<p>ಹಾಸನ: ರೈತರಿಗೆ ನಿರಂತರ ಮೂರು-ಫೇಸ್ ವಿದ್ಯುತ್ ಪೂರೈಕೆ ಮಾಡದಿರುವುದನ್ನು ಖಂಡಿಸಿ ಹಾಗೂ ಲೈನ್ಮನ್ಗಳ ದುರ್ವರ್ತನೆ ವಿರುದ್ಧ ಏ.1ರಂದು ಹಳೇಬೀಡಿನ ಕೆಇಬಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆರ್ಪಿಐ ರಾಜ್ಯ ಘಟಕದ ಅಧ್ಯಕ್ಷ ಆರ್ಪಿಐ ಸತೀಶ್ ತಿಳಿಸಿದ್ದಾರೆ.</p>.<p>‘ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿ ಗಂಗೂರು ಎಂಯುಎಸ್ಎಸ್ ಘಟಕದ ವ್ಯಾಪ್ತಿಯ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಪ್ರತಿದಿನ ಕೇವಲ 2-3 ಗಂಟೆಗಳಷ್ಟೇ ವಿದ್ಯುತ್ ನೀಡಲಾಗುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.</p>.<p>ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರ ನಿರಂತರ ಮೂರು-ಫೇಸ್ ವಿದ್ಯುತ್ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಇದುವರೆಗೂ ಆ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದರು.</p>.<p>‘ಹಳೇಬೀಡಿನ ಹೊಯ್ಸಳ ವೃತ್ತದಿಂದ ಕೆಇಬಿ ಕಚೇರಿವರೆಗೆ ಪ್ರತಿಭಟನೆ ನಡೆಯಲಿದ್ದು, ಸ್ಥಳೀಯ ರೈತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.</p>.<p>ಗಂಗೂರು ಮಹೇಶ್, ಮೂಡಲಗಿರಿ ಗೌಡ, ರತೀಶ್ ಅಪ್ಪ ಗೌಡನಹಳ್ಳಿ, ಹಳೇಬೀಡು ಲಿಂಗರಾಜು, ಗಂಗೂರು ರಂಗಸ್ವಾಮಿ ಜಿ.ಆರ್. ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-36-479248973</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ರೈತರಿಗೆ ನಿರಂತರ ಮೂರು-ಫೇಸ್ ವಿದ್ಯುತ್ ಪೂರೈಕೆ ಮಾಡದಿರುವುದನ್ನು ಖಂಡಿಸಿ ಹಾಗೂ ಲೈನ್ಮನ್ಗಳ ದುರ್ವರ್ತನೆ ವಿರುದ್ಧ ಏ.1ರಂದು ಹಳೇಬೀಡಿನ ಕೆಇಬಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆರ್ಪಿಐ ರಾಜ್ಯ ಘಟಕದ ಅಧ್ಯಕ್ಷ ಆರ್ಪಿಐ ಸತೀಶ್ ತಿಳಿಸಿದ್ದಾರೆ.</p>.<p>‘ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿ ಗಂಗೂರು ಎಂಯುಎಸ್ಎಸ್ ಘಟಕದ ವ್ಯಾಪ್ತಿಯ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಪ್ರತಿದಿನ ಕೇವಲ 2-3 ಗಂಟೆಗಳಷ್ಟೇ ವಿದ್ಯುತ್ ನೀಡಲಾಗುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.</p>.<p>ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಸರ್ಕಾರ ನಿರಂತರ ಮೂರು-ಫೇಸ್ ವಿದ್ಯುತ್ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಇದುವರೆಗೂ ಆ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದರು.</p>.<p>‘ಹಳೇಬೀಡಿನ ಹೊಯ್ಸಳ ವೃತ್ತದಿಂದ ಕೆಇಬಿ ಕಚೇರಿವರೆಗೆ ಪ್ರತಿಭಟನೆ ನಡೆಯಲಿದ್ದು, ಸ್ಥಳೀಯ ರೈತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.</p>.<p>ಗಂಗೂರು ಮಹೇಶ್, ಮೂಡಲಗಿರಿ ಗೌಡ, ರತೀಶ್ ಅಪ್ಪ ಗೌಡನಹಳ್ಳಿ, ಹಳೇಬೀಡು ಲಿಂಗರಾಜು, ಗಂಗೂರು ರಂಗಸ್ವಾಮಿ ಜಿ.ಆರ್. ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-36-479248973</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>