<p><strong>ಹಾಸನ</strong>: ಜಿಲ್ಲಾಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಜನರೇ ಅವರನ್ನು ಸರಿ ಮಾಡುತ್ತಾರೆ ಎಂದು ಶಾಸಕ ಎಚ್.ಡಿ. ರೇವಣ್ಣ ಎಚ್ಚರಿಸಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನಾಂಬೆ ಜಾತ್ರೆಯಲ್ಲಿ ಎಡಿಆರ್ಎಲ್ಆರ್ ಸಂಶುದ್ದೀನ್ ಅವರು ನನ್ನೊಂದಿಗೆ ನಡೆದು ಬಂದ ಕಾರಣಕ್ಕೆ ಅವರನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿದೆ. ಅಧಿಕಾರಿಗಳು ಶಾಸಕರ ಜೊತೆ ಮಾತನಾಡಬಾರದೇ? ಪ್ರಾಮಾಣಿಕ ಅಧಿಕಾರಿ ಮಾಡಿದ ತಪ್ಪೇನು ಎಂದು ಪ್ರಶ್ನಿಸಿದರು.</p>.<p>ಮುಸ್ಲಿಂ ಮತದಾರರು ಇಲ್ಲದಿದ್ದರೆ, ಕಾಂಗ್ರೆಸ್ಗೆ 136 ಸ್ಥಾನಗಳು ಸಿಗುತ್ತಿರಲಿಲ್ಲ. ಆದರೆ ಈಗ ಭದ್ರತೆ ಇಲ್ಲದಾಗಿದೆ. ಬಿಜೆಪಿ ಕಾಲದಲ್ಲೂ ನೆಮ್ಮದಿ ಇರಲಿಲ್ಲ. ಕಾಂಗ್ರೆಸ್ ಅವಧಿಯಲ್ಲೂ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<p>ಮಹಾನಗರ ಪಾಲಿಕೆ ಆಯುಕ್ತರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ ಕುರಿತು ಮಾತನಾಡಿ ರೇವಣ್ಣ, ಜಿಲ್ಲಾಧಿಕಾರಿಯ ಹಟದಿಂದ ಹಾಸನದಲ್ಲಿ ಆಡಳಿತ ಅಸ್ತವ್ಯಸ್ತವಾಗಿದೆ. 15 ದಿನಗಳಿಂದ ಬಯೊಮೆಟ್ರಿಕ್ ದಾಖಲೆ ನೀಡಲು ಅಧಿಕಾರಿಗಳು ಲಭ್ಯರಿಲ್ಲ ಎಂದರು.</p>.<p>ಜಿಲ್ಲಾಧಿಕಾರಿ ಭಯದಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಕೆಲಸ ಮಾಡಲು ಯಾರೂ ಮುಂದೆ ಬರದಂತಾಗಿದೆ. ಸದ್ಯದ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಒಬ್ಬರೇ 14 ಹುದ್ದೆ ನಿಭಾಯಿಸುತ್ತಿದ್ದಾರೆ. ಅಬಕಾರಿ ಉಪ ಆಯುಕ್ತರು ಸಹ ಭಯದಿಂದ ವರ್ಗಾವಣೆ ಮಾಡಿಸಿಕೊಂಡು ತೆರಳಿದ್ದಾರೆ ಎಂದು ದೂರಿದರು.</p>.<p>ಜಿಲ್ಲಾಧಿಕಾರಿ ಜನಸೇವೆ ಬಿಟ್ಟು ಪ್ರದರ್ಶನದ ಕೆಲಸದಲ್ಲಿ ತೊಡಗಿದ್ದಾರೆ. ಬೈಕ್, ಸೈಕಲ್ನಲ್ಲಿ ತಿರುಗಾಡುವುದಕ್ಕಿಂತ, ಸರ್ಕಾರ ಕೊಟ್ಟ ಕಾರಿನಲ್ಲಿ ಹೋಗಿ ಜನರ ಸಮಸ್ಯೆ ಬಗೆಹರಿಸಲಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಜಿಲ್ಲಾಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಜನರೇ ಅವರನ್ನು ಸರಿ ಮಾಡುತ್ತಾರೆ ಎಂದು ಶಾಸಕ ಎಚ್.