<p><strong>ಹಾಸನ:</strong> ‘ಜಿಲ್ಲೆಯ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆಯೋಜನೆಯಲ್ಲಿ ಜಿಲ್ಲಾಡಳಿತದಿಂದ ಪಾರದರ್ಶಕ ಕೆಲಸ ಆಗುತ್ತಿಲ್ಲ’ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿದರು.</p><p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಯಮದಂತೆ ತಹಶೀಲ್ದಾರ್, ಉಪವಿಭಾಗಾಧಿಕಾರಿ ದೇವಸ್ಥಾನ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಮೇಲುಸ್ತುವಾರಿಯಾಗಿ ಜಿಲ್ಲಾಧಿಕಾರಿ ಇರುತ್ತಾರೆ. ಆದರೆ ಇವರ ಆಡಳಿತ ಸಂಪೂರ್ಣ ಹದಗೆಟ್ಟಿ ಹೋಗಿದೆ’ ಎಂದು ದೂರಿದರು.</p>.<p>‘ಈ ಬಾರಿ ವಿಐಪಿ, ವಿವಿಐಪಿ ಪಾಸ್ ರದ್ದು ಮಾಡಲಾಗಿದೆ. ಗೋಲ್ಡನ್ ಪಾಸ್ ವಿತರಿಸುವ ಕುರಿತು ನಿರ್ಧರಿಸಲಾಗಿದೆ. ಆದರೆ ಈ ಬಗ್ಗೆ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಈ ಪಾಸ್ಗಳನ್ನು ಯಾರಿಗೆ ನೀಡಲಾಗಿದೆ ಎಂಬುದನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನಮಗೆ ತಿಳಿದಿರುವ ಮಾಹಿತಿಯಂತೆ ಪ್ರತಿದಿನ ಒಂದು ಸಾವಿರ ಪಾಸಿನಂತೆ 18 ಸಾವಿರ ಪಾಸ್ ಮುದ್ರಿಸಲು ತೀರ್ಮಾನಿಸಲಾಗಿತ್ತು. ಆದರೆ ಈಗಾಗಲೇ 40 ಸಾವಿರ ಪಾಸ್ಗಳನ್ನು ಮುದ್ರಿಸಲಾಗಿದೆ’ ಎಂದರು.</p>.<p>‘ಕಳೆದ ಬಾರಿ ಶೇ 5ರಷ್ಟು ಪಾಸ್ಗಳು ಅಧಿಕೃತವಾಗಿ ಮುದ್ರಿತವಾದರೆ, ಉಳಿದ ಶೇ 95ರಷ್ಟು ಪಾಸ್ಗಳು ಅನಧಿಕೃತವಾಗಿ ಮುದ್ರಿತವಾಗಿದ್ದವು. ಇದರಿಂದ ಸಾಕಷ್ಟು ಅವ್ಯವಹಾರ ನಡೆದಿದೆ. ಈ ಬಗ್ಗೆ ದೇವಸ್ಥಾನ ಆಡಳಿತ ಅಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳೇ ಒಪ್ಪಿಕೊಂಡಿದ್ದಾರೆ’ ಎಂದು ತಿಳಿಸಿದರು.</p>.<p>‘ಜಾತ್ರಾ ಮಹೋತ್ಸವದ ನಿಮಿತ್ತ ನಗರದಲ್ಲಿ ಅಳವಡಿಸುವ ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ದೀಪಾಲಂಕಾರ ಸೇರಿದಂತೆ ಇತರೆ ಟೆಂಡರ್ಗಳನ್ನು ಬೇಕಾಬಿಟ್ಟಿಯಾಗಿ ಮಾಡಲಾಗಿದೆ. ಜರ್ಮನ್ ಟೆಂಟ್ ಹಾಗೂ ಬ್ಯಾರಿಕೇಡ್ ನಿರ್ಮಿಸಲು ₹ 60 ಲಕ್ಷದಿಂದ ₹ 65 ಲಕ್ಷ ಸಾಕಾಗುತ್ತದೆ. ಆದರೆ ₹ 86.99 ಲಕ್ಷಕ್ಕೆ ಟೆಂಡರ್ ನೀಡಲಾಗಿದೆ. ನಗರದಲ್ಲಿ ಅಳವಡಿಸಲು ಸಿಸಿಟಿವಿ ಕ್ಯಾಮೆರಾ ಖರೀದಿ ಮಾಡಿದರೂ ₹ 20 ಲಕ್ಷ ವೆಚ್ಚವಾಗುತ್ತದೆ. ಆದರೆ ಬಾಡಿಗೆ ಪಡೆದಿರುವುದು ಏಕೆ? ಇದರಿಂದ ಲಕ್ಷಾಂತರ ರೂಪಾಯಿ ಸಾರ್ವಜನಿಕರ ಹಣ ಪೋಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ಜಾತ್ರೆ ಸಂದರ್ಭದಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಬಳಕೆಗೆ ವಾಕಿಟಾಕಿಯನ್ನು ₹ 12 ಲಕ್ಷ ವೆಚ್ಚದಲ್ಲಿ ಬಾಡಿಗೆ ಪಡೆಯಲಾಗುತ್ತಿದೆ. ಇದರಲ್ಲಿಯೂ ಅವ್ಯವಹಾರ ನಡೆದಿದೆ’ ಎಂದರು.