<p><strong>ಹಾಸನ:</strong> ಒಲ್ಲದ ಮನಸ್ಸಿನಿಂದಲೇ ಹಾಸನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ನೀಡಲಾಗಿದೆಯೇ? ಅವರ ಬದಲು ಕೃಷ್ಣ ಬೈರೇಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆಯೇ ಎನ್ನುವ ಚರ್ಚೆಗಳು ಜೋರಾಗಿವೆ.</p>.<p>ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಬದಲು ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಜವಾಬ್ದಾರಿ ನೀಡಲಾಗಿದ್ದು, ಇಂತಹ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.</p>.<p>‘ನನಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬೇಡ. ಈ ಬಗ್ಗೆ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು, ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ’ ಎಂದು 8 ತಿಂಗಳ ಹಿಂದೆಯೇ ಸಚಿವ ರಾಜಣ್ಣ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಇದಾದ ನಂತರ ಅವರು ಜಿಲ್ಲೆಗೆ ಬರುವುದೇ ಅಪರೂಪ ಎನ್ನುವಂತಾಗಿತ್ತು.</p>.<p>ಸೂಕ್ತ ಸ್ಥಾನಮಾನ ದೊರಕಿಸದೇ ಇದ್ದುದರಿಂದ ಜಿಲ್ಲೆಯ ಕಾಂಗ್ರೆಸ್ ಮುಖಂಡರೂ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಅವರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರನ್ನು ಉಸ್ತುವಾರಿಯಿಂದ ಬದಲಿಸಬೇಕು ಎನ್ನುವ ಬೇಡಿಕೆಯನ್ನು ಇಟ್ಟಿದ್ದರು.</p>.<p>ಅದಾಗ್ಯೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವರನ್ನು ಬದಲಿಸುವ ಗೋಜಿಗೆ ಹೋಗಿರಲಿಲ್ಲ. ಇದೀಗ ಹುಡಾ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಕಾರ್ಯಕರ್ತರ ಅಸಮಾಧಾನ ಭುಗಿಲೆದ್ದಿದೆ.</p>.<p>‘ಅನ್ಯ ಕ್ಷೇತ್ರದವರನ್ನು ಹಾಸನ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನಾಗಿ ನೇಮಿಸಲು ಮುಖ್ಯಮಂತ್ರಿ ಮುಂದಾಗಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸ್ವತಃ ರಾಜಣ್ಣ ಅವರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚೆ ನಡೆಸಿದ್ದಾರೆ. ಆದರೆ, ಸಿದ್ದರಾಮಯ್ಯ ತಮ್ಮ ನಿರ್ಧಾರವನ್ನು ಬದಲಿಸಲು ಸಿದ್ಧರಿಲ್ಲ. ಹೀಗಾಗಿ ಸಚಿವ ರಾಜಣ್ಣ ಕೂಡ ಮುನಿಸುಗೊಂಡಿದ್ದಾರೆ. ಈ ಹಂತದಲ್ಲಿ ಹಾಸನ ಜಿಲ್ಲೆಗೆ ತೆರಳಿ, ಉಸ್ತುವಾರಿ ಸಚಿವ ಸ್ಥಾನ ನಿಭಾಯಿಸುವುದು ಕಷ್ಟ ಎನ್ನುವುದು ಸಚಿವ ರಾಜಣ್ಣ ಅವರಿಗೂ ಗೊತ್ತಾಗಿದೆ. ಹೀಗಾಗಿ ಕೃಷ್ಣ ಬೈರೇಗೌಡರಿಗೆ ಧ್ವಜಾರೋಹಣದ ಅವಕಾಶ ನೀಡಿರಬಹುದು’ ಎಂದು ಕಾಂಗ್ರೆಸ್ನ ಮುಖಂಡರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಈ ಮಧ್ಯೆ ಕೃಷ್ಣ ಬೈರೇಗೌಡರಿಗೂ ಹಾಸನ ಜಿಲ್ಲೆಯ ಉಸ್ತುವಾರಿ ವಹಿಸಿಕೊಳ್ಳುವ ಮನಸ್ಸಿಲ್ಲ. ‘ಹುಡಾ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಸ್ಪಷ್ಟ ನಿರ್ಧಾರ ಹೊರಬೀಳುವವರೆಗೆ ಅಧಿಕೃತವಾಗಿ ಉಸ್ತುವಾರಿ ಸಚಿವರನ್ನಾಗಿ ಘೋಷಿಸದಂತೆ ಮುಖ್ಯಮಂತ್ರಿ ಬಳಿಯೂ ಹೇಳಿಕೊಂಡಿದ್ದಾರೆ’ ಎನ್ನುವ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಒಲ್ಲದ ಮನಸ್ಸಿನಿಂದಲೇ ಹಾಸನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ನೀಡಲಾಗಿದೆಯೇ? ಅವರ ಬದಲು ಕೃಷ್ಣ ಬೈರೇಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆಯೇ ಎನ್ನುವ ಚರ್ಚೆಗಳು ಜೋರಾಗಿವೆ.