<p><strong>ಹಾಸನ</strong>: ತಾಲ್ಲೂಕಿನ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ನ ಟೈರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.</p>.<p>ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 36 ಮಂದಿ ಪ್ರಯಾಣಿಸುತ್ತಿದ್ದರು. ಶುಕ್ರವಾರ ರಾತ್ರಿ ಶಾಂತಿಗ್ರಾಮ ಸಮೀಪ ಬರುತ್ತಿದ್ದಂತೆ ಬಸ್ನ ಹಿಂದಿನ ಟೈರ್ ದಿಢೀರ್ ಸ್ಫೋಟಗೊಂಡಿದೆ. ಕೂಡಲೇ ಟೈರ್ ಭಾಗದಿಂದ ಬೆಂಕಿ ಕಾಣಿಸಿಕೊಂಡು ಇಡೀ ಬಸ್ನಲ್ಲಿ ಹೊಗೆ ವ್ಯಾಪಿಸಿದೆ.</p>.<p>ತಕ್ಷಣ ಎಚ್ಚೆತ್ತುಕೊಂಡ ಚಾಲಕ, ತಕ್ಷಣವೇ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಭಯಭೀತರಾದ ಪ್ರಯಾಣಿಕರು ತರಾತುರಿಯಲ್ಲಿ ಕೆಳಗಿಳಿದಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಬಸ್ಗೆ ಆವರಿಸಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ.</p>.<p>ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕೆಲ ಪ್ರಯಾಣಿಕರ ಲಗೇಜ್, ಮೊಬೈಲ್ ಫೋನ್, ಹಣ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ. ಕೆಲ ಪ್ರಯಾಣಿಕರು ಕೈಗೆ ಸಿಕ್ಕ ಬ್ಯಾಗ್ ಮಾತ್ರ ತೆಗೆದುಕೊಂಡು ಇಳಿದಿದ್ದು, ಉಳಿದ ಸಾಮಾನುಗಳು ಸಂಪೂರ್ಣ ಸುಟ್ಟು ಹೋಗಿವೆ.</p>.<p>ಅತಿವೇಗ ಹಾಗೂ ಬಿಸಿಲಿನ ತಾಪಕ್ಕೆ ಟೈರ್ ಸ್ಫೋಟಗೊಂಡಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಶಾಂತಿಗ್ರಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಮಾಹಿತಿ ತಿಳಿದ ತಕ್ಷಣ ಹಾಸನದಿಂದ ಅಗ್ನಿಶಾಮಕ ದಳದ ವಾಹನ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿತು. ಅಷ್ಟರಲ್ಲಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಉಂಟಾಯಿತು. ಬಸ್ ಸಂಸ್ಥೆ ವ್ಯವಸ್ಥೆ ಮಾಡಿದ ಬೇರೆ ವಾಹನದಲ್ಲಿ ಪ್ರಯಾಣಿಕರನ್ನು ಬೆಂಗಳೂರಿಗೆ ಕಳುಹಿಸಿ ಕೊಡಲಾಯಿತು. ಚಾಲಕನ ಸಮಯಪ್ರಜ್ಞೆಯಿಂದ 36 ಜನರು ಬದುಕುಳಿದಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-51-43205385</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ತಾಲ್ಲೂಕಿನ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ನ ಟೈರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.</p>.<p>ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 36 ಮಂದಿ ಪ್ರಯಾಣಿಸುತ್ತಿದ್ದರು. ಶುಕ್ರವಾರ ರಾತ್ರಿ ಶಾಂತಿಗ್ರಾಮ ಸಮೀಪ ಬರುತ್ತಿದ್ದಂತೆ ಬಸ್ನ ಹಿಂದಿನ ಟೈರ್ ದಿಢೀರ್ ಸ್ಫೋಟಗೊಂಡಿದೆ. ಕೂಡಲೇ ಟೈರ್ ಭಾಗದಿಂದ ಬೆಂಕಿ ಕಾಣಿಸಿಕೊಂಡು ಇಡೀ ಬಸ್ನಲ್ಲಿ ಹೊಗೆ ವ್ಯಾಪಿಸಿದೆ.</p>.<p>ತಕ್ಷಣ ಎಚ್ಚೆತ್ತುಕೊಂಡ ಚಾಲಕ, ತಕ್ಷಣವೇ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಭಯಭೀತರಾದ ಪ್ರಯಾಣಿಕರು ತರಾತುರಿಯಲ್ಲಿ ಕೆಳಗಿಳಿದಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಬಸ್ಗೆ ಆವರಿಸಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ.</p>.<p>ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕೆಲ ಪ್ರಯಾಣಿಕರ ಲಗೇಜ್, ಮೊಬೈಲ್ ಫೋನ್, ಹಣ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ. ಕೆಲ ಪ್ರಯಾಣಿಕರು ಕೈಗೆ ಸಿಕ್ಕ ಬ್ಯಾಗ್ ಮಾತ್ರ ತೆಗೆದುಕೊಂಡು ಇಳಿದಿದ್ದು, ಉಳಿದ ಸಾಮಾನುಗಳು ಸಂಪೂರ್ಣ ಸುಟ್ಟು ಹೋಗಿವೆ.</p>.<p>ಅತಿವೇಗ ಹಾಗೂ ಬಿಸಿಲಿನ ತಾಪಕ್ಕೆ ಟೈರ್ ಸ್ಫೋಟಗೊಂಡಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಶಾಂತಿಗ್ರಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಮಾಹಿತಿ ತಿಳಿದ ತಕ್ಷಣ ಹಾಸನದಿಂದ ಅಗ್ನಿಶಾಮಕ ದಳದ ವಾಹನ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿತು. ಅಷ್ಟರಲ್ಲಾಗಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಉಂಟಾಯಿತು. ಬಸ್ ಸಂಸ್ಥೆ ವ್ಯವಸ್ಥೆ ಮಾಡಿದ ಬೇರೆ ವಾಹನದಲ್ಲಿ ಪ್ರಯಾಣಿಕರನ್ನು ಬೆಂಗಳೂರಿಗೆ ಕಳುಹಿಸಿ ಕೊಡಲಾಯಿತು. ಚಾಲಕನ ಸಮಯಪ್ರಜ್ಞೆಯಿಂದ 36 ಜನರು ಬದುಕುಳಿದಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-51-43205385</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>