ಡಿ. ರೇವಣ್ಣ ಎಚ್ಚರಿಸಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನಾಂಬೆ ಜಾತ್ರೆಯಲ್ಲಿ ಎಡಿಆರ್ಎಲ್ಆರ್ ಸಂಶುದ್ದೀನ್ ಅವರು ನನ್ನೊಂದಿಗೆ ನಡೆದು ಬಂದ ಕಾರಣಕ್ಕೆ ಅವರನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿದೆ. ಅಧಿಕಾರಿಗಳು ಶಾಸಕರ ಜೊತೆ ಮಾತನಾಡಬಾರದೇ? ಪ್ರಾಮಾಣಿಕ ಅಧಿಕಾರಿ ಮಾಡಿದ ತಪ್ಪೇನು ಎಂದು ಪ್ರಶ್ನಿಸಿದರು.</p>.<p>ಮುಸ್ಲಿಂ ಮತದಾರರು ಇಲ್ಲದಿದ್ದರೆ, ಕಾಂಗ್ರೆಸ್ಗೆ 136 ಸ್ಥಾನಗಳು ಸಿಗುತ್ತಿರಲಿಲ್ಲ. ಆದರೆ ಈಗ ಭದ್ರತೆ ಇಲ್ಲದಾಗಿದೆ. ಬಿಜೆಪಿ ಕಾಲದಲ್ಲೂ ನೆಮ್ಮದಿ ಇರಲಿಲ್ಲ. ಕಾಂಗ್ರೆಸ್ ಅವಧಿಯಲ್ಲೂ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<p>ಮಹಾನಗರ ಪಾಲಿಕೆ ಆಯುಕ್ತರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ ಕುರಿತು ಮಾತನಾಡಿ ರೇವಣ್ಣ, ಜಿಲ್ಲಾಧಿಕಾರಿಯ ಹಟದಿಂದ ಹಾಸನದಲ್ಲಿ ಆಡಳಿತ ಅಸ್ತವ್ಯಸ್ತವಾಗಿದೆ. 15 ದಿನಗಳಿಂದ ಬಯೊಮೆಟ್ರಿಕ್ ದಾಖಲೆ ನೀಡಲು ಅಧಿಕಾರಿಗಳು ಲಭ್ಯರಿಲ್ಲ ಎಂದರು.</p>.<p>ಜಿಲ್ಲಾಧಿಕಾರಿ ಭಯದಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಕೆಲಸ ಮಾಡಲು ಯಾರೂ ಮುಂದೆ ಬರದಂತಾಗಿದೆ. ಸದ್ಯದ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಒಬ್ಬರೇ 14 ಹುದ್ದೆ ನಿಭಾಯಿಸುತ್ತಿದ್ದಾರೆ. ಅಬಕಾರಿ ಉಪ ಆಯುಕ್ತರು ಸಹ ಭಯದಿಂದ ವರ್ಗಾವಣೆ ಮಾಡಿಸಿಕೊಂಡು ತೆರಳಿದ್ದಾರೆ ಎಂದು ದೂರಿದರು.</p>.<p>ಜಿಲ್ಲಾಧಿಕಾರಿ ಜನಸೇವೆ ಬಿಟ್ಟು ಪ್ರದರ್ಶನದ ಕೆಲಸದಲ್ಲಿ ತೊಡಗಿದ್ದಾರೆ. ಬೈಕ್, ಸೈಕಲ್ನಲ್ಲಿ ತಿರುಗಾಡುವುದಕ್ಕಿಂತ, ಸರ್ಕಾರ ಕೊಟ್ಟ ಕಾರಿನಲ್ಲಿ ಹೋಗಿ ಜನರ ಸಮಸ್ಯೆ ಬಗೆಹರಿಸಲಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>