<p><strong>ಹಾಸನ</strong>: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಬೇಕು ಎಂದು ಆಗ್ರಹಿಸಿ ಎಐಡಿವೈಒ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಸಂಘಟನೆಯ ಮುಖಂಡ ಟಿ.ಆರ್ ಸುನಿಲ್ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ, ಅವುಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿಲ್ಲ. 5–6 ವರ್ಷಗಳಿಂದ ರಾಜ್ಯದಲ್ಲಿ ದೊಡ್ಡ ಮಟ್ಟದ ನೇಮಕಾತಿಗಳು ನಡೆದಿಲ್ಲ. ಇದರಿಂದ ಉದ್ಯೋಗಾಕಾಂಕ್ಷಿಗಳಲ್ಲಿ ಆಕ್ರೋಶ ಹೆಚ್ಚಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಿರಂತರ ಹೋರಾಟದ ಫಲವಾಗಿ ಮುಖ್ಯಮಂತ್ರಿ ಕಳೆದ ಡಿಸೆಂಬರ್ನಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದರು. ಬೆಳಗಾವಿ ಅಧಿವೇಶನದಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ತಿಳಿಸಲಾಗಿತ್ತು. ಆದರೆ ತಿಂಗಳುಗಳೇ ಕಳೆದರೂ ನೇಮಕಾತಿ ಪ್ರಕ್ರಿಯೆ ಆರಂಭವಾಗಿಲ್ಲ ಎಂದು ಆರೋಪಿಸಿದರು.</p>.<p>ಈಗ ಮತ್ತೆ ಹೋರಾಟ ತೀವ್ರಗೊಂಡ ನಂತರ ಸಚಿವ ಸಂಪುಟ ಸಭೆಯಲ್ಲಿ 56ಸಾವಿರ ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದು ಕೇವಲ ಮಾತಾಗದೇ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.</p>.<p>ರಾಜ್ಯದಲ್ಲಿ ಖಾಲಿ ಇರುವ ಎಲ್ಲ 2,84,881 ಹುದ್ದೆಗಳನ್ನು ಭರ್ತಿ ಮಾಡಬೇಕು. ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡಬೇಕು. ಭ್ರಷ್ಟಾಚಾರ ತಡೆಗಟ್ಟಬೇಕು. ನೇಮಕಾತಿಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು. ಅರ್ಜಿ ಶುಲ್ಕವನ್ನು ಕಡಿತಗೊಳಿಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಹಾಳು ಮಾಡುವ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿದರು.</p>.<p>ನವೆಂಬರ್ನಿಂದ ಫೆಬ್ರುವರಿವರೆಗೆ ಹಾಸನದ ಯುವಜನರು, ಉದ್ಯೋಗಾಕಾಂಕ್ಷಿಗಳು ಮತ್ತು ಸಾರ್ವಜನಿಕರಿಂದ ಸಂಗ್ರಹಿಸಿದ ಸಹಿಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲಾಯಿತು.</p>.<p>ಉದ್ಯೋಗ ಆಕಾಂಕ್ಷಿ ಹೋರಾಟ ಸಮಿತಿ ಅಧ್ಯಕ್ಷ ರಘು, ಉಪಾಧ್ಯಕ್ಷ ರತನ್, ಶರತ್, ಸಂತೋಷ್, ಶಿವಕುಮಾರ್ ನಾಯ್ಕ್, ಸದಸ್ಯರಾದ ಗೌತಮ್, ಯೋಗೇಶ್, ಅರುಣ್, ಆದರ್ಶ್, ಮನೋಜ್, ಶಿವು, ಅಪ್ಪು, ದೀಪು, ಮಂಜು, ಹೇಮಂತ್, ಸಾಗರ್, ಪ್ರಸನ್ನ, ಕಾರ್ತಿಕ್, ಪ್ರಕಾಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಬೇಕು ಎಂದು ಆಗ್ರಹಿಸಿ ಎಐಡಿವೈಒ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಸಂಘಟನೆಯ ಮುಖಂಡ ಟಿ.ಆರ್ ಸುನಿಲ್ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ, ಅವುಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿಲ್ಲ. 5–6 ವರ್ಷಗಳಿಂದ ರಾಜ್ಯದಲ್ಲಿ ದೊಡ್ಡ ಮಟ್ಟದ ನೇಮಕಾತಿಗಳು ನಡೆದಿಲ್ಲ. ಇದರಿಂದ ಉದ್ಯೋಗಾಕಾಂಕ್ಷಿಗಳಲ್ಲಿ ಆಕ್ರೋಶ ಹೆಚ್ಚಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಿರಂತರ ಹೋರಾಟದ ಫಲವಾಗಿ ಮುಖ್ಯಮಂತ್ರಿ ಕಳೆದ ಡಿಸೆಂಬರ್ನಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದರು. ಬೆಳಗಾವಿ ಅಧಿವೇಶನದಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ತಿಳಿಸಲಾಗಿತ್ತು. ಆದರೆ ತಿಂಗಳುಗಳೇ ಕಳೆದರೂ ನೇಮಕಾತಿ ಪ್ರಕ್ರಿಯೆ ಆರಂಭವಾಗಿಲ್ಲ ಎಂದು ಆರೋಪಿಸಿದರು.</p>.<p>ಈಗ ಮತ್ತೆ ಹೋರಾಟ ತೀವ್ರಗೊಂಡ ನಂತರ ಸಚಿವ ಸಂಪುಟ ಸಭೆಯಲ್ಲಿ 56ಸಾವಿರ ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದು ಕೇವಲ ಮಾತಾಗದೇ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದರು.</p>.<p>ರಾಜ್ಯದಲ್ಲಿ ಖಾಲಿ ಇರುವ ಎಲ್ಲ 2,84,881 ಹುದ್ದೆಗಳನ್ನು ಭರ್ತಿ ಮಾಡಬೇಕು. ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡಬೇಕು. ಭ್ರಷ್ಟಾಚಾರ ತಡೆಗಟ್ಟಬೇಕು. ನೇಮಕಾತಿಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು. ಅರ್ಜಿ ಶುಲ್ಕವನ್ನು ಕಡಿತಗೊಳಿಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಹಾಳು ಮಾಡುವ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ಕೈಬಿಡಬೇಕು ಎಂದು ಒತ್ತಾಯಿಸಿದರು.</p>.<p>ನವೆಂಬರ್ನಿಂದ ಫೆಬ್ರುವರಿವರೆಗೆ ಹಾಸನದ ಯುವಜನರು, ಉದ್ಯೋಗಾಕಾಂಕ್ಷಿಗಳು ಮತ್ತು ಸಾರ್ವಜನಿಕರಿಂದ ಸಂಗ್ರಹಿಸಿದ ಸಹಿಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲಾಯಿತು.</p>.<p>ಉದ್ಯೋಗ ಆಕಾಂಕ್ಷಿ ಹೋರಾಟ ಸಮಿತಿ ಅಧ್ಯಕ್ಷ ರಘು, ಉಪಾಧ್ಯಕ್ಷ ರತನ್, ಶರತ್, ಸಂತೋಷ್, ಶಿವಕುಮಾರ್ ನಾಯ್ಕ್, ಸದಸ್ಯರಾದ ಗೌತಮ್, ಯೋಗೇಶ್, ಅರುಣ್, ಆದರ್ಶ್, ಮನೋಜ್, ಶಿವು, ಅಪ್ಪು, ದೀಪು, ಮಂಜು, ಹೇಮಂತ್, ಸಾಗರ್, ಪ್ರಸನ್ನ, ಕಾರ್ತಿಕ್, ಪ್ರಕಾಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>