<p><strong>ಹಾಸನ</strong>: ನಗರದ ಮೊದಲ ಮಹಿಳಾ ಮೇಯರ್ ಹೇಮಲತಾ ಕಮಲ್ ಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ಪಾಲಿಕೆಯ ವಿಶೇಷ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ ಸದಸ್ಯರು ಗದ್ದಲ ಆರಂಭಿಸಿದರು. ಈ ವೇಳೆ ಮೇಯರ್ ಹೇಮಲತಾ ಸದಸ್ಯರನ್ನು ನಿಯಂತ್ರಿಸಲು ಹರಸಾಹಸ ಮಾಡುವಂತಾಯಿತು.</p>.<p>ನಿಗದಿಯಂತೆ ಸಭೆ ಆರಂಭವಾಗುತ್ತಿದ್ದಂತೆ, ಈ ಹಿಂದೆ ನಡೆದ ಸಭಾ ನಡಾವಳಿ ಬಗ್ಗೆ ಸದಸ್ಯರು ಚರ್ಚೆ ನಡೆಸಲು ಮುಂದಾದರು. ಈ ಹಿಂದಿನ ಸಭೆಯಲ್ಲಿ ನಡಾವಳಿಗಳ ಬಗ್ಗೆ ಚರ್ಚೆ ಬೇಡ. ಕೇವಲ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸುವಂತೆ ವಿಶೇಷ ಸಭೆಯಲ್ಲಿ ಅವಕಾಶ ನೀಡಲಾಗಿದೆ. ಆ ವಿಚಾರಗಳ ಬಗ್ಗೆ ಮಾತ್ರ ಚರ್ಚೆ ಮಾಡುವಂತೆ ಮೇಯರ್ ಸದಸ್ಯರಿಗೆ ಮನವರಿಕೆ ಮಾಡಿದರು.</p>.<p>ಬಳಿಕ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಆಗಬೇಕಾದ ಪ್ರಮುಖ ಕೆಲಸಗಳ ಕುರಿತು ಚರ್ಚೆ ನಡೆಸಲಾಯಿತು.</p>.<p>ಈ ಸಂದರ್ಭದಲ್ಲಿ ಆಯುಕ್ತ ಕೃಷ್ಣಮೂರ್ತಿ, ಸದಸ್ಯರು, ಪಾಲಿಕೆಯ ಎಂಜಿನಿಯರ್, ಅಧಿಕಾರಿಗಳು ಹಾಜರಿದ್ದರು.</p>.<p><strong>ಪೌರಕಾರ್ಮಿಕರಿಗೆ ಉಡುಗೊರೆ:</strong> </p>.<p>ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶಾಸಕ ಸ್ವರೂಪ್ ಪ್ರಕಾಶ್, ಪೌರಕಾರ್ಮಿಕರಿಗೆ ಹೊಸ ಬಟ್ಟೆಗಳ ಕೊಡುಗೆ ವಿತರಿಸಿದರು.</p>.<p>ನಂತರ ಮಾತನಾಡಿದ ಅವರು, ನಗರದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಪ್ರಮುಖವಾದದ್ದು. ಅವರನ್ನು ಇಂತಹ ಸಂದರ್ಭದಲ್ಲಿ ಗುರುತಿಸಿ ಬಾಗಿನ ಸೇರಿದಂತೆ ಉಡುಗೊರೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.</p>.<p>ಮೇಯರ್ ಹೇಮಲತಾ ಕಮಲ್ ಕುಮಾರ್, ಸದಸ್ಯರು, ಅಧಿಕಾರಿಗಳು, ಪೌರಕಾರ್ಮಿಕರಿಗೆ ಬಾಗಿನ ವಿತರಿಸಿ ಹಬ್ಬಕ್ಕೆ ಶುಭಾಶಯ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರದ ಮೊದಲ ಮಹಿಳಾ ಮೇಯರ್ ಹೇಮಲತಾ ಕಮಲ್ ಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ಪಾಲಿಕೆಯ ವಿಶೇಷ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ ಸದಸ್ಯರು ಗದ್ದಲ ಆರಂಭಿಸಿದರು. ಈ ವೇಳೆ ಮೇಯರ್ ಹೇಮಲತಾ ಸದಸ್ಯರನ್ನು ನಿಯಂತ್ರಿಸಲು ಹರಸಾಹಸ ಮಾಡುವಂತಾಯಿತು.</p>.<p>ನಿಗದಿಯಂತೆ ಸಭೆ ಆರಂಭವಾಗುತ್ತಿದ್ದಂತೆ, ಈ ಹಿಂದೆ ನಡೆದ ಸಭಾ ನಡಾವಳಿ ಬಗ್ಗೆ ಸದಸ್ಯರು ಚರ್ಚೆ ನಡೆಸಲು ಮುಂದಾದರು. ಈ ಹಿಂದಿನ ಸಭೆಯಲ್ಲಿ ನಡಾವಳಿಗಳ ಬಗ್ಗೆ ಚರ್ಚೆ ಬೇಡ. ಕೇವಲ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸುವಂತೆ ವಿಶೇಷ ಸಭೆಯಲ್ಲಿ ಅವಕಾಶ ನೀಡಲಾಗಿದೆ. ಆ ವಿಚಾರಗಳ ಬಗ್ಗೆ ಮಾತ್ರ ಚರ್ಚೆ ಮಾಡುವಂತೆ ಮೇಯರ್ ಸದಸ್ಯರಿಗೆ ಮನವರಿಕೆ ಮಾಡಿದರು.</p>.<p>ಬಳಿಕ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಆಗಬೇಕಾದ ಪ್ರಮುಖ ಕೆಲಸಗಳ ಕುರಿತು ಚರ್ಚೆ ನಡೆಸಲಾಯಿತು.</p>.<p>ಈ ಸಂದರ್ಭದಲ್ಲಿ ಆಯುಕ್ತ ಕೃಷ್ಣಮೂರ್ತಿ, ಸದಸ್ಯರು, ಪಾಲಿಕೆಯ ಎಂಜಿನಿಯರ್, ಅಧಿಕಾರಿಗಳು ಹಾಜರಿದ್ದರು.</p>.<p><strong>ಪೌರಕಾರ್ಮಿಕರಿಗೆ ಉಡುಗೊರೆ:</strong> </p>.<p>ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶಾಸಕ ಸ್ವರೂಪ್ ಪ್ರಕಾಶ್, ಪೌರಕಾರ್ಮಿಕರಿಗೆ ಹೊಸ ಬಟ್ಟೆಗಳ ಕೊಡುಗೆ ವಿತರಿಸಿದರು.</p>.<p>ನಂತರ ಮಾತನಾಡಿದ ಅವರು, ನಗರದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಪ್ರಮುಖವಾದದ್ದು. ಅವರನ್ನು ಇಂತಹ ಸಂದರ್ಭದಲ್ಲಿ ಗುರುತಿಸಿ ಬಾಗಿನ ಸೇರಿದಂತೆ ಉಡುಗೊರೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.</p>.<p>ಮೇಯರ್ ಹೇಮಲತಾ ಕಮಲ್ ಕುಮಾರ್, ಸದಸ್ಯರು, ಅಧಿಕಾರಿಗಳು, ಪೌರಕಾರ್ಮಿಕರಿಗೆ ಬಾಗಿನ ವಿತರಿಸಿ ಹಬ್ಬಕ್ಕೆ ಶುಭಾಶಯ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>