<p><strong>ಹಾಸನ</strong>: ಹಾಸನಾಂಬ ಹಾಗೂ ಸಿದ್ದೇಶ್ವರ ದೇವಾಲಯದ ಆವರಣಕ್ಕೆ ಜಿಲ್ಲಾಧಿಕಾರಿ ಆರ್.ಗಿರೀಶ್ ಬುಧವಾರ ಭೇಟಿ ನೀಡಿ ಈ ಬಾರಿಯ ದರ್ಶನೋತ್ಸವದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಹಲವು ಸಲಹೆ, ಸೂಚನೆ ನೀಡಿದರು.</p>.<p>ದರ್ಶನೋತ್ಸವದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಕೋವಿಡ್ ಪ್ರಕರಣ ಹೆಚ್ಚುತ್ತಿರುವುದರಿಂದ ಸಾರ್ವಜನಿಕರಿಗೆ ದೇವಸ್ಥಾನದ ಒಳಗೆ ದೇವಿಯ ದರ್ಶನ ಮಾಡಲು ಅನುಮತಿ ಇಲ್ಲದ ಕಾರಣ ಎಲ್ಇಡಿ ಪರದೆಗಳನ್ನು ದೇವಸ್ಥಾನದ ಆವರಣ ಹಾಗೂ ನಗರದ ಇತರೆ ಭಾಗಗಳಲ್ಲಿ ಅಳವಡಿಸಲಾಗುತ್ತಿದ್ದು, ಅದಕ್ಕೆ ಆಯ್ಕೆ ಮಾಡಿರುವ ಸ್ಥಳಗಳನ್ನು ಪರಿಶೀಲಿಸಿದರು.</p>.<p>ಸಾರ್ವಜನಿಕರು ದೇವಾಲಯದ ಹೊರ ಆವರಣಕ್ಕೆ ಬಂದರೆ ಜನಸಂದಣಿ ಆಗದಂತೆ ಬ್ಯಾರಿಕೇಡ್ಗಳನ್ನು ಕ್ರಮಬದ್ಧವಾಗಿ<br />ಅಳವಡಿಸಬೇಕು. ದೇವಸ್ಥಾನದ ಸುತ್ತಮುತ್ತ ಇರುವ ರಸ್ತೆಗಳಲ್ಲಿ ಕೆಲವನ್ನು ಏಕಮುಖ ಸಂಚಾರ ವ್ಯವಸ್ಥೆ ಮಾಡಬೇಕು. ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಎಲ್ಲವನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು. ಲೈಟ್ ಸ್ಕ್ರೀನಿಂಗ್ ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.</p>.<p>ಇದೇ ವೇಳೆ ದೇವಸ್ಥಾನದ ಸುತ್ತಲಿನ ರಸ್ತೆ ವ್ಯವಸ್ಥೆ ಹಾಗೂ ಸಂತೇಪೇಟೆ ವೃತ್ತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿ ನಗರಸಭೆ, ಲೋಕೋಪಯೋಗಿ ಹಾಗೂ ರಾಜ್ಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಸಂಜಯ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಎಂಜಿನಿಯರ್ ಎನ್.ಟಿ. ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಹಾಸನಾಂಬ ಹಾಗೂ ಸಿದ್ದೇಶ್ವರ ದೇವಾಲಯದ ಆವರಣಕ್ಕೆ ಜಿಲ್ಲಾಧಿಕಾರಿ ಆರ್.ಗಿರೀಶ್ ಬುಧವಾರ ಭೇಟಿ ನೀಡಿ ಈ ಬಾರಿಯ ದರ್ಶನೋತ್ಸವದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಹಲವು ಸಲಹೆ, ಸೂಚನೆ ನೀಡಿದರು.</p>.<p>ದರ್ಶನೋತ್ಸವದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಕೋವಿಡ್ ಪ್ರಕರಣ ಹೆಚ್ಚುತ್ತಿರುವುದರಿಂದ ಸಾರ್ವಜನಿಕರಿಗೆ ದೇವಸ್ಥಾನದ ಒಳಗೆ ದೇವಿಯ ದರ್ಶನ ಮಾಡಲು ಅನುಮತಿ ಇಲ್ಲದ ಕಾರಣ ಎಲ್ಇಡಿ ಪರದೆಗಳನ್ನು ದೇವಸ್ಥಾನದ ಆವರಣ ಹಾಗೂ ನಗರದ ಇತರೆ ಭಾಗಗಳಲ್ಲಿ ಅಳವಡಿಸಲಾಗುತ್ತಿದ್ದು, ಅದಕ್ಕೆ ಆಯ್ಕೆ ಮಾಡಿರುವ ಸ್ಥಳಗಳನ್ನು ಪರಿಶೀಲಿಸಿದರು.</p>.<p>ಸಾರ್ವಜನಿಕರು ದೇವಾಲಯದ ಹೊರ ಆವರಣಕ್ಕೆ ಬಂದರೆ ಜನಸಂದಣಿ ಆಗದಂತೆ ಬ್ಯಾರಿಕೇಡ್ಗಳನ್ನು ಕ್ರಮಬದ್ಧವಾಗಿ<br />ಅಳವಡಿಸಬೇಕು. ದೇವಸ್ಥಾನದ ಸುತ್ತಮುತ್ತ ಇರುವ ರಸ್ತೆಗಳಲ್ಲಿ ಕೆಲವನ್ನು ಏಕಮುಖ ಸಂಚಾರ ವ್ಯವಸ್ಥೆ ಮಾಡಬೇಕು. ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಎಲ್ಲವನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು. ಲೈಟ್ ಸ್ಕ್ರೀನಿಂಗ್ ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.</p>.<p>ಇದೇ ವೇಳೆ ದೇವಸ್ಥಾನದ ಸುತ್ತಲಿನ ರಸ್ತೆ ವ್ಯವಸ್ಥೆ ಹಾಗೂ ಸಂತೇಪೇಟೆ ವೃತ್ತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿ ನಗರಸಭೆ, ಲೋಕೋಪಯೋಗಿ ಹಾಗೂ ರಾಜ್ಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಸಂಜಯ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಎಂಜಿನಿಯರ್ ಎನ್.ಟಿ. ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>