</p>.<p>‘ಪ್ರತಿ ವರ್ಷ ಟೆಂಡರ್ ಪಾರದರ್ಶಕವಾಗಿ ನಡೆಯುತ್ತಿಲ್ಲ. ನಾಗರಾಜ್ ಎಂಬ ಗುತ್ತಿಗೆದಾರರಿಗೆ ಪ್ರತಿ ವರ್ಷ ಟೆಂಡರ್ ನೀಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅವ್ಯವಹಾರ ನಡೆಯುತ್ತಲೇ ಇದ್ದರೂ ಜಿಲ್ಲಾಡಳಿತ ಮೌನ ವಹಿಸಿರುವುದರ ಹಿಂದಿನ ಕಾರಣವೇನು’ ಎಂದು ಪ್ರಶ್ನಿಸಿದರು.</p>.<p>‘ಜಾತ್ರಾ ಮಹೋತ್ಸವದಿಂದ ದೇವಾಲಯದ ಆಡಳಿತಕ್ಕೆ ಕೋಟ್ಯಂತರ ರೂಪಾಯಿ ಹರಿದು ಬರುತ್ತಿದೆ. ಈ ಹಣ ಸದ್ಬಳಕೆ ಆಗಿದೆಯೇ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಈ ಹಣದಿಂದ ದೇವಾಲಯ ಸುತ್ತಲಿನ ಕಟ್ಟಡಗಳ ಖರೀದಿ ಮಾಡಿ, ದೇವಾಲಯ ಆವರಣ ವಿಸ್ತರಿಸಬಹುದಾಗಿದೆ. ಈ ಕುರಿತು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಗುತ್ತಿಗೆದಾರ ಶಿವರಾಂ, ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ಜಿಲ್ಲೆಯ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆಯೋಜನೆಯಲ್ಲಿ ಜಿಲ್ಲಾಡಳಿತದಿಂದ ಪಾರದರ್ಶಕ ಕೆಲಸ ಆಗುತ್ತಿಲ್ಲ’ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿದರು.</p><p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಯಮದಂತೆ ತಹಶೀಲ್ದಾರ್, ಉಪವಿಭಾಗಾಧಿಕಾರಿ ದೇವಸ್ಥಾನ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಮೇಲುಸ್ತುವಾರಿಯಾಗಿ ಜಿಲ್ಲಾಧಿಕಾರಿ ಇರುತ್ತಾರೆ. ಆದರೆ ಇವರ ಆಡಳಿತ ಸಂಪೂರ್ಣ ಹದಗೆಟ್ಟಿ ಹೋಗಿದೆ’ ಎಂದು ದೂರಿದರು.</p>.<p>‘ಈ ಬಾರಿ ವಿಐಪಿ, ವಿವಿಐಪಿ ಪಾಸ್ ರದ್ದು ಮಾಡಲಾಗಿದೆ. ಗೋಲ್ಡನ್ ಪಾಸ್ ವಿತರಿಸುವ ಕುರಿತು ನಿರ್ಧರಿಸಲಾಗಿದೆ. ಆದರೆ ಈ ಬಗ್ಗೆ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಈ ಪಾಸ್ಗಳನ್ನು ಯಾರಿಗೆ ನೀಡಲಾಗಿದೆ ಎಂಬುದನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನಮಗೆ ತಿಳಿದಿರುವ ಮಾಹಿತಿಯಂತೆ ಪ್ರತಿದಿನ ಒಂದು ಸಾವಿರ ಪಾಸಿನಂತೆ 18 ಸಾವಿರ ಪಾಸ್ ಮುದ್ರಿಸಲು ತೀರ್ಮಾನಿಸಲಾಗಿತ್ತು. ಆದರೆ ಈಗಾಗಲೇ 40 ಸಾವಿರ ಪಾಸ್ಗಳನ್ನು ಮುದ್ರಿಸಲಾಗಿದೆ’ ಎಂದರು.