<p><strong>ಹಾಸನ:</strong> ಕಲಾವಿದರಿಗೆ ವೈದ್ಯಕೀಯ ಬಿಲ್ ಮರು ಪಾವತಿಗೆ ಅನುಕೂಲ ಆಗುವಂತೆ ನಿಗದಿತ ಅನುದಾನ ಕಾಯ್ದಿರಿಸುವಂತೆ ಪ್ರಸ್ತಾವ ಸಲ್ಲಿಸಲು ಹೆಚ್ಚಿಸಲು ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಹಾಸನಾಂಬ ಕಲಾಕ್ಷೇತ್ರದ ನಿರ್ವಹಣಾ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಸಲಹಾ ಸಮಿತಿ ಸದಸ್ಯರ ಸಲಹೆ ಮೇರೆಗೆ ಕಲಾವಿದರಿಗೆ ಆರೋಗ್ಯ ವಿಮೆ ಯೋಜನೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ನಿರ್ದೇಶನ ನೀಡಿದರು.</p>.<p>ಜಿಲ್ಲೆಯಲ್ಲಿ ಗುರುತಿನ ಚೀಟಿ ನೀಡಲಾಗಿರುವ 404 ಕಲಾವಿದರ ಒಂದು ಗ್ರೂಪ್ ಮಾಡಿ. ಇದರಿಂದ ಮಾಹಿತಿ ಹಂಚಿಕೊಳ್ಳಲು ನೆರವಾಗುತ್ತದೆ. ಕಲಾವಿದರಿಗೆ ಒಂದು ಕಾರ್ಯಾಗಾರ ಏರ್ಪಡಿಸಿ, ಇಲಾಖೆ ಮೂಲಕ ಇರುವ ಸೌಲಭ್ಯಗಳು, ಸರ್ಕಾರದ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹಾಸನಾಂಬ ಕಲಾಕ್ಷೇತ್ರದ ಬಾಡಿಗೆ ಮತ್ತು ಅನುಪಯುಕ್ತ ವಸ್ತುಗಳಿಗೆ ದರ ನಿಗದಿಪಡಿಸಿ ಕೊಡಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಹಾಸನಾಂಬ ಕಲಾಕ್ಷೇತ್ರದ ವಿದ್ಯುತ್ ಪರಿವರ್ತಕ ಬದಲಾವಣೆ ಮತ್ತು ಭದ್ರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪರಿಶೀಲಿಸಿ ಸೆಸ್ಕ್ ಅಧಿಕಾರಿಗಳಿಂದ ಪ್ರಮಾಣಪತ್ರ ಪಡೆಯುವಂತೆ ಸೂಚಿಸಿದರು.</p>.<p>ಕಲಾವಿದರ ಸಂಘದ ಅಧ್ಯಕ್ಷ ರವಿ, ಕಲಾವಿದರಾದ ದರ್ಶನ್ ವೆಂಕಟೇಶ್, ರಾಮಣ್ಣ, ಶೇಖರಪ್ಪ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-36-1544295513</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಕಲಾವಿದರಿಗೆ ವೈದ್ಯಕೀಯ ಬಿಲ್ ಮರು ಪಾವತಿಗೆ ಅನುಕೂಲ ಆಗುವಂತೆ ನಿಗದಿತ ಅನುದಾನ ಕಾಯ್ದಿರಿಸುವಂತೆ ಪ್ರಸ್ತಾವ ಸಲ್ಲಿಸಲು ಹೆಚ್ಚಿಸಲು ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಹಾಸನಾಂಬ ಕಲಾಕ್ಷೇತ್ರದ ನಿರ್ವಹಣಾ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಸಲಹಾ ಸಮಿತಿ ಸದಸ್ಯರ ಸಲಹೆ ಮೇರೆಗೆ ಕಲಾವಿದರಿಗೆ ಆರೋಗ್ಯ ವಿಮೆ ಯೋಜನೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ನಿರ್ದೇಶನ ನೀಡಿದರು.</p>.<p>ಜಿಲ್ಲೆಯಲ್ಲಿ ಗುರುತಿನ ಚೀಟಿ ನೀಡಲಾಗಿರುವ 404 ಕಲಾವಿದರ ಒಂದು ಗ್ರೂಪ್ ಮಾಡಿ. ಇದರಿಂದ ಮಾಹಿತಿ ಹಂಚಿಕೊಳ್ಳಲು ನೆರವಾಗುತ್ತದೆ. ಕಲಾವಿದರಿಗೆ ಒಂದು ಕಾರ್ಯಾಗಾರ ಏರ್ಪಡಿಸಿ, ಇಲಾಖೆ ಮೂಲಕ ಇರುವ ಸೌಲಭ್ಯಗಳು, ಸರ್ಕಾರದ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹಾಸನಾಂಬ ಕಲಾಕ್ಷೇತ್ರದ ಬಾಡಿಗೆ ಮತ್ತು ಅನುಪಯುಕ್ತ ವಸ್ತುಗಳಿಗೆ ದರ ನಿಗದಿಪಡಿಸಿ ಕೊಡಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಹಾಸನಾಂಬ ಕಲಾಕ್ಷೇತ್ರದ ವಿದ್ಯುತ್ ಪರಿವರ್ತಕ ಬದಲಾವಣೆ ಮತ್ತು ಭದ್ರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪರಿಶೀಲಿಸಿ ಸೆಸ್ಕ್ ಅಧಿಕಾರಿಗಳಿಂದ ಪ್ರಮಾಣಪತ್ರ ಪಡೆಯುವಂತೆ ಸೂಚಿಸಿದರು.</p>.<p>ಕಲಾವಿದರ ಸಂಘದ ಅಧ್ಯಕ್ಷ ರವಿ, ಕಲಾವಿದರಾದ ದರ್ಶನ್ ವೆಂಕಟೇಶ್, ರಾಮಣ್ಣ, ಶೇಖರಪ್ಪ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-36-1544295513</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>