<p>ಹಾಸನ: ಮಕ್ಕಳ ಬುದ್ಧಿ ಕೌಶಲ ಮತ್ತು ಸಮತೋಲನದ ಮನಸ್ಥಿತಿ ಬದಲಾವಣೆಗೆ ಚಿತ್ರಕಲಾ ಸ್ಪರ್ಧೆಯನ್ನು ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು.</p>.<p>ಮಕ್ಕಳ ತಜ್ಞೆ ಡಾ. ದಿವ್ಯಶ್ರೀ ಮಾತನಾಡಿ, ಸಂಗೀತ, ಸಾಹಿತ್ಯ, ತರಗತಿಯ ಪಾಠದಷ್ಟೇ ಚಿತ್ರಕಲೆ ಮಕ್ಕಳ ನೆನಪಿನ ಶಕ್ತಿ ಹಾಗೂ ಬುದ್ಧಿ ಕೌಶಲದ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ಹೇಳಿದರು.</p>.<p>ಡಾ. ವಿಶ್ವಾಸ್ ಮಾತನಾಡಿ, ಮಕ್ಕಳ ಆರೋಗ್ಯದಷ್ಟೇ ಮಕ್ಕಳ ತಂದೆ– ತಾಯಿಯ ಸ್ವಾಸ್ಥ್ಯವೂ ಪ್ರಮುಖ ಎಂದರು.</p>.<p>ಮೂಳೆ ತಜ್ಞ ಡಾ. ನಯೀಮ್ ಸಿದ್ದಿಕಿ ಮಾತನಾಡಿ, ಪ್ರತಿಯೊಬ್ಬರೂ ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಚಿತ್ರಕಲಾ ಸ್ಪರ್ಧೆಯಲ್ಲಿ 130 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.</p>.<p>ಮಕ್ಕಳ ಪೋಷಕರಿಗೂ ಉಚಿತ ಬಿಎಂಡಿ, ಇಸಿಜಿ ಪರೀಕ್ಷೆ ಹಾಗೂ ಮಧುಮೇಹ ತಪಾಸಣೆ ಮಡಲಾಯಿತು.</p>.<p>ಚಿತ್ರಕಲಾ ಶಿಕ್ಷಕಿ ಲತಾ, ಆಡಳಿತ ವಿಭಾಗದ ಅಧಿಕಾರಿಗಳಾದ ರಂಗಸ್ವಾಮಿ, ನವೀನ್, ದೊರೇಶ್, ಪುಷ್ಪಾ,ಲಿಖಿತಾ, ರಾಕೇಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-36-1653524798</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಮಕ್ಕಳ ಬುದ್ಧಿ ಕೌಶಲ ಮತ್ತು ಸಮತೋಲನದ ಮನಸ್ಥಿತಿ ಬದಲಾವಣೆಗೆ ಚಿತ್ರಕಲಾ ಸ್ಪರ್ಧೆಯನ್ನು ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು.</p>.<p>ಮಕ್ಕಳ ತಜ್ಞೆ ಡಾ. ದಿವ್ಯಶ್ರೀ ಮಾತನಾಡಿ, ಸಂಗೀತ, ಸಾಹಿತ್ಯ, ತರಗತಿಯ ಪಾಠದಷ್ಟೇ ಚಿತ್ರಕಲೆ ಮಕ್ಕಳ ನೆನಪಿನ ಶಕ್ತಿ ಹಾಗೂ ಬುದ್ಧಿ ಕೌಶಲದ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ಹೇಳಿದರು.</p>.<p>ಡಾ. ವಿಶ್ವಾಸ್ ಮಾತನಾಡಿ, ಮಕ್ಕಳ ಆರೋಗ್ಯದಷ್ಟೇ ಮಕ್ಕಳ ತಂದೆ– ತಾಯಿಯ ಸ್ವಾಸ್ಥ್ಯವೂ ಪ್ರಮುಖ ಎಂದರು.</p>.<p>ಮೂಳೆ ತಜ್ಞ ಡಾ. ನಯೀಮ್ ಸಿದ್ದಿಕಿ ಮಾತನಾಡಿ, ಪ್ರತಿಯೊಬ್ಬರೂ ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಚಿತ್ರಕಲಾ ಸ್ಪರ್ಧೆಯಲ್ಲಿ 130 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.</p>.<p>ಮಕ್ಕಳ ಪೋಷಕರಿಗೂ ಉಚಿತ ಬಿಎಂಡಿ, ಇಸಿಜಿ ಪರೀಕ್ಷೆ ಹಾಗೂ ಮಧುಮೇಹ ತಪಾಸಣೆ ಮಡಲಾಯಿತು.</p>.<p>ಚಿತ್ರಕಲಾ ಶಿಕ್ಷಕಿ ಲತಾ, ಆಡಳಿತ ವಿಭಾಗದ ಅಧಿಕಾರಿಗಳಾದ ರಂಗಸ್ವಾಮಿ, ನವೀನ್, ದೊರೇಶ್, ಪುಷ್ಪಾ,ಲಿಖಿತಾ, ರಾಕೇಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-36-1653524798</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>