<p><strong>ಹಾಸನ:</strong> ಇಲ್ಲಿನ ಚನ್ನಪಟ್ಟಣದ ಕೆಎಂಎಫ್ ವಸತಿ ಗೃಹದ ಬಾಗಿಲು ಮುರಿದು ₹4.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.</p>.<p>ಪವಿತ್ರಾ ಅವರು ಸೆ.16 ರಂದು ಮನೆಗೆ ಬೀಗ ಹಾಕಿ, ಕುಟುಂಬ ಸಮೇತವಾಗಿ ತವರು ಮನೆಗೆ ಹೋಗಿದ್ದರು. ರಾತ್ರಿ ಅಲ್ಲಿಯೇ ಉಳಿದುಕೊಂಡು, ಸೆ.17 ರಂದು ಬೆಳಿಗ್ಗೆ ಮನೆಗೆ ಬಂದು ನೋಡಿದಾಗ, ಬಾಗಿಲನ್ನು ಒಡೆಯಲಾಗಿತ್ತು.</p>.<p>ದಿವಾನ್ ಕಾಟ್ನ ಕ್ಯಾಬಿನ್ನಲ್ಲಿ ಬ್ಯಾಗಿನಲ್ಲಿಟ್ಟಿದ್ದ ಒಟ್ಟು ಸುಮಾರು 97 ಗ್ರಾಂ ಚಿನ್ನಾಭರಣ ಕಳುವಾಗಿರುವುದು ಗೊತ್ತಾಗಿದೆ. ಹಾಸನದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<h2>7 ಸಿಂದಿ ಕರು ರಕ್ಷಣೆ: ಆರೋಪಿ ಬಂಧನ</h2>.<p>ಹಾಸನ: ಅರಸೀಕೆರೆ ತಾಲ್ಲೂಕಿನ ಗಂಡಸಿ ಠಾಣೆ ವ್ಯಾಪ್ತಿಯ ಹುರುಗಿನವಾಡಿ ಗ್ರಾಮದಲ್ಲಿ ವಾಹನದಲ್ಲಿ ಸಾಗಿಸುತ್ತಿದ್ದ 7 ಸಿಂದಿ ಕರುಗಳನ್ನು ರಕ್ಷಣೆ ಮಾಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.</p>.<p>ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದ ಮಹಮ್ಮದ್ ರಫೀಕ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಗಂಡಸಿಯ ಅಪ್ಪಯ್ಯ ಹಾಗೂ ಮಾಗಡಿ ತಾಲ್ಲೂಕಿನ ಲಾಯ ಗ್ರಾಮದ ಅಹಮ್ಮದ್ ಪಾಷಾ ಪರಾರಿಯಾಗಿದ್ದಾರೆ.</p>.<p>ಸಿಂದಿ ಕರುಗಳನ್ನು ವಾಹನಗಳಲ್ಲಿ ತುಂಬುತ್ತಿದ್ದಾಗ, ಗಂಡಸಿ ಸಬ್ ಇನ್ಸ್ಪೆಕ್ಟರ್ ಆರತಿ ಹಾಗೂ ಸಿಬ್ಬಂದಿ ಈ ದಾಳಿ ನಡೆಸಿದ್ದಾರೆ. ಗಂಡಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಇಲ್ಲಿನ ಚನ್ನಪಟ್ಟಣದ ಕೆಎಂಎಫ್ ವಸತಿ ಗೃಹದ ಬಾಗಿಲು ಮುರಿದು ₹4.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.</p>.<p>ಪವಿತ್ರಾ ಅವರು ಸೆ.16 ರಂದು ಮನೆಗೆ ಬೀಗ ಹಾಕಿ, ಕುಟುಂಬ ಸಮೇತವಾಗಿ ತವರು ಮನೆಗೆ ಹೋಗಿದ್ದರು. ರಾತ್ರಿ ಅಲ್ಲಿಯೇ ಉಳಿದುಕೊಂಡು, ಸೆ.17 ರಂದು ಬೆಳಿಗ್ಗೆ ಮನೆಗೆ ಬಂದು ನೋಡಿದಾಗ, ಬಾಗಿಲನ್ನು ಒಡೆಯಲಾಗಿತ್ತು.</p>.<p>ದಿವಾನ್ ಕಾಟ್ನ ಕ್ಯಾಬಿನ್ನಲ್ಲಿ ಬ್ಯಾಗಿನಲ್ಲಿಟ್ಟಿದ್ದ ಒಟ್ಟು ಸುಮಾರು 97 ಗ್ರಾಂ ಚಿನ್ನಾಭರಣ ಕಳುವಾಗಿರುವುದು ಗೊತ್ತಾಗಿದೆ. ಹಾಸನದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<h2>7 ಸಿಂದಿ ಕರು ರಕ್ಷಣೆ: ಆರೋಪಿ ಬಂಧನ</h2>.<p>ಹಾಸನ: ಅರಸೀಕೆರೆ ತಾಲ್ಲೂಕಿನ ಗಂಡಸಿ ಠಾಣೆ ವ್ಯಾಪ್ತಿಯ ಹುರುಗಿನವಾಡಿ ಗ್ರಾಮದಲ್ಲಿ ವಾಹನದಲ್ಲಿ ಸಾಗಿಸುತ್ತಿದ್ದ 7 ಸಿಂದಿ ಕರುಗಳನ್ನು ರಕ್ಷಣೆ ಮಾಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.</p>.<p>ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದ ಮಹಮ್ಮದ್ ರಫೀಕ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಗಂಡಸಿಯ ಅಪ್ಪಯ್ಯ ಹಾಗೂ ಮಾಗಡಿ ತಾಲ್ಲೂಕಿನ ಲಾಯ ಗ್ರಾಮದ ಅಹಮ್ಮದ್ ಪಾಷಾ ಪರಾರಿಯಾಗಿದ್ದಾರೆ.</p>.<p>ಸಿಂದಿ ಕರುಗಳನ್ನು ವಾಹನಗಳಲ್ಲಿ ತುಂಬುತ್ತಿದ್ದಾಗ, ಗಂಡಸಿ ಸಬ್ ಇನ್ಸ್ಪೆಕ್ಟರ್ ಆರತಿ ಹಾಗೂ ಸಿಬ್ಬಂದಿ ಈ ದಾಳಿ ನಡೆಸಿದ್ದಾರೆ. ಗಂಡಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>