<p>ಹಾಸನ: ಜಿಲ್ಲೆಗೂ ಕ್ಯಾನ್ಸರ್ ಚಿಕಿತ್ಸಾ ಸೇವೆಗಳ ಲಭ್ಯತೆಯನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ ಕ್ಲಿಯರ್ಮೆಡಿ ರೇಡಿಯಂಟ್ ಕ್ಯಾನ್ಸರ್ ಸೆಂಟರ್ ಸಂಸ್ಥೆಯು, ಚೈತನ್ಯ ಎನ್ಡಿಆರ್ಕೆ ಆಸ್ಪತ್ರೆ ಸಹಯೋಗದಲ್ಲಿ ಅಂಕೊಲಾಜಿ ಸೇವೆಗಳನ್ನು ಪ್ರಾರಂಭಿಸಿದೆ ಎಂದು ಕ್ಯಾನ್ಸರ್ ಸೆಂಟರ್ ನಿರ್ದೇಶಕ, ಕ್ಯಾನ್ಸರ್ ತಜ್ಞ ಡಾ.ಶ್ರೀನಿವಾಸ್ ಕೆ.ಜಿ. ತಿಳಿಸಿದರು.</p>.<p>ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿ ಬುಧವಾರ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಚೈತನ್ಯ ಎನ್ಡಿಆರ್ಕೆ ಆಸ್ಪತ್ರೆಯಲ್ಲಿ ವಿಶೇಷ ಹೊರ ರೋಗಿ ವಿಭಾಗ (ಒಪಿಡಿ) ಕಾರ್ಯನಿರ್ವಹಿಸಲಿದ್ದು, ಅನುಭವಿ ಕ್ಯಾನ್ಸರ್ ತಜ್ಞರಿಂದ ಸಮಾಲೋಚನೆ, ಮೌಲ್ಯಮಾಪನ ಹಾಗೂ ಮುಂದಿನ ಚಿಕಿತ್ಸೆಗೆ ಮಾರ್ಗದರ್ಶನ ನೀಡಲಾಗುತ್ತದೆ’ ಎಂದರು.</p>.<p>ಉದ್ಘಾಟನೆ ಪ್ರಯುಕ್ತ ಈ ತಿಂಗಳ ಅಂತ್ಯದವರೆಗೆ ಸಮಾಲೋಚನೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಸರ್ಜಿಕಲ್ ಅಂಕಾಲಾಜಿಸ್ಟ್ ಡಾ.ರಕ್ಷಿತ್ ಶೃಂಗೇರಿ ಪ್ರತಿ ಬುಧವಾರ ಲಭ್ಯರಾಗಲಿದ್ದಾರೆ ಎಂದು ವಿವರಿಸಿದರು.</p>.<p>‘ಕ್ಯಾನ್ಸರ್ ಚಿಕಿತ್ಸೆಯ ಲಭ್ಯತೆಯಲ್ಲಿರುವ ಅಂತರವನ್ನು ಕಡಿಮೆ ಮಾಡುವುದು ನಮ್ಮ ಉದ್ದೇಶವಾಗಿದೆ. ಆರಂಭಿಕ ಹಂತದಲ್ಲೇ ಪತ್ತೆ ಮತ್ತು ಚಿಕಿತ್ಸೆ ಪಡೆಯಲು ಈ ಸೇವೆಗಳು ಸಹಕಾರಿಯಾಗಲಿವೆ. ಪುರುಷರು ಮತ್ತು ಮಹಿಳೆಯರಿಬ್ಬರಿಗೂ ತಪಾಸಣೆ ಹಾಗೂ ಸಮಾಲೋಚನೆ ಸೌಲಭ್ಯ ಒದಗಿಸಲಾಗಿದೆ’ ಎಂದು ಹೇಳಿದರು.</p>.<p>ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6ರಿಂದ 8ರವರೆಗೆ ಚೈತನ್ಯ ಎನ್ಡಿಆರ್ಕೆ ಆಸ್ಪತ್ರೆಯಲ್ಲಿ ವಿಶೇಷ ಸಂಜೆ ಕ್ಯಾನ್ಸರ್ ಕ್ಲಿನಿಕ್ ಕೂಡ ಕಾರ್ಯನಿರ್ವಹಿಸಲಿದೆ. ಇಲ್ಲಿ ರೋಗನಿರ್ಣಯ, ಚಿಕಿತ್ಸಾ ಯೋಜನೆ ಮತ್ತು ಚಿಕಿತ್ಸೆಯ ನಂತರದ ಆರೈಕೆ ಸೇರಿದಂತೆ ಇತರೆ ಸೇವೆಗಳು ಲಭ್ಯವಿರುತ್ತವೆ ಎಂದು ತಿಳಿಸಿದರು.</p>.<p>ಡಾ. ರಕ್ಷಿತ್ ಶೃಂಗೇರಿ ಮಾತನಾಡಿ, ‘ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ಬಲಪಡಿಸುವ ಬದ್ಧತೆ ಹೊಂದಿದ್ದೇವೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-36-1859553480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಜಿಲ್ಲೆಗೂ ಕ್ಯಾನ್ಸರ್ ಚಿಕಿತ್ಸಾ ಸೇವೆಗಳ ಲಭ್ಯತೆಯನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ ಕ್ಲಿಯರ್ಮೆಡಿ ರೇಡಿಯಂಟ್ ಕ್ಯಾನ್ಸರ್ ಸೆಂಟರ್ ಸಂಸ್ಥೆಯು, ಚೈತನ್ಯ ಎನ್ಡಿಆರ್ಕೆ ಆಸ್ಪತ್ರೆ ಸಹಯೋಗದಲ್ಲಿ ಅಂಕೊಲಾಜಿ ಸೇವೆಗಳನ್ನು ಪ್ರಾರಂಭಿಸಿದೆ ಎಂದು ಕ್ಯಾನ್ಸರ್ ಸೆಂಟರ್ ನಿರ್ದೇಶಕ, ಕ್ಯಾನ್ಸರ್ ತಜ್ಞ ಡಾ.ಶ್ರೀನಿವಾಸ್ ಕೆ.ಜಿ. ತಿಳಿಸಿದರು.</p>.<p>ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿ ಬುಧವಾರ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಚೈತನ್ಯ ಎನ್ಡಿಆರ್ಕೆ ಆಸ್ಪತ್ರೆಯಲ್ಲಿ ವಿಶೇಷ ಹೊರ ರೋಗಿ ವಿಭಾಗ (ಒಪಿಡಿ) ಕಾರ್ಯನಿರ್ವಹಿಸಲಿದ್ದು, ಅನುಭವಿ ಕ್ಯಾನ್ಸರ್ ತಜ್ಞರಿಂದ ಸಮಾಲೋಚನೆ, ಮೌಲ್ಯಮಾಪನ ಹಾಗೂ ಮುಂದಿನ ಚಿಕಿತ್ಸೆಗೆ ಮಾರ್ಗದರ್ಶನ ನೀಡಲಾಗುತ್ತದೆ’ ಎಂದರು.</p>.<p>ಉದ್ಘಾಟನೆ ಪ್ರಯುಕ್ತ ಈ ತಿಂಗಳ ಅಂತ್ಯದವರೆಗೆ ಸಮಾಲೋಚನೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಸರ್ಜಿಕಲ್ ಅಂಕಾಲಾಜಿಸ್ಟ್ ಡಾ.ರಕ್ಷಿತ್ ಶೃಂಗೇರಿ ಪ್ರತಿ ಬುಧವಾರ ಲಭ್ಯರಾಗಲಿದ್ದಾರೆ ಎಂದು ವಿವರಿಸಿದರು.</p>.<p>‘ಕ್ಯಾನ್ಸರ್ ಚಿಕಿತ್ಸೆಯ ಲಭ್ಯತೆಯಲ್ಲಿರುವ ಅಂತರವನ್ನು ಕಡಿಮೆ ಮಾಡುವುದು ನಮ್ಮ ಉದ್ದೇಶವಾಗಿದೆ. ಆರಂಭಿಕ ಹಂತದಲ್ಲೇ ಪತ್ತೆ ಮತ್ತು ಚಿಕಿತ್ಸೆ ಪಡೆಯಲು ಈ ಸೇವೆಗಳು ಸಹಕಾರಿಯಾಗಲಿವೆ. ಪುರುಷರು ಮತ್ತು ಮಹಿಳೆಯರಿಬ್ಬರಿಗೂ ತಪಾಸಣೆ ಹಾಗೂ ಸಮಾಲೋಚನೆ ಸೌಲಭ್ಯ ಒದಗಿಸಲಾಗಿದೆ’ ಎಂದು ಹೇಳಿದರು.</p>.<p>ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6ರಿಂದ 8ರವರೆಗೆ ಚೈತನ್ಯ ಎನ್ಡಿಆರ್ಕೆ ಆಸ್ಪತ್ರೆಯಲ್ಲಿ ವಿಶೇಷ ಸಂಜೆ ಕ್ಯಾನ್ಸರ್ ಕ್ಲಿನಿಕ್ ಕೂಡ ಕಾರ್ಯನಿರ್ವಹಿಸಲಿದೆ. ಇಲ್ಲಿ ರೋಗನಿರ್ಣಯ, ಚಿಕಿತ್ಸಾ ಯೋಜನೆ ಮತ್ತು ಚಿಕಿತ್ಸೆಯ ನಂತರದ ಆರೈಕೆ ಸೇರಿದಂತೆ ಇತರೆ ಸೇವೆಗಳು ಲಭ್ಯವಿರುತ್ತವೆ ಎಂದು ತಿಳಿಸಿದರು.</p>.<p>ಡಾ. ರಕ್ಷಿತ್ ಶೃಂಗೇರಿ ಮಾತನಾಡಿ, ‘ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಸೇವೆಯನ್ನು ಬಲಪಡಿಸುವ ಬದ್ಧತೆ ಹೊಂದಿದ್ದೇವೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-36-1859553480</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>