<p><strong>ಹಾಸನ</strong>: ಮಹಾನಗರದ ಸರ್ವತೋಮುಖ ಅಭಿವೃದ್ಧಿಗೆ ಪಾಲಿಕೆಯ ಎಲ್ಲ ಸದಸ್ಯರು ಹಾಗೂ ಜನಪ್ರತಿನಿಧಿಗಳ ಒಮ್ಮತದ ತೀರ್ಮಾನದಂತೆ ಹಲವು ಕಾಮಗಾರಿಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಮೇಯರ್ ಗಿರೀಶ್ ಚನ್ನವೀರಪ್ಪ ತಿಳಿಸಿದರು.</p>.<p>ಇಲ್ಲಿನ ಮಹಾನಗರ ಪಾಲಿಕೆಯ ರಾಷ್ಟ್ರಕವಿ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಕರೆಯಲಾಗಿದ್ದ ವಿಶೇಷ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರುವರಿ 7 ಮತ್ತು 18 ರಂದು ಮಾಜಿ ಮೇಯರ್ ಚಂದ್ರೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾದ ಸುಮಾರು ₹ 6 ಕೋಟಿ ವೆಚ್ಚದ 37 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.</p>.<p>ಸೆಪ್ಟೆಂಬರ್ 25ರಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾದ ₹ 17 ಕೋಟಿ ವೆಚ್ಚದ 82 ಕಾಮಗಾರಿಗಳಿಗೆ ಎಲ್ಲ ಸದಸ್ಯರು ಸರ್ವಾನುಮತದಿಂದ ಅನುಮೋದನೆ ನೀಡಿದ್ದಾರೆ ಎಂದರು.</p>.<p>ಇತ್ತೀಚಿಗೆ ಕರೆಯಲಾಗಿದ್ದ ₹ 24 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಎರಡು ಟೆಂಡರ್ ಪ್ರಕ್ರಿಯೆಗೂ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ. ಸ್ಥಳೀಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು ಸಹ ನಮ್ಮ ಹಾಗೂ ಸದಸ್ಯರ ಮನವಿ ಮೇರೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.</p>.<p>ಸ್ಥಳೀಯ ಶಾಸಕರ ಕ್ಷೇತ್ರಾಅಭಿವೃದ್ಧಿ ನಿಧಿಗೆ ರಾಜ್ಯ ಸರ್ಕಾರ ₹ 25 ಕೋಟಿ ಬಿಡುಗಡೆ ಮಾಡುತ್ತಿದ್ದು, ಇದರಲ್ಲಿ ಸುಮಾರು ₹ 6.25 ಕೋಟಿ ಅನ್ನು ನಗರದ ಅಭಿವೃದ್ಧಿಗೆ ಬಿಡುಗಡೆ ಮಾಡಲು ಪಾಲಿಕೆಯ ಅನುಮೋದನೆ ಕೋರಿದ್ದರು. ಅದರಂತೆ ಎಲ್ಲ ಸದಸ್ಯರು ಒಪ್ಪಿಗೆ ಸೂಚಿಸಿದ್ದು, ಅಗತ್ಯಕ್ಕೆ ತಕ್ಕಂತೆ ವಾರ್ಡ್ಗಳ ಅಭಿವೃದ್ಧಿಗೆ ಅನುದಾನ ವಿನಯೋಗಿಸಲಾಗುವುದು ಎಂದು ವಿವರಿಸಿದರು.</p>.<p>ಪಾಲಿಕೆ ಆಯುಕ್ತ ಕೃಷ್ಣಮೂರ್ತಿ, ಎಂಜಿನಿಯರ್ ಕವಿತಾ, ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಮಹಾನಗರದ ಸರ್ವತೋಮುಖ ಅಭಿವೃದ್ಧಿಗೆ ಪಾಲಿಕೆಯ ಎಲ್ಲ ಸದಸ್ಯರು ಹಾಗೂ ಜನಪ್ರತಿನಿಧಿಗಳ ಒಮ್ಮತದ ತೀರ್ಮಾನದಂತೆ ಹಲವು ಕಾಮಗಾರಿಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಮೇಯರ್ ಗಿರೀಶ್ ಚನ್ನವೀರಪ್ಪ ತಿಳಿಸಿದರು.</p>.<p>ಇಲ್ಲಿನ ಮಹಾನಗರ ಪಾಲಿಕೆಯ ರಾಷ್ಟ್ರಕವಿ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಕರೆಯಲಾಗಿದ್ದ ವಿಶೇಷ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರುವರಿ 7 ಮತ್ತು 18 ರಂದು ಮಾಜಿ ಮೇಯರ್ ಚಂದ್ರೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾದ ಸುಮಾರು ₹ 6 ಕೋಟಿ ವೆಚ್ಚದ 37 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.</p>.<p>ಸೆಪ್ಟೆಂಬರ್ 25ರಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾದ ₹ 17 ಕೋಟಿ ವೆಚ್ಚದ 82 ಕಾಮಗಾರಿಗಳಿಗೆ ಎಲ್ಲ ಸದಸ್ಯರು ಸರ್ವಾನುಮತದಿಂದ ಅನುಮೋದನೆ ನೀಡಿದ್ದಾರೆ ಎಂದರು.</p>.<p>ಇತ್ತೀಚಿಗೆ ಕರೆಯಲಾಗಿದ್ದ ₹ 24 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಎರಡು ಟೆಂಡರ್ ಪ್ರಕ್ರಿಯೆಗೂ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ. ಸ್ಥಳೀಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು ಸಹ ನಮ್ಮ ಹಾಗೂ ಸದಸ್ಯರ ಮನವಿ ಮೇರೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.</p>.<p>ಸ್ಥಳೀಯ ಶಾಸಕರ ಕ್ಷೇತ್ರಾಅಭಿವೃದ್ಧಿ ನಿಧಿಗೆ ರಾಜ್ಯ ಸರ್ಕಾರ ₹ 25 ಕೋಟಿ ಬಿಡುಗಡೆ ಮಾಡುತ್ತಿದ್ದು, ಇದರಲ್ಲಿ ಸುಮಾರು ₹ 6.25 ಕೋಟಿ ಅನ್ನು ನಗರದ ಅಭಿವೃದ್ಧಿಗೆ ಬಿಡುಗಡೆ ಮಾಡಲು ಪಾಲಿಕೆಯ ಅನುಮೋದನೆ ಕೋರಿದ್ದರು. ಅದರಂತೆ ಎಲ್ಲ ಸದಸ್ಯರು ಒಪ್ಪಿಗೆ ಸೂಚಿಸಿದ್ದು, ಅಗತ್ಯಕ್ಕೆ ತಕ್ಕಂತೆ ವಾರ್ಡ್ಗಳ ಅಭಿವೃದ್ಧಿಗೆ ಅನುದಾನ ವಿನಯೋಗಿಸಲಾಗುವುದು ಎಂದು ವಿವರಿಸಿದರು.</p>.<p>ಪಾಲಿಕೆ ಆಯುಕ್ತ ಕೃಷ್ಣಮೂರ್ತಿ, ಎಂಜಿನಿಯರ್ ಕವಿತಾ, ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>