</p>.<p>‘ಕಳೆದ ಬಾರಿ ಶೇ 5ರಷ್ಟು ಪಾಸ್ಗಳು ಅಧಿಕೃತವಾಗಿ ಮುದ್ರಿತವಾದರೆ, ಉಳಿದ ಶೇ 95ರಷ್ಟು ಪಾಸ್ಗಳು ಅನಧಿಕೃತವಾಗಿ ಮುದ್ರಿತವಾಗಿದ್ದವು. ಇದರಿಂದ ಸಾಕಷ್ಟು ಅವ್ಯವಹಾರ ನಡೆದಿದೆ. ಈ ಬಗ್ಗೆ ದೇವಸ್ಥಾನ ಆಡಳಿತ ಅಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳೇ ಒಪ್ಪಿಕೊಂಡಿದ್ದಾರೆ’ ಎಂದು ತಿಳಿಸಿದರು.</p>.<p>‘ಜಾತ್ರಾ ಮಹೋತ್ಸವದ ನಿಮಿತ್ತ ನಗರದಲ್ಲಿ ಅಳವಡಿಸುವ ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ದೀಪಾಲಂಕಾರ ಸೇರಿದಂತೆ ಇತರೆ ಟೆಂಡರ್ಗಳನ್ನು ಬೇಕಾಬಿಟ್ಟಿಯಾಗಿ ಮಾಡಲಾಗಿದೆ. ಜರ್ಮನ್ ಟೆಂಟ್ ಹಾಗೂ ಬ್ಯಾರಿಕೇಡ್ ನಿರ್ಮಿಸಲು ₹ 60 ಲಕ್ಷದಿಂದ ₹ 65 ಲಕ್ಷ ಸಾಕಾಗುತ್ತದೆ. ಆದರೆ ₹ 86.99 ಲಕ್ಷಕ್ಕೆ ಟೆಂಡರ್ ನೀಡಲಾಗಿದೆ. ನಗರದಲ್ಲಿ ಅಳವಡಿಸಲು ಸಿಸಿಟಿವಿ ಕ್ಯಾಮೆರಾ ಖರೀದಿ ಮಾಡಿದರೂ ₹ 20 ಲಕ್ಷ ವೆಚ್ಚವಾಗುತ್ತದೆ. ಆದರೆ ಬಾಡಿಗೆ ಪಡೆದಿರುವುದು ಏಕೆ? ಇದರಿಂದ ಲಕ್ಷಾಂತರ ರೂಪಾಯಿ ಸಾರ್ವಜನಿಕರ ಹಣ ಪೋಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ಜಾತ್ರೆ ಸಂದರ್ಭದಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಬಳಕೆಗೆ ವಾಕಿಟಾಕಿಯನ್ನು ₹ 12 ಲಕ್ಷ ವೆಚ್ಚದಲ್ಲಿ ಬಾಡಿಗೆ ಪಡೆಯಲಾಗುತ್ತಿದೆ. ಇದರಲ್ಲಿಯೂ ಅವ್ಯವಹಾರ ನಡೆದಿದೆ’ ಎಂದರು.</p>.<p>‘ಪ್ರತಿ ವರ್ಷ ಟೆಂಡರ್ ಪಾರದರ್ಶಕವಾಗಿ ನಡೆಯುತ್ತಿಲ್ಲ. ನಾಗರಾಜ್ ಎಂಬ ಗುತ್ತಿಗೆದಾರರಿಗೆ ಪ್ರತಿ ವರ್ಷ ಟೆಂಡರ್ ನೀಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅವ್ಯವಹಾರ ನಡೆಯುತ್ತಲೇ ಇದ್ದರೂ ಜಿಲ್ಲಾಡಳಿತ ಮೌನ ವಹಿಸಿರುವುದರ ಹಿಂದಿನ ಕಾರಣವೇನು’ ಎಂದು ಪ್ರಶ್ನಿಸಿದರು.</p>.<p>‘ಜಾತ್ರಾ ಮಹೋತ್ಸವದಿಂದ ದೇವಾಲಯದ ಆಡಳಿತಕ್ಕೆ ಕೋಟ್ಯಂತರ ರೂಪಾಯಿ ಹರಿದು ಬರುತ್ತಿದೆ. ಈ ಹಣ ಸದ್ಬಳಕೆ ಆಗಿದೆಯೇ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಈ ಹಣದಿಂದ ದೇವಾಲಯ ಸುತ್ತಲಿನ ಕಟ್ಟಡಗಳ ಖರೀದಿ ಮಾಡಿ, ದೇವಾಲಯ ಆವರಣ ವಿಸ್ತರಿಸಬಹುದಾಗಿದೆ. ಈ ಕುರಿತು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಗುತ್ತಿಗೆದಾರ ಶಿವರಾಂ, ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>