<p><strong>ಹಾಸನ</strong>: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಹಾಸನ ಜಿಲ್ಲೆಯಲ್ಲಿ ‘ಸಾಂಸ್ಕೃತಿಕ ಸೌರಭ‘, ‘ಯುವ ಸೌರಭ’ ಮತ್ತು ‘ಚಿಗುರು’ ಕಾರ್ಯಕ್ರಮಗಳನ್ನು ಆಯೋಜಿಸಲು ಪ್ರತಿಭಾವಂತ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ನಿರ್ದೇಶಕ ತಾರಾನಾಥ್ ತಿಳಿಸಿದ್ದಾರೆ.</p>.<p>ಸಾಂಸ್ಕೃತಿಕ ಸೌರಭ: ಆಕಾಶವಾಣಿಯ ಬಿ-ಹೈ, ಎ ಗ್ರೇಡ್ ಕಲಾವಿದರು ಹಾಗೂ ಸರ್ಕಾರಿ ಪ್ರಶಸ್ತಿ ಪುರಸ್ಕೃತ ಕಲಾವಿದರು ಮಾತ್ರ ಅರ್ಜಿ ಸಲ್ಲಿಸಬಹುದು. ಶಾಸ್ತ್ರೀಯ ಸಂಗೀತ, ಕರ್ನಾಟಕ-ಹಿಂದೂಸ್ತಾನಿ ಗಾಯನ, ವಾದ್ಯ ಸಂಗೀತ, ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆ, ಸಮೂಹ ನೃತ್ಯ, ನೃತ್ಯ ರೂಪಕ, ಜನಪದ ಕಲೆ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ, ಗಮಕ, ಕಥಾ ಕೀರ್ತನೆ ಕಲಾಪ್ರಕಾರಗಳು.</p>.<p>ಯುವ ಸೌರಭ: 15 ರಿಂದ 30 ವರ್ಷ ವಯೋಮಾನದ ಪ್ರತಿಭಾವಂತ ಯುವ ಕಲಾವಿದರು ಅರ್ಜಿ ಸಲ್ಲಿಸಬಹುದು. ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆ, ಸಮೂಹ ನೃತ್ಯ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ.</p>.<p>ಚಿಗುರು:8 ರಿಂದ 14 ವರ್ಷ ವಯೋಮಾನದ ಪ್ರತಿಭಾವಂತ ಮಕ್ಕಳು ಅರ್ಜಿ ಸಲ್ಲಿಸಬಹುದು. ಶಾಸ್ತ್ರೀಯ ಸಂಗೀತ, ಗಾಯನ, ವಾದ್ಯ ಸಂಗೀತ, ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆ, ಸಮೂಹ ನೃತ್ಯ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ, ಏಕಪಾತ್ರಾಭಿನಯ.</p>.<p>ಅರ್ಜಿಗಳನ್ನು ಜೂನ್ 26ರೊಳಗೆ ಅಗತ್ಯ ದಾಖಲೆಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08172-267162 ಸಂಪರ್ಕಿಸ ಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-36-1166327883</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಹಾಸನ ಜಿಲ್ಲೆಯಲ್ಲಿ ‘ಸಾಂಸ್ಕೃತಿಕ ಸೌರಭ‘, ‘ಯುವ ಸೌರಭ’ ಮತ್ತು ‘ಚಿಗುರು’ ಕಾರ್ಯಕ್ರಮಗಳನ್ನು ಆಯೋಜಿಸಲು ಪ್ರತಿಭಾವಂತ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ನಿರ್ದೇಶಕ ತಾರಾನಾಥ್ ತಿಳಿಸಿದ್ದಾರೆ.</p>.<p>ಸಾಂಸ್ಕೃತಿಕ ಸೌರಭ: ಆಕಾಶವಾಣಿಯ ಬಿ-ಹೈ, ಎ ಗ್ರೇಡ್ ಕಲಾವಿದರು ಹಾಗೂ ಸರ್ಕಾರಿ ಪ್ರಶಸ್ತಿ ಪುರಸ್ಕೃತ ಕಲಾವಿದರು ಮಾತ್ರ ಅರ್ಜಿ ಸಲ್ಲಿಸಬಹುದು. ಶಾಸ್ತ್ರೀಯ ಸಂಗೀತ, ಕರ್ನಾಟಕ-ಹಿಂದೂಸ್ತಾನಿ ಗಾಯನ, ವಾದ್ಯ ಸಂಗೀತ, ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆ, ಸಮೂಹ ನೃತ್ಯ, ನೃತ್ಯ ರೂಪಕ, ಜನಪದ ಕಲೆ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ, ಗಮಕ, ಕಥಾ ಕೀರ್ತನೆ ಕಲಾಪ್ರಕಾರಗಳು.</p>.<p>ಯುವ ಸೌರಭ: 15 ರಿಂದ 30 ವರ್ಷ ವಯೋಮಾನದ ಪ್ರತಿಭಾವಂತ ಯುವ ಕಲಾವಿದರು ಅರ್ಜಿ ಸಲ್ಲಿಸಬಹುದು. ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆ, ಸಮೂಹ ನೃತ್ಯ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ.</p>.<p>ಚಿಗುರು:8 ರಿಂದ 14 ವರ್ಷ ವಯೋಮಾನದ ಪ್ರತಿಭಾವಂತ ಮಕ್ಕಳು ಅರ್ಜಿ ಸಲ್ಲಿಸಬಹುದು. ಶಾಸ್ತ್ರೀಯ ಸಂಗೀತ, ಗಾಯನ, ವಾದ್ಯ ಸಂಗೀತ, ಸುಗಮ ಸಂಗೀತ, ವಚನ ಸಂಗೀತ, ಜನಪದ ಗೀತೆ, ಸಮೂಹ ನೃತ್ಯ, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ, ಏಕಪಾತ್ರಾಭಿನಯ.</p>.<p>ಅರ್ಜಿಗಳನ್ನು ಜೂನ್ 26ರೊಳಗೆ ಅಗತ್ಯ ದಾಖಲೆಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08172-267162 ಸಂಪರ್ಕಿಸ ಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-36-1166327883</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>