<p><strong>ಹಾಸನ:</strong> ತಾಲ್ಲೂಕಿನ ಕಮ್ಮರಿಗೆ ಗ್ರಾಮದ ಜಯರಾಮ್ ಅವರಿಗೆ ಸೇರಿದ ತೆಂಗಿನ ತೋಟಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಸುಮಾರು 50ಕ್ಕೂ ಹೆಚ್ಚು ತೆಂಗಿನ ಮರಗಳು ಸಂಪೂರ್ಣವಾಗಿ ಸುಟ್ಟಿವೆ.</p>.<p>8 ವರ್ಷಗಳಿಂದ ಬೆಳೆಸಿದ್ದ ತೆಂಗಿನ ಮರಗಳು ಇನ್ನು ಕೆಲವೇ ದಿನಗಳಲ್ಲಿ ಫಸಲು ನೀಡುವ ಹಂತದಲ್ಲಿದ್ದವು. ತೋಟದಲ್ಲಿ ಇಡಲಾಗಿದ್ದ ಒಣಗಿದ ಜೋಳಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಜ್ವಾಲೆ ಇಡೀ ತೋಟಕ್ಕೆ ವ್ಯಾಪಿಸಿ, ತೆಂಗಿನ ಮರಗಳು ನಾಶವಾಗಿವೆ.</p>.<p>ಬೇಸಿಗೆ ವೇಳೆ ಟ್ಯಾಂಕರ್ ಮೂಲಕ ನೀರನ್ನು ತರಿಸಿ, ಹೆಚ್ಚಿನ ವೆಚ್ಚ ಭರಿಸಿ ಗಿಡಗಳನ್ನು ಪೋಷಿಸಿಕೊಂಡು ಬಂದಿದ್ದ ರೈತ ಜಯರಾಮ್, ಕಣ್ಣೆದುರೇ ಮರಗಳು ಸುಟ್ಟು ಹೋಗಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ.</p>.<p>‘ಫಸಲು ನೀಡಬೇಕಾದ ಹಂತದಲ್ಲಿದ್ದ ಮರಗಳನ್ನು ಕಳೆದುಕೊಂಡು ನಮ್ಮ ಜೀವನವೇ ಸಂಕಷ್ಟಕ್ಕೆ ಸಿಲುಕಿದೆ. ನಾವು ಬೀದಿಗೆ ಬೀಳುವ ಸ್ಥಿತಿ ಬಂದಿದೆ’ ಎಂದು ಅವರು ಹೇಳಿದರು.</p>.<p>ಕಂದಾಯ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ತಾಲ್ಲೂಕಿನ ಕಮ್ಮರಿಗೆ ಗ್ರಾಮದ ಜಯರಾಮ್ ಅವರಿಗೆ ಸೇರಿದ ತೆಂಗಿನ ತೋಟಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಸುಮಾರು 50ಕ್ಕೂ ಹೆಚ್ಚು ತೆಂಗಿನ ಮರಗಳು ಸಂಪೂರ್ಣವಾಗಿ ಸುಟ್ಟಿವೆ.</p>.<p>8 ವರ್ಷಗಳಿಂದ ಬೆಳೆಸಿದ್ದ ತೆಂಗಿನ ಮರಗಳು ಇನ್ನು ಕೆಲವೇ ದಿನಗಳಲ್ಲಿ ಫಸಲು ನೀಡುವ ಹಂತದಲ್ಲಿದ್ದವು. ತೋಟದಲ್ಲಿ ಇಡಲಾಗಿದ್ದ ಒಣಗಿದ ಜೋಳಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಜ್ವಾಲೆ ಇಡೀ ತೋಟಕ್ಕೆ ವ್ಯಾಪಿಸಿ, ತೆಂಗಿನ ಮರಗಳು ನಾಶವಾಗಿವೆ.</p>.<p>ಬೇಸಿಗೆ ವೇಳೆ ಟ್ಯಾಂಕರ್ ಮೂಲಕ ನೀರನ್ನು ತರಿಸಿ, ಹೆಚ್ಚಿನ ವೆಚ್ಚ ಭರಿಸಿ ಗಿಡಗಳನ್ನು ಪೋಷಿಸಿಕೊಂಡು ಬಂದಿದ್ದ ರೈತ ಜಯರಾಮ್, ಕಣ್ಣೆದುರೇ ಮರಗಳು ಸುಟ್ಟು ಹೋಗಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ.</p>.<p>‘ಫಸಲು ನೀಡಬೇಕಾದ ಹಂತದಲ್ಲಿದ್ದ ಮರಗಳನ್ನು ಕಳೆದುಕೊಂಡು ನಮ್ಮ ಜೀವನವೇ ಸಂಕಷ್ಟಕ್ಕೆ ಸಿಲುಕಿದೆ. ನಾವು ಬೀದಿಗೆ ಬೀಳುವ ಸ್ಥಿತಿ ಬಂದಿದೆ’ ಎಂದು ಅವರು ಹೇಳಿದರು.</p>.<p>ಕಂದಾಯ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>