟ ಮಾಡಿದ್ದು, ಫಸಲು ಕಟಾವಿಗೆ ಬಂದಿತ್ತು. ಮೇ 3 ರಂದು ಬಾಳೆಗಿಡಗಳಿಗೆ ನೀರು ಹಾಯಿಸಿ ಮನೆಗೆ ಬಂದಿದ್ದರು.</p>.<p>ಮೇ 4 ರಂದು ಜಮೀನಿಗೆ ಹೋಗಿ ನೋಡಿದಾಗ, ಬೆಳೆದಿದ್ದ 200 ಬಾಳೆಗೊನೆಗಳನ್ನು ಕಳವು ಮಾಡಲಾಗಿದ್ದು, ಇವುಗಳ ಅಂದಾಜು ಬೆಲೆ ₹1.40 ಲಕ್ಷ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಹಾಸನ</strong>: ಚನ್ನರಾಯಪಟ್ಟಣ ತಾಲ್ಲೂಕಿನ ಕತ್ತರಿಘಟ್ಟ ಗೇಟ್ ಬಳಿ ರಸ್ತೆ ಪಕ್ಕದ ಮೈಲಿ ಗಲ್ಲಿಗೆ ಡಿಕ್ಕಿ ಹೊಡೆದ ಕಾರು ಉರುಳಿ ಬಿದ್ದಿದ್ದು, ವ್ಯಕ್ತಿ ಮೃತಪಟ್ಟಿದ್ದಾರೆ.</p>.<p>ಬೆಳ್ಳಂದೂರಿನ ಆನಂದ್ ಗುರು ಮತ್ತು ದೀಪನ್ವಿತ್ ಗುರು ಎಂಬುವವರು ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತೀವ್ರ ಗಾಯಗೊಂಡಿದ್ದ ಇಬ್ಬರನ್ನೂ ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದೀಪನ್ವಿತ ಗುರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಆನಂದ್ ಗುರು ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-36-1921506769</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>