<p>ಹಾಸನ: ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸೋಮವಾರ ನಗರದ ಲಕ್ಷ್ಮೀಪುರ ಬಡಾವಣೆ, ಎಸ್.ವಿ.ಎಂ. ಸ್ಕೂಲ್ ಹಿಂಭಾಗ ಹಾಗೂ ಪೆನ್ಷನ್ ಮೊಹಲ್ಲಾಗೆ ಭೇಟಿ ನೀಡಿ ಗಣತಿದಾರರೊಂದಿಗೆ ಮನೆಗೆ ಹೋಗಿ ಪರಿಶೀಲಿಸಿದರು.</p>.<p>ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ‘ಜನಗಣತಿ 2027 ದೇಶದಾದ್ಯಂತ ನಡೆಯುತ್ತಿದೆ. ಅದೇ ರೀತಿ ಹಾಸನ ಜಿಲ್ಲೆಯಲ್ಲಿ ಗಣತಿ ಕಾರ್ಯ ನಡೆಯುತ್ತಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಕೇಳುವ ಸರಳ 34 ಪ್ರಶ್ನೆಗಳಿಗೆ ಉತ್ತರ ನೀಡಿ, ಕೇವಲ 5 ನಿಮಿಷದಲ್ಲಿ ಗಣತಿ ಕಾರ್ಯ ಮುಗಿಯುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.</p>.<p>‘ಪ್ರಸ್ತುತ ಬಿಸಿಲು ಹೆಚ್ಚಾಗಿರುವುದರಿಂದ ಗಣತಿದಾರರು ಬೆಳಿಗ್ಗೆ 6 ಗಂಟೆಗೆ ಬರುತ್ತಾರೆ. ಅವರಿಗೆ ಮಾಹಿತಿ ನೀಡಿ’ ಎಂದ ಅವರು, ‘ಕೆಲವು ಕಡೆಗಳಲ್ಲಿ ಮಾಹಿತಿ ನೀಡಲು ಅನುಮಾನಿಸುತ್ತಿರುವುದು ಕಂಡುಬಂದಿದೆ. ಆ ರೀತಿ ಅನುಮಾನ ಬಂದಲ್ಲಿ ಗಣತಿದಾರರಿಗೆ ಗುರುತಿನ ಕಾರ್ಡ್ ನೀಡಲಾಗಿದೆ. ಅದರಲ್ಲಿ ಕ್ಯೂ ಆರ್ ಕೋಡ್ ಇದೆ. ಅದನ್ನು ಸ್ಕ್ಯಾನ್ ಮಾಡಿದರೆ ಗಣತಿದಾರರ ಹೆಸರು ಮತ್ತು ಇತರೆ ಮಾಹಿತಿ ದೊರೆಯಲಿದೆ’ ಎಂದು ಹೇಳಿದರು.</p>.<p>ಜನಗಣತಿ ದೇಶದ ಶಾಸನಬದ್ಧ ಕರ್ತವ್ಯ ಪ್ರತಿಯೊಬ್ಬ ನಾಗರಿಕರು ಗೌರವಯುತವಾಗಿ ಗಣತಿದಾರರಿಗೆ ಮಾಹಿತಿ ನೀಡಿ ಸಹಕರಿಸಿ ಎಂದು ತಿಳಿಸಿದ್ದಾರೆ.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ, ಮಹಾನಗರ ಪಾಲಿಕೆಯ ಆಯುಕ್ತ ಕೃಷ್ಣಮೂರ್ತಿ, ತಹಶೀಲ್ದಾರ್ ಗೀತಾ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-36-1558149550</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸೋಮವಾರ ನಗರದ ಲಕ್ಷ್ಮೀಪುರ ಬಡಾವಣೆ, ಎಸ್.ವಿ.ಎಂ. ಸ್ಕೂಲ್ ಹಿಂಭಾಗ ಹಾಗೂ ಪೆನ್ಷನ್ ಮೊಹಲ್ಲಾಗೆ ಭೇಟಿ ನೀಡಿ ಗಣತಿದಾರರೊಂದಿಗೆ ಮನೆಗೆ ಹೋಗಿ ಪರಿಶೀಲಿಸಿದರು.</p>.<p>ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ‘ಜನಗಣತಿ 2027 ದೇಶದಾದ್ಯಂತ ನಡೆಯುತ್ತಿದೆ. ಅದೇ ರೀತಿ ಹಾಸನ ಜಿಲ್ಲೆಯಲ್ಲಿ ಗಣತಿ ಕಾರ್ಯ ನಡೆಯುತ್ತಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಕೇಳುವ ಸರಳ 34 ಪ್ರಶ್ನೆಗಳಿಗೆ ಉತ್ತರ ನೀಡಿ, ಕೇವಲ 5 ನಿಮಿಷದಲ್ಲಿ ಗಣತಿ ಕಾರ್ಯ ಮುಗಿಯುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು’ ಎಂದು ಕೋರಿದರು.</p>.<p>‘ಪ್ರಸ್ತುತ ಬಿಸಿಲು ಹೆಚ್ಚಾಗಿರುವುದರಿಂದ ಗಣತಿದಾರರು ಬೆಳಿಗ್ಗೆ 6 ಗಂಟೆಗೆ ಬರುತ್ತಾರೆ. ಅವರಿಗೆ ಮಾಹಿತಿ ನೀಡಿ’ ಎಂದ ಅವರು, ‘ಕೆಲವು ಕಡೆಗಳಲ್ಲಿ ಮಾಹಿತಿ ನೀಡಲು ಅನುಮಾನಿಸುತ್ತಿರುವುದು ಕಂಡುಬಂದಿದೆ. ಆ ರೀತಿ ಅನುಮಾನ ಬಂದಲ್ಲಿ ಗಣತಿದಾರರಿಗೆ ಗುರುತಿನ ಕಾರ್ಡ್ ನೀಡಲಾಗಿದೆ. ಅದರಲ್ಲಿ ಕ್ಯೂ ಆರ್ ಕೋಡ್ ಇದೆ. ಅದನ್ನು ಸ್ಕ್ಯಾನ್ ಮಾಡಿದರೆ ಗಣತಿದಾರರ ಹೆಸರು ಮತ್ತು ಇತರೆ ಮಾಹಿತಿ ದೊರೆಯಲಿದೆ’ ಎಂದು ಹೇಳಿದರು.</p>.<p>ಜನಗಣತಿ ದೇಶದ ಶಾಸನಬದ್ಧ ಕರ್ತವ್ಯ ಪ್ರತಿಯೊಬ್ಬ ನಾಗರಿಕರು ಗೌರವಯುತವಾಗಿ ಗಣತಿದಾರರಿಗೆ ಮಾಹಿತಿ ನೀಡಿ ಸಹಕರಿಸಿ ಎಂದು ತಿಳಿಸಿದ್ದಾರೆ.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ, ಮಹಾನಗರ ಪಾಲಿಕೆಯ ಆಯುಕ್ತ ಕೃಷ್ಣಮೂರ್ತಿ, ತಹಶೀಲ್ದಾರ್ ಗೀತಾ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-36-1558149550</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>