<p><strong>ಹಾಸನ:</strong> ಹತ್ತು ವರ್ಷಕ್ಕೊಮ್ಮೆ ನಡೆಯುವ ಐತಿಹಾಸಿಕ ಬೂವನಹಳ್ಳಿ ದೇವಿರಮ್ಮ ಜಾತ್ರೆಯ ಅಂಗವಾಗಿ ಬೂವನಹಳ್ಳಿ, ಸಂಕೇನಹಳ್ಳಿ ಸೇರಿದಂತೆ ಸುತ್ತಲಿನ 12ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭಾನುವಾರ ಬಾಡೂಟದ ಸಂಭ್ರಮದಿಂದ ನಡೆಯಿತು.</p>.<p>ಜಾತ್ರೆಯ ವಿಶೇಷ ಊಟದ ವ್ಯವಸ್ಥೆಯ ಹಿನ್ನೆಲೆಯಲ್ಲಿ ಗ್ರಾಮಗಳ ಪ್ರತಿ ಮನೆಯಲ್ಲೂ ಕೋಳಿ, ಕುರಿ, ಮೇಕೆ ಸೇರಿದಂತೆ ವಿವಿಧ ಬಗೆಯ ಮಾಂಸದ ಖಾದ್ಯಗಳ ಔತಣ ಏರ್ಪಡಿಸಲಾಗಿತ್ತು. ಬಾಡೂಟದ ಸವಿಯಲು ಅಕ್ಕಪಕ್ಕದ ಊರುಗಳಿಂದ ಸಾವಿರಾರು ಮಂದಿ ಬಂದಿದ್ದರಿಂದ ಗ್ರಾಮಗಳ ರಸ್ತೆಗಳು ಜನರಿಂದ ತುಂಬಿ ತುಳುಕುತ್ತಿದ್ದವು.</p>.<p>ರಾಷ್ಟ್ರೀಯ ಹೆದ್ದಾರಿ 75 ಸೇರಿದಂತೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಹುತೇಕ ರಸ್ತೆಗಳಲ್ಲಿ ಭಾರಿ ಜನದಟ್ಟಣೆ ಉಂಟಾಯಿತು. ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿ ಸಂಚಾರ ದಟ್ಟಣೆ ಉಂಟಾಯಿತು. ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.</p>.<p>ಮೇ 9 ಮತ್ತು 10ರಂದು ದೇವಿರಮ್ಮ ಜಾತ್ರಾ ಮಹೋತ್ಸವ ನಡೆದಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈಗಾಗಲೇ ಜಾತ್ರೆಯನ್ನು ಉದ್ಘಾಟಿಸಿದ್ದಾರೆ. ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಸಹ ಜಾತ್ರೆಗೆ ಚಾಲನೆ ನೀಡಿದ್ದರು.</p>.<p>ಜಾತ್ರೆಯ ಅಂಗವಾಗಿ ಭಾನುವಾರ ಗ್ರಾಮಗಳಲ್ಲಿ ವಿಶೇಷ ಊಟದ ವ್ಯವಸ್ಥೆ ಮಾಡಿದ್ದರಿಂದ ಎಲ್ಲೆಡೆ ಭಕ್ತರ ನೂಕುನುಗ್ಗಲು ಹೆಚ್ಚಾಗಿತ್ತು. ಸಂಬಂಧಿಕರು, ಸ್ನೇಹಿತರ ಮನೆಗಳಿಗೆ ತೆರಳಿ ಬಾಡೂಟ ಸವಿದು ಸಂಭ್ರಮಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-40-1435934053</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಹತ್ತು ವರ್ಷಕ್ಕೊಮ್ಮೆ ನಡೆಯುವ ಐತಿಹಾಸಿಕ ಬೂವನಹಳ್ಳಿ ದೇವಿರಮ್ಮ ಜಾತ್ರೆಯ ಅಂಗವಾಗಿ ಬೂವನಹಳ್ಳಿ, ಸಂಕೇನಹಳ್ಳಿ ಸೇರಿದಂತೆ ಸುತ್ತಲಿನ 12ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭಾನುವಾರ ಬಾಡೂಟದ ಸಂಭ್ರಮದಿಂದ ನಡೆಯಿತು.</p>.<p>ಜಾತ್ರೆಯ ವಿಶೇಷ ಊಟದ ವ್ಯವಸ್ಥೆಯ ಹಿನ್ನೆಲೆಯಲ್ಲಿ ಗ್ರಾಮಗಳ ಪ್ರತಿ ಮನೆಯಲ್ಲೂ ಕೋಳಿ, ಕುರಿ, ಮೇಕೆ ಸೇರಿದಂತೆ ವಿವಿಧ ಬಗೆಯ ಮಾಂಸದ ಖಾದ್ಯಗಳ ಔತಣ ಏರ್ಪಡಿಸಲಾಗಿತ್ತು. ಬಾಡೂಟದ ಸವಿಯಲು ಅಕ್ಕಪಕ್ಕದ ಊರುಗಳಿಂದ ಸಾವಿರಾರು ಮಂದಿ ಬಂದಿದ್ದರಿಂದ ಗ್ರಾಮಗಳ ರಸ್ತೆಗಳು ಜನರಿಂದ ತುಂಬಿ ತುಳುಕುತ್ತಿದ್ದವು.</p>.<p>ರಾಷ್ಟ್ರೀಯ ಹೆದ್ದಾರಿ 75 ಸೇರಿದಂತೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಹುತೇಕ ರಸ್ತೆಗಳಲ್ಲಿ ಭಾರಿ ಜನದಟ್ಟಣೆ ಉಂಟಾಯಿತು. ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿ ಸಂಚಾರ ದಟ್ಟಣೆ ಉಂಟಾಯಿತು. ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.</p>.<p>ಮೇ 9 ಮತ್ತು 10ರಂದು ದೇವಿರಮ್ಮ ಜಾತ್ರಾ ಮಹೋತ್ಸವ ನಡೆದಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈಗಾಗಲೇ ಜಾತ್ರೆಯನ್ನು ಉದ್ಘಾಟಿಸಿದ್ದಾರೆ. ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಸಹ ಜಾತ್ರೆಗೆ ಚಾಲನೆ ನೀಡಿದ್ದರು.</p>.<p>ಜಾತ್ರೆಯ ಅಂಗವಾಗಿ ಭಾನುವಾರ ಗ್ರಾಮಗಳಲ್ಲಿ ವಿಶೇಷ ಊಟದ ವ್ಯವಸ್ಥೆ ಮಾಡಿದ್ದರಿಂದ ಎಲ್ಲೆಡೆ ಭಕ್ತರ ನೂಕುನುಗ್ಗಲು ಹೆಚ್ಚಾಗಿತ್ತು. ಸಂಬಂಧಿಕರು, ಸ್ನೇಹಿತರ ಮನೆಗಳಿಗೆ ತೆರಳಿ ಬಾಡೂಟ ಸವಿದು ಸಂಭ್ರಮಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-40-1435934053</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>