</p>.<p>ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಬದಲು ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಜವಾಬ್ದಾರಿ ನೀಡಲಾಗಿದ್ದು, ಇಂತಹ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.</p>.<p>‘ನನಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬೇಡ. ಈ ಬಗ್ಗೆ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು, ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ’ ಎಂದು 8 ತಿಂಗಳ ಹಿಂದೆಯೇ ಸಚಿವ ರಾಜಣ್ಣ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಇದಾದ ನಂತರ ಅವರು ಜಿಲ್ಲೆಗೆ ಬರುವುದೇ ಅಪರೂಪ ಎನ್ನುವಂತಾಗಿತ್ತು.</p>.<p>ಸೂಕ್ತ ಸ್ಥಾನಮಾನ ದೊರಕಿಸದೇ ಇದ್ದುದರಿಂದ ಜಿಲ್ಲೆಯ ಕಾಂಗ್ರೆಸ್ ಮುಖಂಡರೂ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಅವರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರನ್ನು ಉಸ್ತುವಾರಿಯಿಂದ ಬದಲಿಸಬೇಕು ಎನ್ನುವ ಬೇಡಿಕೆಯನ್ನು ಇಟ್ಟಿದ್ದರು.</p>.<p>ಅದಾಗ್ಯೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವರನ್ನು ಬದಲಿಸುವ ಗೋಜಿಗೆ ಹೋಗಿರಲಿಲ್ಲ. ಇದೀಗ ಹುಡಾ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಕಾರ್ಯಕರ್ತರ ಅಸಮಾಧಾನ ಭುಗಿಲೆದ್ದಿದೆ.</p>.<p>‘ಅನ್ಯ ಕ್ಷೇತ್ರದವರನ್ನು ಹಾಸನ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನಾಗಿ ನೇಮಿಸಲು ಮುಖ್ಯಮಂತ್ರಿ ಮುಂದಾಗಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸ್ವತಃ ರಾಜಣ್ಣ ಅವರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚೆ ನಡೆಸಿದ್ದಾರೆ. ಆದರೆ, ಸಿದ್ದರಾಮಯ್ಯ ತಮ್ಮ ನಿರ್ಧಾರವನ್ನು ಬದಲಿಸಲು ಸಿದ್ಧರಿಲ್ಲ. ಹೀಗಾಗಿ ಸಚಿವ ರಾಜಣ್ಣ ಕೂಡ ಮುನಿಸುಗೊಂಡಿದ್ದಾರೆ. ಈ ಹಂತದಲ್ಲಿ ಹಾಸನ ಜಿಲ್ಲೆಗೆ ತೆರಳಿ, ಉಸ್ತುವಾರಿ ಸಚಿವ ಸ್ಥಾನ ನಿಭಾಯಿಸುವುದು ಕಷ್ಟ ಎನ್ನುವುದು ಸಚಿವ ರಾಜಣ್ಣ ಅವರಿಗೂ ಗೊತ್ತಾಗಿದೆ. ಹೀಗಾಗಿ ಕೃಷ್ಣ ಬೈರೇಗೌಡರಿಗೆ ಧ್ವಜಾರೋಹಣದ ಅವಕಾಶ ನೀಡಿರಬಹುದು’ ಎಂದು ಕಾಂಗ್ರೆಸ್ನ ಮುಖಂಡರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಈ ಮಧ್ಯೆ ಕೃಷ್ಣ ಬೈರೇಗೌಡರಿಗೂ ಹಾಸನ ಜಿಲ್ಲೆಯ ಉಸ್ತುವಾರಿ ವಹಿಸಿಕೊಳ್ಳುವ ಮನಸ್ಸಿಲ್ಲ. ‘ಹುಡಾ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಸ್ಪಷ್ಟ ನಿರ್ಧಾರ ಹೊರಬೀಳುವವರೆಗೆ ಅಧಿಕೃತವಾಗಿ ಉಸ್ತುವಾರಿ ಸಚಿವರನ್ನಾಗಿ ಘೋಷಿಸದಂತೆ ಮುಖ್ಯಮಂತ್ರಿ ಬಳಿಯೂ ಹೇಳಿಕೊಂಡಿದ್ದಾರೆ’ ಎನ್ನುವ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>