ಹಾಸನ: ಜಿಲ್ಲೆಯ ಬೇಲೂರಿನ ಚನ್ನಕೇಶವ ಸ್ವಾಮಿ ದೇವಸ್ಥಾನದ ಬ್ರಹ್ಮ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ಸಂಪ್ರದಾಯದಂತೆ ದೇವಸ್ಥಾನದ ಮೆಟ್ಟಿಲು ಬಳಿ ಮೇದೂರು ಖಾಜಿ ಸಾಹೇಬರಿಂದ ದೇವರಿಗೆ ವಂದನೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ, ಖಾಜಿ ಸಾಹೇಬರ ವಂದನೆಯನ್ನು ವಿರೋಧಿಸಿ ವಿಎಚ್ಪಿ ಕಾರ್ಯಕರ್ತರು ಕೆಲಕಾಲ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು.