ನಗರದ ಮಲೆನಾಡು ತಾಂತ್ರಿಕ ಮಹಾ ವಿದ್ಯಾಲಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪ್ರಾದೇಶಿಕ ಪಕ್ಷವಲ್ಲ. ಎರಡು- ಮೂರು ಜಿಲ್ಲೆಗಷ್ಟೇ ಸೀಮಿತವಾಗಿರುವ ಪಕ್ಷ. ಅವರ ಮನೆಯವರ ಉದ್ಧಾರಕ್ಕಾಗಿಯೇ ಪಕ್ಷ ಕಟ್ಟಿಕೊಂಡಿದ್ದಾರೆ. ಗೌಡರ ಕುಟುಂಬ ಇರುವುದೇ ಚುನಾವಣೆಯಲ್ಲಿ ಸ್ಪರ್ಧಿಸಲು. ಅವರಿಗೆ ಮತ ಹಾಕೋದು ಕೇವಲ ಅಪ್ಪ, ಮಕ್ಕಳು, ಮೊಮ್ಮಕ್ಕಳಿಗೆ ಮತ ಹಾಕಿದಂತೆ ಎಂದು ವ್ಯಂಗ್ಯವಾಡಿದರು.